ಈ ಬಾರಿಯ ಚುನಾವಣೆಯಲ್ಲಿ ಗೆಲುವು ನನ್ನದೇ : ಗೋಪಾಲಕೃಷ್ಣ ಬೇಳೂರು|beluru

ರಿಪ್ಪನ್‌ಪೇಟೆ :  ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು  ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನ  ಹಾಗೂ ರಿಪ್ಪನ್‌ಪೇಟೆಯ ಗುಡ್‌ಶಫರ್ಡ್  ಚರ್ಚ್ ಗೆ ಇಂದು ಬೆಳಗ್ಗೆ ಭೇಟಿ ನೀಡಿ ಧರ್ಮ ಗುರುಗಳ ದರ್ಶನಾಶೀರ್ವಾದ ಪಡೆದರು.




ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದ ರೇಣುಕಾನಂದ ಸ್ವಾಮೀಜಿ ಅಭ್ಯರ್ಥಿ ಗೋಪಾಲಕೃಷ್ಣರವರಿಗೆ ಶುಭಹಾರೈಸಿ ತಾವು ಜನರ ಸಂಕಷ್ಟವನ್ನು ಪರಿಹರಿಸುವ ಮೂಲಕ ಮತದಾರರಲ್ಲಿ ಪ್ರೀತಿ ವಿಶ್ವಾಸಗಳಿಸಿ ನಿಮಗೆ ಮುಂದೆ ಒಳ್ಳಯ ಭವಿಷ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಿಪ್ಪನ್ ಪೇಟೆ ಪಟ್ಟಣದ ಗುಡ್ ಶೇಫೇರ್ಡ್ ಚರ್ಚಿನ ಧರ್ಮ ಗುರು ರೇವರೆಂಡ್ ಫಾದರ್ ಬಿನೋಯ್ ರವರ ಶುಭ ಆಶೀರ್ವಾದ ಪಡೆದರು.ನಂತರ ಚರ್ಚಿನ ಹೊರಭಾಗದಲ್ಲಿ ಕ್ರೈಸ್ತ ಬಾಂಧವರ ಬಳಿ ಮತಯಾಚಿಸಿದರು.


ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಗೋಪಾಲಕೃಷ್ಣ  ಬೇಳೂರು ಸಾಗರ-ಹೊಸನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರು ಉತ್ತಮ ಸ್ಪಂದನೆ ನೀಡುತ್ತಿದ್ದಾರೆ.ಚುನಾವಣೆಯಲ್ಲಿ ನನ್ನದೇ ಗೆಲುವು ಎಂಬ ವಾತವರಣ ಸೃಷ್ಟಿಯಾಗಿದೆ.

ನಮ್ಮ ಪಕ್ಷದ ಗ್ಯಾರಂಟಿ ಕಾರ್ಡ್ ಈಗಾಗಲೇ ಮನೆಮನಸ್ಸು ತಲುಪಿ ಈ ಐದು ಪ್ರಣಾಳಿಕೆಗಳು ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರೀರಕ್ಷೆ ಯಾಗಿದ್ದು ಹಣ ಈ ಭಾರಿ ಚಲಾವಣೆಯಾಗದೇ ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆಯವರು ಹೇಳಿದಂತೆ ಹಣಪಡೆದು ಮತವನ್ನು ಒಳ್ಳೆಯ ವ್ಯಕ್ತಿಗೆ ಚಲಾಯಿಸಿ ಎಂದಿರುವುದು ನನ್ನ ಗೆಲುವಿಗೆ ಶಕ್ತಿ ಬಂದಂತಾಗಿದೆ ಎಂದು ಹೇಳಿದ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ದುರಹಂಕಾರಿ ಶಾಸಕ ಹರತಾಳು ಹಾಲಪ್ಪರನ್ನು ಕ್ಷೇತ್ರದ ಜನತೆ ಸೋಲಿಸಲಿದ್ದಾರೆ. ಪ್ರತಿನಿತ್ಯ  ಬಿಜೆಪಿ ಪಕ್ಷದ ನೂರಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿರುವುದು  ಗೆಲುವಿನ ಸಂಕೇತವಾಗಿದೆ ಎಂದರು.




ಈ ಸಂದರ್ಭದಲ್ಲಿ ಜಿ.ಪಂ.ಮಾಜಿ  ಅಧ್ಯಕ್ಷ ಕಲಗೋಡು ರತ್ನಾಕರ್,ತಾಲ್ಲೂಕ್ ಪ್ರಚಾರ ಸಮಿತಿ ಅಧ್ಯಕ್ಷ ಜಯಶೀಲಪ್ಪಗೌಡ ಹರತಾಳು,ಎಪಿಎಂಸಿ .ಹಾರೋಹಿತ್ತಲು ಈಶ್ವರಪ್ಪಗೌಡ, ಪಕ್ಷದ ಮುಖಂಡರಾದ ಹಕ್ರ ಮಲ್ಲಿಕಾರ್ಜುನ, ಡಿ.ಈ.ಮಧುಸೂದನ್,ಅಸೀಫ್‌ ಭಾಷಾಸಾಬ್, ಎನ್.ಚಂದ್ರೇಶ್, ಆರ್.ಹೆಚ್.ಶ್ರೀನಿವಾಸ್,ರವಿ ಕೆರೆ ಹಳ್ಳಿ ,ಎಂ. ಎಂ ಪರಮೇಶ, ಫ್ಯಾನ್ಸಿ ರಮೇಶ್, ಕೌಶಿಕ್,ವರ್ಗೀಸ್,ಉಲ್ಲಾಸ ತೆಂಕೋಲ,ಬಿ ಎಸ್ ಎನ್ ಎಲ್ ಶ್ರೀಧರ್. ಆಟೋ ಗಫುರ್ ಧನಲಕ್ಷಿö್ಮ, ಸಾರಾಬಿ. ಲೇಖನ, ದೀಪಾ ನಾಗರಾಜ್ ಇನ್ನಿತರರು ಹಾಜರಿದ್ದರು.









ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 hour ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

7 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago