ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ|Religious event

ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ

ರಿಪ್ಪನ್ ಪೇಟೆ : ಸತ್ಯ, ಸದ್ಭಾವನೆ ಸಂಯಮ ಸಾಕ್ಷಾತ್ಕಾರ ಸರ್ವ ಸಿದ್ದಿ ಹಾಗೂ ಮೋಕ್ಷ ಧರ್ಮದ ಹಾದಿಯಾಗಿದೆ ಇಂತಹ ಧರ್ಮ ಪರಿಪಾಲನೆಯಲ್ಲಿ ಶ್ರದ್ಧಾ ಭಕ್ತಿ ಮುಖ್ಯವೆಂದು ಮೂಲೆಗದ್ದೆ ಮಠದ ಪೀಠಾಧಿಕಾರಿ ಶ್ರೀ ಚನ್ನಬಸವ ಸ್ವಾಮೀಜಿ ಹೇಳಿದರು.




ಪಟ್ಟಣದ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಆನ್ನಪೂರ್ಣೇಶ್ವರಿ ಆಮ್ಮನವರ ದೇವಸ್ಥಾನದ 6 ನೇ ವರ್ಷದ ಪ್ರತಿಷ್ಠ  ವರ್ಧಂತ್ಯುತ್ಸವ ಧಾರ್ಮಿಕ ಸಭೆಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ದೇವಸ್ಥಾನ ಮಂದಿರಗಳಲ್ಲಿ ಆಯೋಜಿಸುವ ಸಾಮೂಹಿಕ ಧಾರ್ಮಿಕ ಆಚರಣೆಗಳಿಂದ ಪರಸ್ಪರ ಬಾಂಧವ್ಯಗಳು ವೃದ್ಧಿಯಾಗಿ ಶಾಂತಿ ನೆಮ್ಮದಿ ಕಾಣಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಭಾರತೀಯ ಸಂಸ್ಕೃತಿ- ಸಂಸ್ಕಾರ ಅರಿತು ನಡೆಯುವಲ್ಲಿ  ಯುವ ಜನತೆ ಮುಂದಾಗಬೇಕು ಎಂದರು.




ವಾರ್ಷಿಕ ವರ್ಧಂತ್ಯೋತ್ಸವದ ಅಂಗವಾಗಿ  ಸಿದ್ಧಿವಿನಾಯಕ ಸ್ವಾಮಿ ಹಾಗೂ ಅನ್ನಪೂರ್ಣೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಎರಡು ದಿನಗಳ  ಕಾಲ ಶಿವಮೊಗ್ಗದ ವಸಂತ ಭಟ್ ಪೌರೋಹಿತ್ಯದಲ್ಲಿ ದೇವಸ್ಥಾನದ ಅರ್ಚಕರಾದ ಚಂದ್ರಶೇಖರ್ ಭಟ್ ಮತ್ತು ಗುರುರಾಜ ಭಟ್ ನೇತೃತ್ವದಲ್ಲಿ  ವಿವಿಧ ಧಾರ್ಮಿಕ ಕೈಂಕರ್ಯಗಳು ಹಾಗೂ ಹೋಮ ಹವನಗಳು ಅತ್ಯಂತ ವಿಜೃಂಭಣೆಯಿಂದ ಜರುಗಿದವು.

ದೇವಸ್ಥಾನ  ಸಮಿತಿ ಅಧ್ಯಕ್ಷ ಆರ್.ಇ.ಈಶ್ವರ ಶೆಟ್ಟಿ ಅಧ್ಯಕ್ಷೆತೆ ವಹಿಸಿದ್ದರು.

ಉಪ ತಹಶೀಲ್ದಾರ್ ಹುಚ್ಚರಾಯಪ್ಪ,ಮಾಜಿ ಧರ್ಮದರ್ಶಿ ಸಮಿತಿಯ ಅಧ್ಯಕ್ಷ ಗಣೇಶ್ ಕಾಮತ್,  ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಎನ್.ಸತೀಶ್,ಗಣೇಶ್ ಕಾಮತ್ ಸೇರಿದಂತೆ ದೇವಸ್ಥಾನ ಸಮಿತಿಯ ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಸದಸ್ಯರು ಹಾಜರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

36 minutes ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

47 minutes ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

6 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

8 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

1 day ago