ಶಿವಮೊಗ್ಗ: ಬೆಂಗಳೂರಿನಿಂದ ಹೆಂಡತಿ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದ ಬ್ಯಾಂಕ್ ಮ್ಯಾನೇಜರ್ ರೈಲ್ವೆ ಬೋಗಿಯಲ್ಲಿ ಶೌಚಾಲಯದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ದುರ್ದೈವಿ ಅಶೋಕ್ ಚೌಧರಿ ಅವರು ಶಿವಮೊಗ್ಗದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಅಸ್ಸೋಂ ಮೂಲದವರಾಗಿದ್ದ ಅಶೋಕ್ ಚೌಧರಿ ಅವರು ಅಸ್ಸೋಂ ನಿಂದ ಬೆಂಗಳೂರಿಗೆ ಬಂದಿದ್ದ ತಮ್ಮ ಹೆಂಡತಿ ಹಾಗೂ ಮಕ್ಕಳನ್ನು ಕರೆ ತರಲು ನಿನ್ನೆ ಬೆಳಗ್ಗೆ ಶಿವಮೊಗ್ಗ-ಯಶವಂತಪುರದ ಇಂಟರಸಿಟಿ ರೈಲಿನ ಎಸಿ ಬೋಗಿಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ರೈಲಿನಲ್ಲಿಯೇ ಶೌಚಾಲಯಕ್ಕೆ ತೆರಳಿದ ಅಶೋಕ್ ಅವರು ಹೃದಯಾಘಾತದಿಂದ ಅಲ್ಲೇ ಕುಸಿದು ಬಿದ್ದಿದ್ದಾರೆ.
ಇಂಟರಸಿಟಿ ರೈಲು ಇಂದು ಬೆಳಗ್ಗೆ ಯಶವಂತಪುರವನ್ನು ಬಿಟ್ಟು ಮಧ್ಯಾಹ್ನ ಶಿವಮೊಗ್ಗ ತಲುಪಿದ್ದು. ಈ ವೇಳೆ ರೈಲು ಸ್ವಚ್ಛಗೊಳಿಸುವ ಸಿಬ್ಬಂದಿ ಸ್ವಚ್ಛತೆ ಮಾಡಲು ಹೋದಾಗ ಎಸಿ ರೂಮ್ನ ಶೌಚಾಲಯವು ಲಾಕ್ ಆಗಿತ್ತು. ಇದರಿಂದ ಅನುಮಾನಗೊಂಡ ಸಿಬ್ಬಂದಿ ರೈಲ್ವೆ ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಬಾಗಿಲು ಒಡೆದು ನೋಡಿದಾಗ ಅಶೋಕ್ ಚೌಧರಿ ಮೃತಪಟ್ಟಿದ್ದರು.
ಮೃತದೇಹವನ್ನು ರೈಲ್ವೆ ಪೊಲೀಸರು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…