ಇದು ನನ್ನ ಕೊನೆಯ ಚುನಾವಣೆ – ಆರಗ ಜ್ಞಾನೇಂದ್ರ |ಸಾವಿರಾರು ಅಭಿಮಾನಿಗಳೊಂದಿಗೆ ಮೆರವಣಿಗೆ ತೆರಳಿ ನಾಮಪತ್ರ ಸಲ್ಲಿಸಿದ ಆರಗ

ತೀರ್ಥಹಳ್ಳಿ : ಈ ಬಾರಿಯ ಚುನಾವಣೆ ನನ್ನ ಕೊನೆ ಚುನಾವಣೆಯಾಗಿದ್ದು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.




ಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಹತ್ತನೇ ಬಾರಿಗೆ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ನಾಮಪತ್ರ ಸಲ್ಲಿಸಿದ್ದೇನೆ. ಕಳೆದ 9 ಚುನಾವಣೆಯಲ್ಲಿ 4 ಬಾರಿ ತೀರ್ಥಹಳ್ಳಿ ಜನ ನನ್ನನ್ನು ಗೆಲ್ಲಿಸಿದ್ದಾರೆ. 15 ಸಾವಿರಕ್ಕೂ ಹೆಚ್ಚು ಜನ ಇವತ್ತು ಬಂದು ನನಗೆ ಆಶೀರ್ವದಿಸಿದ್ದಾರೆ ಇದೇ ನನ್ನ ಕೊನೆಯ ಚುನಾವಣೆಯಾಗಿದ್ದು ಮುಂದೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.


ಕ್ಷೇತ್ರದಲ್ಲಿ ಖಂಡಿತ ಜನ ಕಾಂಗ್ರೆಸ್ ಪಕ್ಷದವರನ್ನು ನಂಬುವುದಿಲ್ಲ. ನಾನು ಅಭಿವೃದ್ಧಿ ಆಧಾರದಲ್ಲಿ ಮತ ಕೇಳುತ್ತಾ ಇದ್ದೇನೆ. ಇಲ್ಲಿಯವರೆಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಒಂದು ಅವಧಿಯಲ್ಲಿ ಅಭಿವೃದ್ಧಿ ಆಗಿರಲಿಲ್ಲ. ಮೊದಲ ಒಂದು ವರ್ಷ ಸಮ್ಮಿಶ್ರ ಸರ್ಕಾರವಿತ್ತು. ನಂತರದ ಎರಡು ವರ್ಷ ಕೋವಿಡ್ ನಿಂದ ಸಮಸ್ಯೆ ಆಯ್ತು ಉಳಿದ ಎರಡು ವರ್ಷಗಳಲ್ಲಿ 3200 ಕೋಟಿ ರೂಪಾಯಿ ಎಷ್ಟು ಹಣ ತಂದಿದ್ದೇನೆ. ಯಾವುದೇ ಹಳ್ಳಿಗೆ ಹೋದರು ಅಭಿವೃದ್ಧಿ ಕಾರ್ಯ ನಡೆಯುವುದನ್ನು ಗಮನಿಸಬಹುದು ಎಂದರು.

ಹಿರಿಯರು ಪಕ್ಷ ಬಿಡುತ್ತಿರುವ ವಿಚಾರದ ಬಗ್ಗೆ ಮಾತನಾಡಿ ಇದರಿಂದ ಯಾವ ಪರಿಣಾಮವೂ ಬೀರುವುದಿಲ್ಲ. ಬಿಜೆಪಿ ಹೈಕಮಾಂಡ್ ಸರ್ವೇ ಮಾಡಿ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ಕೈಗೊಂಡಿದೆ. ಇಡೀ ದೇಶದಲ್ಲಿ ಇಂತಹ ನಿರ್ಧಾರಗಳು ಯಶಸ್ವಿಯಾಗಿವೆ. ಕರ್ನಾಟಕದಲ್ಲೂ ಅದೇ ನಿರ್ಧಾರ ತೆಗೆದುಕೊಂಡಿದೆ ದುರದೃಷ್ಟಕರ ಸಂಗತಿ, ಪಕ್ಷ ಬಿಟ್ಟು ಹೋಗಬಾರದಿತ್ತು ಪಕ್ಷ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರನ್ನು ಮಾಡಿದೆ. ಪಕ್ಷ ಎಲ್ಲ ರೀತಿಯ ಸೌಲಭ್ಯ, ಅವಕಾಶ ನೀಡಿದೆ. ಅವರು ಬಿಟ್ಟು ಹೋಗುವುದರಲ್ಲಿ ಅರ್ಥವಿಲ್ಲ. ಸೈದ್ಧಾಂತಿಕವಾಗಿ ನಾವು ಇದ್ದರೆ ಪಕ್ಷ ಬಿಡುವ ಪ್ರಶ್ನೆಯೇ ಬರುವುದಿಲ್ಲ ಎಂದರು.




ಕುಶಾವತಿ ಪಾರ್ಕ್ ನ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಯ ಮೂಲಕ ಹೊರಟ ಆರಗ ಜ್ಞಾನೇಂದ್ರ ಕಾರ್ಯಕರ್ತರೊಡನೆ  ಡಿಜೆ ಸೌಂಡ್ಸ್ ನೊಂದಿಗೆ ಹೆಜ್ಜೆ ಹಾಕಿದರು.ರಸ್ತೆಯುದ್ಧಕ್ಕೂ ಪಕ್ಷದ ಬಾವುಟ ಹಿಡಿದು ಕುಣಿದು ಕುಪ್ಪಳಿಸುತ್ತಿದ್ದ ಕಾರ್ಯಕರ್ತರು, ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿ ನಾಮಪತ್ರ ಸಲ್ಲಿಸಿದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

3 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

9 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago