ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು – ಇಬ್ಬರಿಗೆ ಗಾಯ ,ಮೆಗ್ಗಾನ್ ಗೆ ದಾಖಲು
ರಿಪ್ಪನ್ಪೇಟೆ : ಹುಂಚ ಗ್ರಾಪಂ ವ್ಯಾಪ್ತಿಯ ಬಿಲ್ಲೇಶ್ವರ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರ ಪೆಟ್ಟು ತಗುಲಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಕೋಣಂದೂರಿನ ಮಣಿಕಂಠ ಮತ್ತು ಆಸೀಪ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ.
ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ವಾಟರ್ ಸರ್ವೀಸ್ ಸೆಂಟರ್ ಹುಡುಗರ ಆವಾಂತರ
ತೀರ್ಥಹಳ್ಳಿ ತಾಲ್ಲೂಕಿನ ಮಲ್ಲಿಕಟ್ಟೆಯ ಪ್ರಕಾಶ್ ಶೆಟ್ಟಿ ಎಂಬುವವರು ಕೋಣಂದೂರಿನ ವಸಂತ್ ವಾಟರ್ ವಾಷ್ ನಲ್ಲಿ ತಮ್ಮ ಮಾರುತಿ ವ್ಯಾಗನಾರ್ ಕಾರನ್ನು ವಾಟರ್ ವಾಷ್ ಸರ್ವೀಸ್ ಗೆ ಬಿಟ್ಟು ತೆರಳಿದ್ದರು.
ಸದರಿ ವಸಂತ್ ವಾಟರ್ ವಾಷ್ ಸೆಂಟರ್ ನ ಕಾರ್ಮಿಕರು ಗಾಡಿ ಸ್ವಚ್ಚಗೊಳಿಸಿದ ನಂತರ ಕಾರು ಮಾಲೀಕರ ಗಮನಕ್ಕ್ಕೆ ತಾರದೇ ವಾಹನವನ್ನು ತೆಗೆದುಕೊಂಡು ಹುಂಚ ಕಡೆಗೆ ತೆರಳಿ ಹಿಂದಿರುಗುತ್ತಿದ್ದಾಗ ಬಿಲ್ಲೆಶ್ವರ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ.
ಈ ಅಪಘಾತದಲ್ಲಿ ವಸಂತ್ ವಾಟರ್ ವಾಷ್ ನ ಕಾರ್ಮಿಕರಾದ ಮಣಿಕಂಠ ಮತ್ತು ಆಸೀಫ಼್ ಎಂಬುವವರಿಗೆ ಗಂಭೀರ ಪೆಟ್ಟು ತಗುಲಿದ್ದು ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಗೆ ರವಾನಿಸಲಾಗಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
(adsbygoogle = window.adsbygoogle || []).push({});
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್