ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಸುರೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ನಗರದ ರೈಲ್ವೆ ಫ್ಲೈ ಓವರ್ ಬಳಿಯ ಸಂಗೊಳ್ಳಿ ರಾಯಣ್ಣ ಬಳಿ ಸ್ನೇಹಿತರಿಬ್ಬರು ಪಾರ್ಟಿ ಮಾಡಿದ್ದರು.ಹಿಂದಿರುಗುವಾಗ ಸುರೇಶ್ ಗೆ ಅಪರಿಚಿತರು ಪಲ್ಸರ್ ಬೈಕ್ ನಲ್ಲಿ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ.
ಈ ವೇಳೆ ಆತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೀಗ ಚಿಕಿತ್ಸೆ ಫಲಕಾರಿಯಾದೇ ಸುರೇಶ್ ಮೃತಪಟ್ಟಿದ್ದಾನೆ. ಆದರೆ ಮೃತ ಸುರೇಶ್ ಮೈಮೇಲೆ ಅಪಘಾತದ ಯಾವುದೇ ಗಾಯಗಳಿಲ್ಲ. ಈ ನಡುವೆ ಆತ ಹೇಗೆ ಮೃತಪಟ್ಟನು ಎನ್ನುವ ಅನುಮಾನ ಕಾಡುತ್ತಿದೆ.
ಮೃತಪಟ್ಟ ಸುರೇಶ್ ಶಿವಮೊಗ್ಗದ ಶರಾವತಿ ನಗರದಲ್ಲಿ ತನ್ನ ಸಂಬಂಧಿಕರ ಮನೆಯಲ್ಲಿ ಇದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತಿದ್ದನು.
ಒಟ್ಟಾರೆಯಾಗಿ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ ಇದ್ದು ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…