ಶರಾವತಿ ಸಂತ್ರಸ್ಥರು ಒಂದು ಇಂಚು ಜಾಗ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ – ಹರತಾಳು ಹಾಲಪ್ಪ|hinneera habba

ಅದ್ದೂರಿಯಾಗಿ ಜರುಗಿದ ಶರಾವತಿ ಹಿನ್ನೀರ ಮೇಳ – ಶರಾವತಿ ಆರತಿ

ಶರಾವತಿ ಸಂತ್ರಸ್ತರು ಒಂದು ಇಂಚು ಜಾಗವೂ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ ಸರ್ಕಾರ ರೈತರ ಪರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು.




ಹೊಸನಗರ ತಾಲ್ಲೂಕಿನ ಪಟಗುಪ್ಪ ಸೇತುವೆ ಬಳಿ ನಡೆದ ಶರಾವತಿ ಹಿನ್ನೀರ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ, ರೈತರು ಸರ್ಕಾರದ ಮೇಲೆ ನಂಬಿಕೆ ಇಡಬೇಕು. ಯಾವುದೇ ಕಾರಣಕ್ಕೂ ರೈತರಲ್ಲಿ ಆತಂಕ ಬೇಡ. ರೈತರನ್ನು ಒಕ್ಕಲೇಬ್ಬಿಸಲು ಬಿಡಲ್ಲ. ಸದ್ಯದಲ್ಲೆ ಶುಭಸುದ್ದಿ ನೀಡಲಿದ್ದೇವೆ. ರೈತರ ಸಮಸ್ಯೆ ಉಲ್ಬಣವಾಗಲು ಕಾಂಗ್ರೆಸ್ ನೇರ ಕಾರಣ. ಅಧಿಕಾರ ಇದ್ದಾಗ ಸಮಸ್ಯೆ ಬಗೆಹರಿಸದೇ ಈಗ ನಮ್ಮ ಮೇಲೆ ಗೂಬೆ ಕೂರಿಸಲಾಗುತ್ತಿದೆ ಎಂದರು.

ಶರಾವತಿ ನದಿಗೆ ಸೇತುವೆ ಕಟ್ಟುವಲ್ಲಿ ವಿಶೇಷ ಆಸಕ್ತಿ ತೋರಿದ್ದೇನೆ. ಇದೀಗ ಮೂರು ಸೇತುವೆ ಆಗುತ್ತಿದೆ. ಇದು ನಮ್ಮ ಸರ್ಕಾರದ ಹೆಮ್ಮೆ ಆಗಿದೆ ಎಂದರು.


ಹಿನ್ನೀರ ಹಬ್ಬದ ವಿಚಾರದಲ್ಲಿ ವಿರೋಧಿಗಳು ತಮ್ಮ ಮಾತಿನ ಚಪಲತೆ ತೋರಿದ್ದಾರೆ. ನಾಡಿಗೆ ಬೆಳಕು ನೀಡಿದ ಖ್ಯಾತಿ ಶರಾವತಿಗೆ ಇದೆ. ಶರಾವತಿ ನದಿ ದಡದಲ್ಲಿ ಇದ್ದ ನಮಗೆ ಹಬ್ಬ ಆಚರಿಸುವ ಸಂಭ್ರಮ ಇಲ್ಲವೆ ? ನಮ್ಮ ಮಕ್ಕಳು ಏನು ಮಾಡಿದ್ದಾರೆ ? ಇಲ್ಲಿ ಸೇರಿದ ಜನರು ಸಂಭ್ರಮ ಪಡುತ್ತಿದ್ದಾರೆ. ಇಷ್ಟು ಜನ ಕಲೆತು ಸಂಭ್ರಮ ಪಡುವ ಹಬ್ಬದ ಆಚರಣೆ ಕಣ್ಣೀರು ಹೇಗೆ ಆಗುತ್ತದೆ ? ಎಂದು ಪ್ರಶ್ನಿಸಿ ‘ಹಿನ್ನೀರನ್ನು ಪನ್ನೀರು ಮಾಡಿ ತೋರಿಸುತ್ತೇವೆ’ ಎಂದರು.




ಅಂದು ಶರಾವತಿಗೆ ಮೊದಲ ಸೇತುವೆಯಾಗಿ ಸಿಗಂದೂರು ಬಳಿಯ ಮಡೆನೂರು ಹಳ್ಳಿಯಲ್ಲಿ ಸೇತುವೆ ಕಟ್ಟಿದ್ದರು. ಲಿಂಗನಮಕ್ಕಿ – ಮಡೆನೂರು ಸೇತುವೆ ಸೇರಿ ಈ ನದಿಗೆ ಸೇತುವೆ ಮೇಲೊಂದು ಸೇತುವೆಗಳಾಗಿ ಈ ಹಾದಿಗಳೆಲ್ಲಾ ಮುಳುಗಿ ಹೋದವು‌. ನಂತರ ಈ ಸಂಪರ್ಕವೇ ಕಡಿದು ಹೋಯ್ತು. ನಂತರ ಹೊಸ ಹೆದ್ದಾರಿಯನ್ನ ಬಟ್ಟೆಮಲ್ಲಪ್ಪ ಎಂಬ ಊರಿನ ಮೂಲಕ‌ ಸಾಗರಕ್ಕೆ ಸಂಪರ್ಕ ಸಾಧಿಸುವಂತೆ ಮಾಡಿದರು. ಈ ಹೆದ್ದಾರಿ ಸುತ್ತು ಹಾಕಿ ಹೋದರೆ 42 ಕಿಲೋಮೀಟರ್ ಹೆಚ್ಚುವರಿ ಕ್ರಮಿಸಬೇಕಿತ್ತು. ನಾನು ಮೊದಲ ಸಲ ಹೊಸನಗರ ಶಾಸಕನಾದಗ ಜನ ಪಟಗುಪ್ಪ ಸೇತುವೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಈ ಭಾಗದಲ್ಲಿ ಜನ ಸೇತುವೆ ನಿರೀಕ್ಷೆ ಮರೆತ್ತಿದ್ದರು. ‘ಈ ಸೇತುವೆ ಆಗೋದೂ ಒಂದೇ ನಮ್ಮ ಮನೆ ಹುಡುಗನಿಗೆ ಬುದ್ಧಿ ಬರೋದೂ ಒಂದೇ’ ಎಂದು ಆಡಿಕೊಳ್ಳುತ್ತಿದ್ದರು. ನಾನು ಸವಾಲಾಗಿ ಸ್ವೀಕರಿಸಿ ನಿರ್ವಹಿಸಿದೆ. ಅಂದು ಉಪಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ‌ಒತ್ತಾಸೆಯಾಗಿ ನಿಂತರು ಎಂದು ಹಾಲಪ್ಪ ಹೇಳಿದರು.


ಕಾರ್ಯಕ್ರಮಕ್ಕೂ ಮೊದಲು ಪಟಗುಪ್ಪ ಸೇತುವೆ ದಡದಲ್ಲಿ ಶರಾವತಿ ಆರತಿ ಕಾರ್ಯಕ್ರಮ ನಡೆಯಿತು.

ಶರಾವತಿ ಹಿನ್ನೀರ ಹಬ್ಬದ ಅಂಗವಾಗಿ ಬಳೆ ಕೋಲಾಟ,ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಮಲೆನಾಡಿನ ವಿಶಿಷ್ಟ ಖಾದ್ಯಗಳ ಆಹಾರ ಮೇಳವನ್ನು ಆಯೋಜಿಸಲಾಗಿತ್ತು.

ಸಭೆಯಲ್ಲಿ ಮಾಜಿ ಶಾಸಕ ಬಿ.ಸ್ವಾಮಿರಾವ್, ಗಣಪತಿ ಬೆಳಗೋಡು, ಸುರೇಶ್ ಸ್ವಾಮಿರಾವ್,ವೀರೇಶ್ ಆಲುವಳ್ಳಿ, ಲೋಕನಾಥ್, ಗಣೇಶ್ ಪ್ರಸಾದ್ ಇದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

2 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

1 day ago