ರಾಜ್ಯಕ್ಕೆ ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವ ಮೂಲಕ ಸದೃಡ,ನಿರ್ಭೀತ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಾಲೂರು ಶಿವಕುಮಾರ್ ಹೇಳಿದರು.
ಹುಂಚ ಹೋಬಳಿಯ ಗರ್ತಿಕೆರೆ ಗ್ರಾಮದಲ್ಲಿ ಮತಯಾಚನೆ ಕಾರ್ಯಕ್ರಮದ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯಕ್ಕೆ ವಿದ್ಯುತ್ ನೀಡಲು ತನ್ನೆಲ್ಲಾ ಸರ್ವಸ್ವವನ್ನೂ ಕಳೆದುಕೊಂಡ ನಾಡನ್ನು ಈಗ ಕತ್ತಲಲ್ಲಿರಿಸಿರುವ ಪ್ರಮುಖ ಮೂರು ಪಕ್ಷಗಳನ್ನು ಜನತೆ ತಿರಸ್ಕರಿಸಬೇಕಾಗಿದೆ, ಸಮಸ್ಯೆಗಳನ್ನು ಜೀವಂತವಾಗಿರಿಸಿಕೊಂಡೇ ಹಲವು ದಶಕಗಳಿಂದ ರಾಜಕಾರಣ ನಡೆಸುತ್ತಿರುವ JCB ಪಕ್ಷಗಳಿಗೆ ಜನತೆ ಈ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ ಎಂದರು.
ಸುಪ್ರೀಂ ಕೋರ್ಟ್ ವಕೀಲನಾಗಿದ್ದ ನನಗೆ ಕೋವಿಡ್ ಸಂಧರ್ಭದಲ್ಲಿ ಜನತೆ ಆರೋಗ್ಯ ಸೇವೆಗಾಗಿ ಪರದಾಡಿದ ಸ್ಥಿತಿ ಹಾಗೂ ನಾಡಿಗಾಗಿ ಭೂಮಿ ಕಳೆದುಕೊಂಡ ಶರಾವತಿ ಸಂತ್ರಸ್ಥರ ಪರದಾಟ ರಾಜಕೀಯಕ್ಕೆ ಕಾಲಿಡುವಂತೆ ಪ್ರೇರೆಪಿಸಿತು.ರಾಷ್ಟ್ರಾದ್ಯಂತ ಸಂಚಲನ ಮೂಡಿಸಿರುವ ಆಮ್ ಆದ್ಮಿ ಪಕ್ಷದ ಪಂಜಾಬ್ ಮಾಡೆಲ್ ಮತ್ತು ದೆಹಲಿ ಮಾಡೆಲ್ ನ್ನು ಮಿಶ್ರಣ ಮಾಡಿ ಮಲೆನಾಡು ಮಾಡೆಲ್ ಮಾಡಬೇಕೆಂಬ ಇಚ್ಚೆಯಿಂದ ಈ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದರು.
ಗೋಪಾಲ ಗೌಡ ,ಕುವೆಂಪು ಮತ್ತು ಕಡಿದಾಳ್ ಮಂಜಪ್ಪ ನಂತಹವರು ಬಂದ ತಾಲೂಕಿನಲ್ಲಿ ಸಚ್ಚಾರಿತ್ರ್ಯದ ರಾಜಕಾರಣವನ್ನು ಮರುಕಳಿಸಬೇಕೆಂಬ ಉದ್ದೇಶದಿಂದ ಸ್ಪರ್ಧಿಸಿದ್ದೇನೆ,ಬಿಜೆಪಿಯ ಕೋಮು ರಾಜಕಾರಣ, ಕಾಂಗ್ರೆಸ್ ನ ಒಲೈಕೆ ರಾಜಕಾರಣ ಮತ್ತು ಜೆಡಿಎಸ್ ನ ಜಾತಿ ರಾಜಕಾರಣದಿಂದ ಜನ ಬೇಸತ್ತಿದ್ದು ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಈ ಸಂಧರ್ಭದಲ್ಲಿ ಆಮ್ ಆದ್ಮಿ ಮುಖಂಡರಾದ ದೇವದಾಸ್ ಗೌಡ ಕೊಳಿಗೆ,ಸದಾನಂದ ಹೆಗಡೆ ,ಅಭಿಲಾಷ್ ಅಂದಿನಿ,ಆದರ್ಶ್ ಆರಗ ,ಜಗದೀಶ್ ಬಿದರಹಳ್ಳಿ , ಪುರುಷೋತ್ತಮ್ ,ಮಹೇಶ್ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್