ರಿಪ್ಪನ್ಪೇಟೆ : ಟಿಕೆಟ್ಗಾಗಿ ಅಥವಾ ಮಂತ್ರಿ ಸ್ಥಾನಕ್ಕಾಗಿ ದೆಹಲಿಗೆ ಹೋಗುವವನು ನಾನಲ್ಲ. ಇಂತಹ ಸಂದರ್ಭ ಬರುವುದಿಲ್ಲ. ಸಂದರ್ಭ ಬಂದಲ್ಲಿ ಚುನಾವಣಾ ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ. ಯಾವುದೇ ಕಾರಣ ಕೊಡದೆ ಇನ್ನೊಬ್ಬರಿಗಾಗಿ ಕೆಲಸ ಮಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಕೋಡೂರಿನಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಬಾರಿ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 4 ಬಾರಿ ಶಾಸಕನಾಗಿದ್ದೇನೆ. ಇದು ನನ್ನ ಕೊನೆಯ ಚುನಾವಣೆ. ನಾನು ತತ್ವಕ್ಕಾಗಿ, ಸಿದ್ದಂತಕ್ಕಾಗಿ ರಾಜಕಾರಣ ಮಾಡುವವನು. ಈ ರಾಷ್ಟ್ರ ಕಟ್ಟುವುದು ನಮ್ಮ ಕೆಲಸ. ಇಲ್ಲಿ ನನ್ನ ಸ್ವಂತಿಕೆ ಇಲ್ಲ. ಶಾಸಕನಾಗಬೇಕು ಮಂತ್ರಿ ಆಗಬೇಕು ಎಂದಿಲ್ಲ. ಎಲ್ಲರ ನೆರವಿನಿಂದ ನಾನು ಬೆಳೆದಿದ್ದೇನೆ. ನನ್ನ ಕಾರ್ಯಕರ್ತರು ನನಗೆ ದೇವರು ಸಮಾನ. ಹಾಗಾಗಿ ಅವರು ಚುನಾವಣೆ ಸಂದರ್ಭದಲ್ಲಿ ತೊಡೆ ತಟ್ಟಿ ಕೆಲಸ ಮಾಡುತ್ತಾರೆ ಎಂದು ಹೇಳಿದರು.
ಅಡಿಕೆ ಬೆಳೆಗೆ ರಕ್ಷಾ ಕವಚವಾಗಿ ನಾನಿದ್ದೇನೆ. ಮಲೆನಾಡಿನ ಜನ ಆರ್ಥಿಕವಾಗಿ ಸಬಲರಾಗಲು ಅಡಿಕೆ ಬೆಳೆಯೇ ಮುಖ್ಯ ಕಾರಣ ಎಂದ ಅವರು, ಕಳೆದೆರಡು ವರ್ಷದಲ್ಲಿ 3.254 ಕೋಟಿ ರೂ. ತೀರ್ಥಹಳ್ಳಿ ಕ್ಷೇತ್ರದ ಅಭಿವದ್ಧಿಗಾಗಿ ಹಣ ತಂದಿದ್ದೇನೆ. ಒಂದೂ ರಸ್ತೆಯನ್ನು ಮಾಡದವರು ಮತ್ತೆ ಚುನಾವಣೆಗೆ ನಿಂತಿದ್ದಾರೆ . ನಾವಿಬ್ಬರು ಒಟ್ಟಾಗಿದ್ದೇವೆ. ಈ ಬಾರಿ ಗೆಲುವು ನಮ್ಮದೇ ಎಂದು ಹೇಳುವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ ಮಂಜುನಾಥಗೌಡ ವಿರುದ್ಧ ಹರಿಹಾಯ್ದ ಅವರು, ಒಟ್ಟಾದ್ರೆ ಏನು ಭೂಕಂಪ ಆಗುತ್ತಾ ? ಒಂದೇ ಹಾರ ಇಬ್ರು ಕೊರಳಿಗೆ ಹಾಕಿ ಕೊಂಡು ಓಡಾಡುತ್ತಿದ್ದಾರೆ. ಅಭಿವೃದ್ಧಿಗೆ ಜನ ಮತ ಕೊಡುವುದಾದರೆ ಅವರಿಗೆ ಈ ಬಾರಿ ಠೇವಣಿ ಸಹ ಸಿಗುವುದಿಲ್ಲ ಎಂದರು.
ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ಗ್ರಾಪಂ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ ಮಂಜುನಾಥ್, ಆರ್.ಟಿ ಗೋಪಾಲ್, ತಾಲೂಕು ಬಿಜೆಪಿ ಅಧ್ಯಕ್ಷ ಬಿಳಗೋಡು ಗಣಪತಿ, ಕೋಡೂರು ಗ್ರಾಪಂ ಸದಸ್ಯರು, ಬೇಗುವಳ್ಳಿ ಸತೀಶ್, ಬೇಗುವಳ್ಳಿ ಕವಿರಾಜ್, ಪುಟ್ಟಪ್ಪ, ಅರುಣ್ ಕುಮಾರ್, ಬಿಜೆಪಿ ಕಾರ್ಯಕರ್ತರು ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್