ತೀರ್ಥಹಳ್ಳಿ : ರಾಜ್ಯದ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ರಾಜ್ಯದ ಪ್ರತಿಷ್ಠಿತ ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಈ ಬಾರಿ ಚುನಾವಣೆ ರಂಗೇರಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮದ್ಯೆ ಪೈಪೋಟಿ ಮತ್ತಷ್ಟು ರೋಚಕತೆಯಿಂದ ಇರಬಹುದು ಎಂದು ಅಂದಾಜಿಸಲಾಗುತ್ತಿದೆ.
ಕಿಮ್ಮನೆ ರತ್ನಾಕರ್ ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಆರ್ ಎಂ ಮಂಜುನಾಥ ಗೌಡರು ವಿವಿಧ ಕಡೆ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸುತ್ತಿದ್ದ ಕಾರಣ ಬಂಡಾಯ ಏಳಬಹುದು ಎನ್ನಲಾಗುತಿತ್ತು.
ಆದರೆ ಜೋಡೆತ್ತುಗಳು ಒಂದಾಗಿ ಚುನಾವಣೆ ಎದುರಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಿರ್ಧರಿಸಿ ಕಾಂಗ್ರೆಸ್ ರಥ ಸಿದ್ದಪಡಿಸಿಕೊಂಡಿದ್ದು ಆರ್ ಎಂಎಂ ಸಾರಥಿಯಾಗಲು ಒಪ್ಪಿಕೊಂಡಿದ್ದಾರೆ.
ಆರ್ ಎಂಎಂ ಮನೆಗೆ ಕಿಮ್ಮನೆ ದಿಡೀರ್ ಭೇಟಿ
ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಶನಿವಾರ ಸಂಜೆ ನೇರವಾಗಿ ಆರ್ ಎಂಎಂ ಮನೆಗೆ ಮುಖಂಡರೊಂದಿಗೆ ತೆರಳಿ ಮಾತುಕತೆ ನಡೆಸುವ ಮೂಲಕ ಕ್ಷೇತ್ರದಾದ್ಯಂತ ಹುಟ್ಟಿಕೊಂಡಿದ್ದ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಈ ಸಂಧರ್ಭದಲ್ಲಿ ಕಿಮ್ಮನೆ ನೇತೃತ್ವದ ಕಾಂಗ್ರೆಸ್ ರಥಕ್ಕೆ ಆರ್ ಎಂ ಮಂಜುನಾಥ್ ಗೌಡರನ್ನು ಸಾರಥಿಯಾಗುವಂತೆ ಕೇಳಿಕೊಂಡಿದ್ದು ಇದಕ್ಕೆ ಆರ್ ಎಂಎಂ ಸಹಮತ ವ್ಯಕ್ತಪಡಿಸಿದ್ದಾರೆ.
ಏ.12 ರಿಂದ ಸಭೆಗಳಿಗೆ ಜೋಡೆತ್ತುಗಳು ಒಟ್ಟಾಗಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ನಿರತರಾಗಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ.
ಒಟ್ಟಾರೆಯಾಗಿ ತೀರ್ಥಹಳ್ಳಿ ಕ್ಷೇತ್ರದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರಲ್ಲಿದ್ದ ಗೊಂದಲ ಸದ್ಯಕ್ಕೆ ಬಗೆಹರಿದಿದ್ದು ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್