ಹೊಂಬುಜ : ಅಹಿಂಸೆಯಿಂದಲೇ ವಿಶ್ವಶಾಂತಿ ಸಂದೇಶದ ಮೂಲಕ ಸಕಲ ಜೀವಿಗಳಿಗೂ ಶಾಂತಿ ಬಯಸಿದ ಭ. ಮಹಾವೀರ ತೀರ್ಥಂಕರರ ಜನ್ಮ-ಜಯಂತಿಯನ್ನು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಸ್ಥಳವಾದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಜಗದ್ಗುರು ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳ್ಳಿಗ್ಗೆ 8:00 ಕ್ಕೆ ಭ|| ಮಹಾವೀರ ಸ್ವಾಮಿಗೆ ವಿಶೇಷ ಅಭಿಷೇಕ ಪೂಜೆ ನೆರವೇರಿದವು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು ಮನುಷ್ಯನು ಕೃತಕವಾಗಿ ಮಾಡುವ ಹಿಂಸೆಗಿಂತ ಮಾನಸಿಕವಾಗಿ ಮಾಡುವ ಹಿಂಸೆಯೇ ಮಹಾಪಾಪವೆಂದು ಮಹಾವೀರರು ಹೇಳಿದರು. ಪ್ರತಿಯೊಂದು ಜೀವಿಯು ಬದುಕುವ ಹಕ್ಕನ್ನು ಹೊಂದಿದ್ದು ಕರುಣೆಯಿಂದ ಜೀವಿಗಳನ್ನು ನೋಡಬೇಕೆಂದು ಉಪದೇಶಿಸಿದರು.
ಮನುಷ್ಯನ ಚಿಂತೆಗಳಿಗೆ ಅಂತ್ಯವಿಲ್ಲ. ಪ್ರತಿಕ್ಷಣ ಒಂದಿಲ್ಲೊಂದು ಸಮಸ್ಯೆಯ ಪರಿಹಾರದ ಬಗ್ಗೆ ಚಿಂತಿಸುತ್ತಾ ಇರುತ್ತಾನೆ. ಶಾಶ್ವತ ಪರಿಹಾರವನ್ನು ಬಯಸುತ್ತಾನೆ. ಮಹಾವೀರರು ಈ ಬಗ್ಗೆ ಅನೇಕಾಂತವಾದವೆಂಬ ವೈಚಾರಿಕ ಪದ್ಧತಿಯನ್ನು ಪರಿಚಯಿಸಿದರು. ಮನುಷ್ಯನು ಚಿಂತಿಸುವ ಕ್ರಮದಲ್ಲೇ ಚಿಂತೆಯ ಪರಿಹಾರವಿದೆ. ಸಮಸ್ಯೆಯ ಒಂದು ಮುಖವನ್ನು ಗ್ರಹಿಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ. ಸಮಸ್ಯೆಯ ಸಮಗ್ರ ಚಿಂತನೆ ಮಾಡಿದಾಗ ಒಂದು ಪರಿಹಾರ ಸಿಗುತ್ತದೆ.
ಈ ಪ್ರಪಂಚದಲ್ಲಿ ಸಾಮಾಜಿಕ ಅಸಮತೋಲನವೆಂಬುದು ಅನಾದಿಕಾಲದಿಂದಲೂ ಬಂದಿದೆ. ಇದರ ಪರಿಹಾರಕ್ಕಾಗಿ ಕಾಲ ಕಾಲಕ್ಕೆ ಮಹಾಪುರುಷರು ಪ್ರಾಮಾಣಿಕ ಪ್ರಯತ್ನ ಮಾಡಿರುತ್ತಾರೆ. ಮಹಾವೀರರ ಸಮಕಾಲಿನರಾದ ಗೌತಮ ಬುದ್ದರು ಕೂಡ ಈ ಪ್ರಯತ್ನ ಮಾಡಿದ್ದರು. ಅದಕ್ಕಾಗಿ ಅಪರಿಗ್ರಹ ಎಂಬ ತತ್ವವನ್ನು ಮಹಾವೀರರು ಬೋಧಿಸಿದರು. ಮನುಷ್ಯನ ಆಸೆ-ಆಕಾಂಕ್ಷೆಗಳಿಗೆ ಮಿತಿಯಿಲ್ಲ. ನಿರಂತರ ಅಪೇಕ್ಷೆಯಿಂದ ಮಾನಸಿಕ ಅಸಮತೋಲನವಾಗುತ್ತದೆ. ಎಲ್ಲದಕ್ಕೂ ಮಿತಿಯಿರಬೇಕು. ತನ್ನ ಹಾಗೂ ಪರಿವಾರದ ಸುಖಿ ಜೀವನಕ್ಕಾಗಿ ಬೇಕಾಗುವಷ್ಟು ಸಂಪತ್ತನ್ನು ಹೊರತುಪಡಿಸಿ ಉಳಿದದನ್ನು ಸಮಾಜದ ವಿವಿಧ ಸೇವೆಗೆ ಬಳಸಬೇಕೆಂದು ಆದೇಶಿಸಿದರು. “ಬೇಕೆನ್ನುವುದೇ ನರಕ, ಸಾಕೆನ್ನುವುದೇ ಮನುಜ ಮಾರ್ಗ”. ಈ ಲೋಕದಲ್ಲಿ ಬದುಕಬೇಕೆಂದರೆ ನಾವೊಬ್ಬರೇ ಬದುಕಲು ಸಾಧ್ಯವಿಲ್ಲ. ನಮ್ಮ ಪರಿಸರದ ಸಹಕಾರ ಅಗತ್ಯ. ಪರಸ್ಪರ ಜೀವಿಗಳು ಉಪಕಾರ ಭಾವನೆಯಿಂದ ಬದುಕಬೇಕು. ಬದುಕನ್ನು ಪ್ರೀತಿಸುವ ಕಲೆ ಮಹಾವೀರರು ಹೇಳಿದರು.
ಮಹಾಪುರುಷರ ನಡೆ-ನುಡಿಗಳು ಯಾವಾಗಲೂ ಆದರ್ಶವಾಗಿರುತ್ತವೆ. ಗುಡಿ-ಗೋಪುರಗಳನ್ನು ಕಟ್ಟಿ ಪೂಜಿಸುವುದು ಅವರ ಆದರ್ಶ ಗುಣಗಳನ್ನು ಹೊಂದಲೆಂದೇ ವಿನಾ ನಮ್ಮ ಶಕ್ತಿಯ ಅನಾವರಣಕ್ಕಾಗಿ ಅಲ್ಲ. ಮಹೋತ್ಸವ ಜಯಂತಿಗಳು ಸದಾ ನಮ್ಮ ಚೈತನ್ಯ ಶಕ್ತಿಯನ್ನು ಜಾಗೃತಗೊಳಿಸಲು ನೆರವಾಗಬೇಕು ಅಲ್ಲದೇ ಆಡಂಬರವಾಗಬಾರದು. ಅವರ ಆಚರಣೆಗಳಿಂದ ನಮ್ಮಗಳ ಚಲನೆ (ಆಚರಣೆ) ಸರಿದಾರಿಗೆ ಬರಲೆಂಬುದೇ ಉದ್ಧೇಶ ಎಂದರು.
ನಂತರ ಮಂಗಳವಾದ್ಯಗಳೊಂದಿಗೆ ಭ|| ಮಹಾವೀರ ತೀರ್ಥಂಕರರ ಪಲ್ಲಕ್ಕಿ ಉತ್ಸವವು ಕ್ಷೇತ್ರದ ಭೋಗಾರ ಬಸದಿಯಿಂದ ರಥಬೀದಿಯ ಮೂಲಕ ಶ್ರೀಮಠಕ್ಕೆ ಮೆರವಣಿಗೆ ಬಂದು ತಲುಪಿತು. ಉತ್ಸವದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಮತ್ತು ಶ್ರೀಕುಂದಕುಂದ ವಿದ್ಯಾಪೀಠದ ವಿದ್ಯಾರ್ಥಿಗಳು, ಹಾಗೂ ಭಕ್ತಾದಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್