ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕಾಳಿಕಾಪುರ ಗ್ರಾಮದ ಸರ್ವೆನಂಬರ್ 32/1ರಲ್ಲಿ ಬಿ. ಸೀನಪೂಜಾರಿ ಬಿನ್ ಮಾಚಪೂಜಾರಿಯವರ ಅಡಿಕೆ ಮರಕ್ಕೆ ಬೆಂಕಿ ತಗುಲಿ ಸುಮಾರು 600 ಅಡಿಕೆ ಮರಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ.
ಸೀನಪೂಜಾರಿಯವರು ತಮ್ಮ ಸ್ವಂತ ಜಾಗದಲ್ಲಿ ಸುಮಾರು 600 ಅಡಿಕೆ ಸಸಿಗಳನ್ನು ನೆಟ್ಟಿದ್ದು ಅದಕ್ಕೆ ಡ್ರಿಪ್ ಪೈಪ್ ಹಾಕಲಾಗಿತ್ತು. ಏಕಾಏಕಿ ಗಾಳಿಯ ಮೂಲಕ ಬೆಂಕಿ ತಗಲಿದ್ದರಿಂದ 600 ಅಡಿಕೆ ಮರಗಳು ಸುಟ್ಟು ಕರಕಲಾಗುವ ಜೊತೆಗೆ ನೀರಿನ ಸೌಲಭ್ಯಕ್ಕಾಗಿ ಮಾಡಿದ ಡ್ರಿಪ್ ಪೈಪ್ ಸಹ ಸುಟ್ಟು ಹೋಗಿದೆ.
ಸುಮಾರು ಅಂದಾಜು 2 ಲಕ್ಷ ರೂ.ನಷ್ಟು ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.
ಹೊಸನಗರ ಆಗ್ನಿ ಶಾಮಕ ದಳದ ಸಿಬ್ಬಂದಿಯವರು ಸಮಯಕ್ಕೆ ಸರಿಯಾಗಿ ಆಗಮಿಸಿ ಮುಂದೆ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಕಸಬಾ ಗ್ರಾಮ ಆಡಳಿತಾಧಿಕಾರಿ ಕೌಶಿಕ್ ಹಾಗೂ ಗ್ರಾಮ ಸಹಾಯಕ ಅಶೋಕ್ರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅನಾಹುತವಾಗಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರುವುದಾಗಿ ಹಾಗೂ ಅನಾವೃಷ್ಠಿ ಪರಿಹಾರಕ್ಕೆ ಅರ್ಜಿ ಸಲ್ಲಿಸುವುದಕ್ಕೆ ತಿಳಿಸಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್