ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ಕ್ಷೇತ್ರದಾದ್ಯಂತ ನೂಕುನುಗ್ಗಲು ಪ್ರಾರಂಭವಾಗಿದೆ.ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಅಧಿಕೃತ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ.
ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಪಟ್ಟಣದ ಮುಖ್ಯ ಬಸ್ ನಿಲ್ದಾಣದ ಸಮೀಪದ ಕಚೇರಿಯಲ್ಲಿ, ಆಮ್ರಪಾಲಿ ಸುರೇಶ್ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಮರನಾಥ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡ 50 ಕ್ಕೂ ಹೆಚ್ಚು ಮಂದಿ ಯುವಕರು ಈ ಬಾರಿ ಕಿಮ್ಮನೆ ರತ್ನಾಕರ್ ಅವರನ್ನು ಗೆಲ್ಲಿಸುವ ಪ್ರತಿಜ್ಞೆಮಾಡಿದರು.
ಈ ಸಂದರ್ಭದಲ್ಲಿ ಕಿಮ್ಮನೆ ರತ್ನಾಕರ್ , ಆಮ್ರಪಾಲಿ ಸುರೇಶ್, ಅಮರಾನಾಥ್ ಶೆಟ್ಟಿ, ಪೂರ್ಣೇಶ್ ಕೆಳಕೆರೆ, ಗಣಪತಿ, ವೈ ನಾಗೇಂದ್ರ, ಸುಜಿತ್ ಸೇರಿ ಹಲವರು ಉಪಸ್ಥಿತರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್