ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮದ ವಾಸಿಯಾದ ಪ್ರದೀಪ ಬಿನ್ ಸುಬ್ಬಪ್ಪ ಈತನು ಅಕ್ರಮವಾಗಿ ಮದ್ಯ ಹೊಂದಿ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಹೊಸನಗರ ಅಬಕಾರಿ ಇಲಾಖೆಯವರು ದಾಳಿ ನಡೆಸಿ ಸುಮಾರು 09 ಲೀಟರ್ ಅಕ್ರಮವಾಗಿ ಮಾರಾಟ ಮಾಡುವ ಸಲುವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಪ್ರದೀಪ್ ವಿರುದ್ದ ಕೇಸ್ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಬಕಾರಿ ಆಯುಕ್ತರು ಬೆಂಗಳೂರು ಹಾಗೂ ನಾಗರಾಜಪ್ಪ ಟಿ ಅಬಕಾರಿ ಜಂಟಿ ಆಯುಕ್ತರು ಮಂಗಳೂರು ವಿಭಾಗರವರ ಮಾರ್ಗದರ್ಶನದಲ್ಲಿ ಕ್ಯಾಪ್ಟನ್ ಅಜಿತ್ ಕುಮಾರ್ ಅಬಕಾರಿ ಉಪ ಆಯುಕ್ತರು ಶಿವಮೊಗ್ಗ ಜಿಲ್ಲೆ ರವರ ನಿರ್ದೇಶನದಂತೆ ಹಾಗೂ ಶಿವ ಪ್ರಸಾದ್ ಅಬಕಾರಿ ಉಪ ಅಧೀಕ್ಷಕರು ತೀರ್ಥಹಳ್ಳಿ ರವರ ಆದೇಶದಂತೆ ಹೊಸನಗರದ ಅಬಕಾರಿ ನಿರೀಕ್ಷಕ ನಾಗರಾಜ್ರವರ ನೇತೃತ್ವದಲ್ಲಿ ದಾಳಿ ನಡೆದಿದೆ.
ಈ ದಾಳಿಯ ಸಂದರ್ಭದಲ್ಲಿ ಶಿವಪ್ರಸಾದ್ ಅಬಕಾರಿ ಉಪ ಅಧಿಕ್ಷಕರು, ತೀರ್ಥಹಳ್ಳಿ ಉಪ ವಿಭಾಗ, ನಾಗರಾಜ ಅಬಕಾರಿ ನಿರೀಕ್ಷಕರು, ವಾಸವಿ. ಟಿ. ಎನ್ ಅಬಕಾರಿ ಉಪ ನಿರೀಕ್ಷಕರು ಸಿಬ್ಬಂದಿಗಳಾದ ಪ್ರಕಾಶ್ ಕೆ, ರಾಘವೇಂದ್ರ ಟಿ, ಪಾಂಡು ಅಂಬವ್ವಗೊಳ್ ಹಾಗೂ ವಾಹನ ಚಾಲಕರಾದ ಬಸವರಾಜ್ ಮತ್ತು ಪ್ರಸನ್ನ ರವರು ಉಪಸ್ಥಿತರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್