ಶಿವಮೊಗ್ಗದಲ್ಲಿ ಮತ್ತೊಮ್ಮೆ ರೌಡಿಗಳ ಅಟ್ಟಹಾಸ ಸದ್ದು ಮಾಡಿದೆ.ಚೀಲೂರಿನ ಬೋವಿನ ಕೋವಿಯ ಬಳಿಯಲ್ಲಿ ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲೆ ದಾಳಿ ನಡೆದಿದ್ದು ಈ ಪೈಕಿ ಆಂಜನೇಯ ಎಂಬಾತ ಸಾವನ್ನಪ್ಪಿದ್ದು, ಮಧು ಎಂಬಾತನ ಸ್ಥಿತಿ ಗಂಭೀರವಾಗಿದೆ.
ಮಧು ಮತ್ತು ಆಂಜನೇಯ ಹಂದಿ ಅಣ್ಣಿ ಕೊಲೆ ಕೇಸಿನಲ್ಲಿ ಕೋರ್ಟ್ಗೆ ಅಟೆಂಡ್ ಆಗಿ ವಾಪಸ್ ಬರುತ್ತಿದ್ದರು. ಬೈಕ್ ನಲ್ಲಿ ಬರುತ್ತಿದ್ದ ಇವರಿಬ್ಬರನ್ನ ಸ್ಕಾರ್ಪಿಯೋ ಗಾಡಿಯೊಂದು ಫಾಲೋ ಮಾಡಿ ಬೋವಿನ ಕೋವಿ ಬಳಿ ಮಧು ಮತ್ತು ಆಂಜನೇಯನ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ. ಈ ವೇಳೆ ಆಂಜನೇಯ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಇಲ್ಲಿ ಅಟ್ಯಾಕ್ ಆಗುವುದಕ್ಕೂ ಮೊದಲು ಶಿವಮೊಗ್ಗ ಕೋರ್ಟ್ ಸೇರಿದಂತೆ ಶಿವಮೊಗ್ಗ ನಗರದ ಕೆಲೆವೆಡೆ ಮಧು ಹಾಗೂ ಆಂಜನೇಯನನ್ನು ಸ್ಕಾರ್ಪಿಯೋ ಗಾಡಿಯಲ್ಲಿ ಫಾಲೋ ಮಾಡಲಾಗಿತ್ತು ಎಂಬ ಮಾಹಿತಿಯಿದೆ. ಅಂತಿಮವಾಗಿ ಚೀಲೂರಿನ ಗೋವಿನ ಕೋವಿಯ ಬಳಿಯಲ್ಲಿ ಮಧು ಮತ್ತು ಆಂಜನೇಯರಿದ್ದ ಬೈಕ್ಗೆ ಸ್ಕಾರ್ಪಿಯೋ ಮೂಲಕ ಡಿಕ್ಕಿ ಹೊಡೆಸಿ ಅವರ ಮೇಲೆ ದಾಳಿ ಮಾಡಲಾಗಿದೆ.
ಈ ಮಧ್ಯೆ ಮಧು ಹೇಗೆ ತಪ್ಪಿಸಿಕೊಂಡಿದ್ದ ಅನ್ನುವುದೇ ಅಚ್ಚರಿಯಾಗಿದೆ. ಇಬ್ಬರನ್ನು ಎತ್ತಬೇಕೆಂದೇ ಟೀಂ ಹೊರಟಿತ್ತು. ಇಬ್ಬರ ಮೇಲೆಯು ದಾಳಿ ಮಾಡಿದೆ ಆದಾಗ್ಯು ಮಧು ಅದೃಷ್ಟವಶಾತ್ ಬದುಕುಳಿದಿದ್ಧಾನೆ.
ಇನ್ನೂ ಈ ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಳ್ಳುತ್ತಿದ್ದು, ಇದೊಂದು ಪೂರ್ವ ಯೋಜಿತ ಕೃತ್ಯ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಮಧು ಮತ್ತು ಆಂಜನೇಯ ಇಬ್ಬರು ಹರಿಹರದ ಬಾನುವಳ್ಳಿಯವರು. ಇವತ್ತು ಕೋರ್ಟ್ಗೆ ಹಾಜರಾಗಲು ಬಂದಿದ್ದರು. ಈ ಮಾಹಿತಿಯನ್ನು ಸಹ ಹೊಂದಿದ್ದ ದುಷ್ಕರ್ಮಿಗಳು, ಅವರನ್ನ ಫಾಲೋ ಮಾಡಿ ದಾಳಿ ನಡೆಸಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಈ ಬಗ್ಗೆ ಇನ್ನಷ್ಟೆ ತನಿಖೆಯಿಂದ ಮತ್ತಷ್ಟು ಸತ್ಯಗಳು ಆಚೆ ಬರಬೇಕಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್