ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು – ಕಾಂಗ್ರೆಸ್
ಪಟಗುಪ್ಪೆಯಲ್ಲಿ ಶರಾವತಿ ಹಿನ್ನೀರು ಹಬ್ಬ ಆಚರಣೆಗೆ ಕಾಂಗ್ರೆಸ್ ಪಕ್ಷದ ವಿರೋಧ
ಹೊಸನಗರ : ಶಾಸಕ ಎಚ್. ಹಾಲಪ್ಪ ಹರತಾಳು ಅಧ್ಯಕ್ಷತೆಯಲ್ಲಿ ಮಾ.೪ರಂದು ತಾಲೂಕಿನ ಪಟಗುಪ್ಪೆಯಲ್ಲಿ ಏರ್ಪಡಿಸಿರುವ ಶರಾವತಿ ಹಿನ್ನೀರು ಹಬ್ಬ ಎನ್ನುವ ಕರ್ಯಕ್ರಮದ ಆಯೋಜನೆಯು ಆಯೋಜಕರ ವಿಕೃತ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ ಆರೋಪಿಸಿದ್ದಾರೆ.
ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಶರಾವತಿ ಮುಳುಗಡೆ ಎನ್ನುವುದು ಈ ಭಾಗದ ಜನರಿಗೆ ಕರಾಳ ದಿನವಾಗಿದೆ. ಹೊಸನಗರ ಹಾಗೂ ಸಾಗರ ತಾಲೂಕಿನ ಜನತೆಯ ಬದುಕಿಗೆ ಶಾಪವಾಗಿದೆ. ತಲೆತಲಾಂತರದಲ್ಲಿ ಈ ಭಾಗದಲ್ಲಿ ನೆಲೆಸಿದ್ದವರ ಮನೆ, ಜಮೀನು ಬದುಕನ್ನು ಕಿತ್ತುಕೊಂಡ ದುರಂತ ಘಟನೆ ಇದು. ಇಂತಹ ಮುಳುಗಡೆಯ ನೆಪವಾಗಿಸಿಕೊಂಡು, ಮುಳುಗಡೆಯಾಗಿ ೬೦ ವರ್ಷ ಕಳೆಯಿಂದು ಎಂದು ಫ್ಲೆಕ್ಸ್ ಹಾಕಿ ಶರಾವತಿ ಹಿನ್ನೀರ ಹಬ್ಬ ಎಂದು ಸಂಭ್ರಮಿಸುವ ಆಚರಣೆಯನ್ನು ಕೈಗೊಂಡಿರುವುದು ವಿಪರ್ಯಾಸವಷ್ಟೇ ಎಂದರು.
ಮುಳುಗಡೆ ಸಂದರ್ಭದಲ್ಲಿ ಅನುಭವಿಸಿದ ಸಂಕಷ್ಟವನ್ನು ಯುವ ಪೀಳಿಗೆಯವರಿಗೆ ಮನವರಿಕೆ ಮಾಡಿಕೊಡಬೇಕು. ಆದರೆ ಸಂಭ್ರಮಾಚರಣೆ ಮೂಲಕ ಇತಿಹಾಸವನ್ನು ಮರೆಸುವ ಯತ್ನ ಇದಾಗಿದೆ. ಅಂದು ಸರ್ವಸ್ವವನ್ನೂ ಕಳೆದುಕೊಂಡು ಬೀದಿಗೆ ಬಂದ ಸಾವಿರಾರು ಕುಟುಂಬಗಳಿಗೆ ಇನ್ನೂ ನೆಲೆ ಕಂಡುಕೊಳ್ಳಲಾಗಿಲ್ಲ. ಸಂತ್ರಸ್ಥರಿಗೆ ಪರಿಹಾರ ಸಿಕ್ಕಿಲ್ಲ. ತಮ್ಮ ಅಜ್ಜ, ಅಜ್ಜಿ, ತಂದೆ ತಾಯಂದಿರು ಅನುಭವಿಸಿದ ನೋವಿನ ದಿನಗಳನ್ನು ನೆನೆಸಿಕೊಂಡಲ್ಲಿ ಇದು ಸಂತಸ ಪಡುವ ಹಬ್ಬವಾಗಲು ಸಾಧ್ಯವೇ ಇಲ್ಲ. ಶರಾವತಿ ಕಣ್ಣೀರ ಹಬ್ಬ ಎಂದರೆ ಹೆಚ್ಚು ಸೂಕ್ತವಾಗುತ್ತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಂದು ವೇಳೆ ಇಂತದ್ದೊಂದು ಕರ್ಯಕ್ರಮವನ್ನು ಆಯೋಜಿಸುವುದೇ ಆಗಿದ್ದಲ್ಲಿ, ನಾಡಿನ ಹಿರಿಯ ಸಾಹಿತಿ ನಾ. ಡಿಸೋಜ ಅವರಂತ ಹಲವು ಹಿರಿಯರು, ಮುಳುಗಡೆ ಸಂತ್ರಸ್ಥರ ಮಾರ್ಗದರ್ಶನ, ಸಲಹೆ ಪಡೆಯಬಹುದಿತ್ತು. ಸ್ವತಃ ಮುಳುಗಡೆ ಸಂತ್ರಸ್ಥರಾದ ಶಾಸಕ ಹಾಲಪ್ಪ ಅವರೂ ಸಹಾ ಇದರಲ್ಲಿ ಭಾಗಿಯಾಗುತ್ತಿರುವುದು ದುರದೃಷ್ಠಕರ ಎಂದ ಅವರು ತಮ್ಮ ಹಿಂದಿನ ತಲೆಮಾರಿನ ಜನರು ಅನುಭವಿಸಿದ ನೋವಿನ ನೆನಪಿನಲ್ಲಿ ಕೆಲ ಯುವಕರ ತಂಡ ಈಗ ಸಂಭ್ರಮಾಚರಣೆ ಮಾಡಲು ಮುಂದಾಗಿರುವುದು ಎಷ್ಟರ ಮಟ್ಟಿಗೆ ಸಮಂಜಸ ಎಂದು ಪ್ರಶ್ನಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್