ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿರುವ ಡ್ರಗ್ಸ್ ದಂಧೆ ಇದೀಗ ಮಲೆನಾಡಿಗೂ ವ್ಯಾಪಿಸಿದೆ.
ಮಂಗಳೂರಿನಿಂದ ಮಾದಕ ದ್ರವ್ಯಗಳನ್ನು ತಂದು ಸಾಗರದಲ್ಲಿ ಮಾರಲು ಮಂದಾಗಿದ್ದ ತಂಡವೊಂದನ್ನು ಸಾಗರ ನಗರ ಠಾಣೆ ಪೊಲೀಸರು ಹತ್ತಿಕ್ಕಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಇದರ ಹಿಂದಿರುವ ಒಂದು ಕೊಲೆ ಯತ್ನದ ಪ್ಲ್ಯಾನ್ ಕೂಡಾ ಬಯಲಾಗಿದೆ.
ಮಂಗಳೂರಿನಿಂದ ಮಾದಕ ವಸ್ತು ತಂದು ಸಾಗರದಲ್ಲಿ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಾಗರದ ಅಣಲೆಕೊಪ್ಪ ಬಳಿ ಪೊಲೀಸರು ದಾಳಿ ಸಂಘಟಿಸಿದ್ದರು. ಈ ವೇಳೆ, ಸೃಜನ್ ಶೆಟ್ಟಿ, ತಿಲಕ್ ಎಂಬಿಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ 1 ಕೆ.ಜಿ. ಮಾದಕ ವಸ್ತು, 4 ಮೊಬೈಲ್, ಸ್ವಿಪ್ಟ್ ಡಿಜೈರ್ ಕಾರು, ಕಾರಿನಲ್ಲಿದ್ದ 8 ಲಾಂಗ್ ವಶಕ್ಕೆ ಪಡೆಯಲಾಗಿದೆ.
ಬಂಧಿತ ಸೃಜನ್ ಶೆಟ್ಟಿ ವಿಚಾರಣೆ ನಂತರ ಓರ್ವನ ಕೊಲೆ ಸಂಚು ಕೂಡಾ ಬಯಲಾಗಿದೆ. ಸಹಚರರ ಜೊತೆ ಸೇರಿ ವ್ಯಕ್ತಿಯೊಬ್ಬನ ಹತ್ಯೆಗೆ ಸೃಜನ್ ಶೆಟ್ಟಿ ಸಂಚು ರೂಪಿಸಿದ್ದ ಎನ್ನಲಾಗಿದೆ. ಕೊಲೆ ಮಾಡುವ ಉದ್ದೇಶದಿಂದ ಲಾಂಗ್ ಇಟ್ಟುಕೊಂಡಿರುವುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ.
ಆರೋಪಿಗಳ ಬಂಧನ ಮತ್ತು ಲಾಂಗ್ಗಳನ್ನು ವಶಪಡಿಸಿಕೊಂಡಿರುವುದರಿಂದ ಕೊಲೆ ಸಂಚು ವಿಫಲಗೊಂಡಂತಾಗಿದೆ. ಆದರೆ, ಆರೋಪಿಗಳು ಯಾರನ್ನು ಕೊಲೆ ಮಾಡಲು ಮುಂದಾಗಿದ್ದರು ಎಂಬ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಪೊಲೀಸರು
ಬಂಧಿತ ಆರೋಪಿಗಳನ್ನು ಸಾಗರ ನ್ಯಾಯಾಲಯಕ್ಕೆ ಒಪ್ಪಿಸಿದ ಪೊಲೀಸರು ಇದೀಗ ಹೆಚ್ಚಿನ ವಿಚಾರಣೆಗಾಗಿ ಸೃಜನ್ ಶೆಟ್ಟಿಯನ್ನು ವಶಕ್ಕೆ ಪಡೆಯಲಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್