ಎಂಎಲ್ ಸಿ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ..!!! ಈಶ್ವರಪ್ಪ ಪುತ್ರ ಕಾಂತೇಶ್ ಗೆ ತಮ್ಮ ವಿರುದ್ದ ಸ್ಪರ್ಧಿಸಲು ಪಂಥಾಹ್ವಾನ|ayanur manjunath


ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಇಳಿಯಬೇಕು ಎಂದು ನಿರ್ಧಾರ ಮಾಡಿದ್ದೇನೆ. ಶೀಘ್ರದಲ್ಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಚುನಾವಣಾ ಆಖಾಡಕ್ಕೆ ಇಳಿಯುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಘೋಷಿಸಿದರು.



ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸಾರ್ವಜನಿಕ ವೇದಿಕೆಯಲ್ಲಿ ಕೂಡ ನಿಲುವು ಪ್ರಕಟಿಸಿದ್ದೇನೆ. ಪಕ್ಷದ ವೇದಿಕೆಯಲ್ಲಿ ಕೂಡ ನನ್ನ ವಿನಂತಿಯನ್ನು ಸಲ್ಲಿಸಿದ್ದೇನೆ. ಆದರೆ, ವಿನಂತಿಗೆ ಪೂರಕವಾಗಿ ನನಗೆ ಪಕ್ಷದಿಂದ ಟಿಕೆಟ್ ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಆದರೆ ಕೆಲವರ ಮಕ್ಕಳ ಹೆಸರುಗಳು ಓಡಾಡುತ್ತಿವೆ. ಮೊನ್ನೆ ಈಶ್ವರಪ್ಪ‌ ಹೇಳಿದ ಮಾತನ್ನು ಗಂಭೀರವಾಗಿ ಪರಿಗಣಿಸಿ ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ತೀರ್ಮಾನಿಸಿದ್ದೇನೆ ಎಂದರು.

ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ನನ್ನ ಕೇರ್ ಮಾಡಿಲ್ಲ ಎಂದು ಹೇಳಿದ್ದಾರೆ. ಅವರ ಏಕವಚನ ಅವರ ಶಿಕ್ಷಣದ ಮಟ್ಟ ಅದು. ಅವರು ಬಹುವಚನ ಮಾತನಾಡಿದರೆ ರಾಜ್ಯದ ಜನರಿಗೆ ಆಶ್ಚರ್ಯವಾಗುತ್ತದೆ. ಈಶ್ವರಪ್ಪ ಹೇಳಿದ್ದನ್ನು ಸವಾಲಾಗಿ ಸ್ವೀಕರಿಸಿದ್ದೇನೆ. ಈ ಬಾರಿ ನಾನು ಸ್ಫರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.



ಅವರು ರಾಜ್ಯದ ಪ್ರಭಾವಿ ನಾಯಕರು. ಎಷ್ಟು ಪ್ರಭಾವಿಯೆಂದರೇ ಶಿವಮೊಗ್ಗ ಬಿಟ್ಟು ಬೇರೆ ಎಲ್ಲೂ ಗೆಲ್ಲಲು ಸಾಧ್ಯವಿಲ್ಲದ ನಾಯಕ. ನೀವಾಗಲಿ ಅಥವಾ ನಿಮ್ಮ ಮಗನಾಗಲಿ ಕಣಕ್ಕೇ ಇಳಿಯಲೇ ಬೇಕು. ನಿಮ್ಮ ಪ್ರಭಾವ ಬಳಸಿ, ನೀವು ಟಿಕೆಟ್ ತರಲೇಬೇಕು. ಲಜ್ಜೆ ಬಿಟ್ಟು, ನಿಮ್ಮ ಬದಲಾಗಿ ನಿಮ್ಮ ಮಗನಿಗೆ ಕೇಳಿದ್ದೀರಿ. ಅದರ ಬದಲು ಈ ಹಿಂದೆ ಕಡಿಮೆ ಅಂತರದಲ್ಲಿ ಸೋತ ರುದ್ರೇಗೌಡರ ಪರವಾಗಿ ಕೇಳಲ್ಲ. ಪಕ್ಷಕ್ಕಾಗಿ ದುಡಿದ ಸಿದ್ದರಾಮಣ್ಣ, ಭಾನುಪ್ರಸಾದ್ ಗೂ ಟಿಕೆಟ್ ಕೇಳಲಿಲ್ಲ. ಈಶ್ವರಪ್ಪರನ್ನೇ ಹೊತ್ತು ಮೆರೆಸಿದ ಚೆನ್ನಬಸಪ್ಪ, ದತ್ತಾತ್ರೀ ಪರವಾಗಿಯೂ ಕೇಳಲಿಲ್ಲ. ಇವರು ಶಾಸಕ ಸ್ಥಾನಕ್ಕೆ ಸ್ಫರ್ಧೆ ಮಾಡಲ್ಲ, ಆದರೆ ಮಂತ್ರಿ ಸ್ಥಾನಕ್ಕೆ ಸ್ಥರ್ಧೆ ಮಾಡುತ್ತಾರೆ. ಅದು ಸಿಗದ ಕಾರಣಕ್ಕಾಗಿಯೇ ಅವರು ಬೆಳಗಾವಿಯ ಅಧಿವೇಶನಕ್ಕೆ ಹೋಗಿಲ್ಲ ಎಂದು ಗುಡುಗಿದರು.

ನಿಮ್ಮ ಹಣದ ಮದವನ್ನು ಕಡಿಮೆ ಮಾಡುವ ಕೆಲಸ ಮಾಡುತ್ತೇನೆ. ಬಡವರ ಪ್ರತಿನಿಧಿಯಾಗಿಯೇ ನಾನು ಉತ್ತರ ಕೊಡುತ್ತೇನೆ ಎಂದ ಆಯನೂರು ಮಂಜುನಾಥ್ ಹೇಳಿದರು.



ಶಿವಮೊಗ್ಗದಲ್ಲಿ ಗಲಭೆ ಸೃಷ್ಟಿಯಾಗುವ ಸಾಧ್ಯತೆಯಿದೆ:

ನನಗಂತೂ ಸೀರೆ ಕೊಡಿಸೊ ತಾಕತ್ತು ಇಲ್ಲ. ಕಂಡವರಿಗೆ ಸೀರೆ ಉಡಿಸೋ ಅಗತ್ಯವೂ ಇಲ್ಲ. ಶಿವಮೊಗ್ಗದಲ್ಲಿ ಚುನಾವಣೆ ಸಂದರ್ಭದಲ್ಲಿ ಈಶ್ವರಪ್ಪ ಸೀತಾವರಣಯಿಂದ ಬೆಂಬಲಿಗರು ಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಪೊಲೀಸ್ ಇಲಾಖೆ ಮುಂಜಾಗ್ರತೆ ವಹಿಸಬೇಕು. ತಮ್ಮ ಸ್ಪರ್ಧೆ ಬಿಜೆಪಿಯವರ ವಿರುದ್ಧ ಅಲ್ಲ ಈಶ್ವರಪ್ಪನವರ ಸ್ವಭಾವಕ್ಕೆ ವಿರುದ್ಧವಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ಬಿಜೆಪಿಯಲ್ಲಿ 32 ವರ್ಷಗಳ ಕಾಲ ಸೋತಾಗಲೂ, ಗೆದ್ದಾಗಲೂ ಈಶ್ವರಪ್ಪ ಸ್ಥಾನಮಾನ ಅನುಭವಿಸಿದರು. ನಾನು 4 ದಿನಗಳಲ್ಲಿ ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಈಗಲೇ ಯಾವ ಪಕ್ಷದಿಂದ ಸ್ಪರ್ಧೆ ಎಂದು ಹೇಳಲು ಸಾಧ್ಯವಿಲ್ಲ. ನಾನು ಗೆಲ್ಲಲು ಸ್ಪರ್ಧೆ ಮಾಡುತ್ತೇನೆ ಎಂದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

5 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

6 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

6 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago