ಜ್ಞಾನವು ಸನ್ಮಾರ್ಗದೆಡೆಗೆ ಕೊಂಡೊಯ್ಯುವ ದಿವ್ಯಶಕ್ತಿಯಾಗಿದೆ – ಡಾ.ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ|hombuja shri

ರಿಪ್ಪನ್ ಪೇಟೆ : ಜ್ಞಾನವು ಎಲ್ಲರನ್ನೂ ಸನ್ಮಾರ್ಗಕ್ಕೆ ತೆಗೆದುಕೊಂಡು ಹೋಗುವ ದಿವ್ಯಶಕ್ತಿಯಾಗಿದೆ. ಅಜ್ಞಾನದಿಂದ, ಅಂಧಕಾರದಿಂದ ಬೆಳಕಿನ ಕಡೆಗೆ ತೆಗೆದುಕೊಂಡು ಹೋಗುವ ಶಕ್ತಿ ಜ್ಞಾನದಲ್ಲಿರುತ್ತದೆ. ಜ್ಞಾನದ ಶಕ್ತಿಯು ಪ್ರತಿಯೊಬ್ಬರಲ್ಲಿಯೂ ಕೂಡ ಸಮನಾಗಿದ್ದರೂ ಅದರ ಅಭಿವೃದ್ಧಿ ಎಲ್ಲರಲ್ಲಿಯೂ ಸಮಾನಾಗಿರುವುದಿಲ್ಲ. ಎಲ್ಲಾ ಶಿಲೆಯಲ್ಲಿಯೂ ಮೂರ್ತಿಯಾಗುವ ಅರ್ಹತೆ ಇದ್ದರೂ ಶಿಲ್ಪಿ ತನ್ನ ಕೌಶಲ್ಯವನ್ನು ಎಷ್ಟರ ಮಟ್ಟಿಗೆ ಉಪಯೋಗಿಸುತ್ತಾನೆಯೂ ಅಷ್ಟರ ಮಟ್ಟಿಗೆ ಅದು ರೂಪುಗೊಳುತ್ತದೆ. ಹಾಗೆಯೇ ಮನುಷ್ಯನು ತನ್ನಲ್ಲಿರುವ ಜ್ಞಾನದ ಶಕ್ತಿಯನ್ನು ರೂಪುಗೊಳಿಸಿಕೊಳ್ಳಬೇಕು ಎಂದು ಹೊಂಬುಜ ಜೈನ ಮಠದ  ಡಾ. ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ಆಶೀರ್ವಚನ ನೀಡಿದರು.

ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ಗುಡ್ಡದ ಬಸದಿ ತ್ರಿಕೂಟ ಜಿನಾಲಯದಲ್ಲಿ  10ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಸಾಮರಸ್ಯದ ಸಮಾಜ ನಿರ್ಮಾಣದ ಜವಾಬ್ದಾರಿ ಪ್ರತಿಯೊಬ್ಬ ಪ್ರಜೆಯ ಹೊಣೆಗಾರಿಕೆಯಾಗಿದ್ದು, ಅನುಷ್ಠಾನಗೊಳಿಸುವಲ್ಲಿ ಜನತೆ ಪ್ರಮುಖ ಪಾತ್ರ ವಹಿಸಬೇಕಿದೆ ಎಂದರು.

ಮುನಿಗಳಿಗೆ ಆಹಾರ ದಾನ ಮಾಡುವುದು ‘ಅಕ್ಷಯ ಪುಣ್ಯಕ್ಕೆ ಕಾರಣ’ವೃಷಭನಾಥರಿಗೆ ಮೊದಲು ಆಹಾರ (ಪಾರಣಾ) ವಾದ ದಿವಸ ವೈಶಾಖ ಶುಕ್ಲ ತೃತೀಯ ತಿಥಿಯಿದ್ದ ಕಾರಣ ಆ ದಿನವನ್ನು ಅಕ್ಷಯ ತೃತೀಯವೆಂದು ಆಚರಿಸಲಾಗುತ್ತದೆ. ಜೈನ ಧರ್ಮದಲ್ಲಿ ಮುನಿಗಳಿಗೆ ಆಹಾರ ದಾನ ಮಾಡುವುದೆಂದರೆ ಅತ್ಯಂತ ಅತಿಶಯ, ಅಕ್ಷಯ ಪುಣ್ಯಕ್ಕೆ ಕಾರಣ ಎಂದು ಹೇಳಲಾಗಿದೆ. ಈ ದಿನ ಬಸದಿಗಳಲ್ಲಿ ವಿಶೇಷವಾಗಿ ಅಭಿಷೇಕ ಪೂಜೆ, ಉತ್ಸವಗಳನ್ನು ಆಚರಿಸಲಾಗುತ್ತದೆ. ಈ ದಿನ ದಿಗಂಬರ ಮುನಿಗಳಿಗೆ, ವಿಶೇಷವಾಗಿ ಕಬ್ಬಿನ ಹಾಲನ್ನು ಆಹಾರ ದಾನದಲ್ಲಿ ನೀಡುವುದರಿಂದ ದವಸ-ಧಾನ್ಯಗಳು, ಮನೆಯಲ್ಲಿ ಸುಖ-ನೆಮ್ಮದಿ ಅಕ್ಷಯವಾಗಿ ವೃದ್ಧಿಯಾಗುತ್ತದೆ ಎಂದರು.

ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಭಗವಾನ ಶ್ರೀ ಶಾಂತಿನಾಥ ಸ್ವಾಮಿ, ಭಗವಾನ ಶ್ರೀ ಬಾಹುಬಲಿ ಸ್ವಾಮಿಗೆ ವಿಶೇಷ ಪಂಚಾಮೃತ ಅಭಿಷೇಕ ಹಾಗೂ 108 ಕಳಶಾಭಿಷೇಕಗಳು ನೆರವೇರಿಸಲಾಯಿತು. ಈ ಸುಸಂದರ್ಭದಲ್ಲಿ ಧರಣೇಂದ್ರ ಯಕ್ಷ ಹಾಗೂ ಪದ್ಮಾವತಿ ದೇವಿಯ ವಿಶೇಷ ಪೂಜಾ ಕಾರ್ಯಗಳು ಸಂಪನ್ನಗೊಂಡವು.ದೇಶದ ಹಾಗೂ  ರಾಜ್ಯದ  ವಿವಿಧಡೆಯಿಂದ  ಆಗಮಿಸಿದ   ಜೈನ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 hour ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

7 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago