ಭೂಮಿ ಹಕ್ಕಿಗಾಗಿ- ಬಿಜೆಪಿ ಬೆಂಬಲಿಸಿ: ಹಾಲಪ್ಪ ಎಚ್ ಹರತಾಳು
ರಿಪ್ಪನ್ ಪೇಟೆ : ಮಲೆನಾಡಿನ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ ವಿಚಾರಧಾರೆಯನ್ನು ವಿಧಾನಸೌಧದ ಒಳಗೂ ಹಾಗೂ ಹೊರಗೂ ಸಮರ್ಥವಾಗಿ ಪ್ರತಿಪಾದಿಸಲು ಈ ಬಾರಿ ಸಾಗರ ವಿಧಾನ ಸಭಾ ಕ್ಷೇತ್ರ ದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಹಾಲಪ್ಪ ಎಚ್. ಹರತಾಳು ಮನವಿ ಮಾಡಿದರು.
ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ ಫಾರಂ ಪಡೆದ ನಂತರ ಪಟ್ಟಣದ ಪುರಾಣ ಪ್ರಸಿದ್ದ ಸಿದ್ದಿವಿನಾಯಕ ಮತ್ತು ಆನ್ನಪೂರ್ಣೇಶ್ವರಿ ಅಮ್ಮನವರ 6 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡಿ ಚುನಾವಣೆಯಲ್ಲಿ ಯಾವುದೇ ವಿಘ್ನಗಳು ಬಾರದೇ ಗೆಲುವು ಸುಲಲಿತವಾಗಲೆಂದು ವಿಘ್ನನಿವಾರಕನಲ್ಲಿ ವಿಶೇಷ ಪ್ರಾರ್ಥನೆ ನಲ್ಲಿಸಿ ದರ್ಶನಾರ್ಶೀವಾದ ಪಡೆದರು.
ನಂತರ ಮಾದ್ಯಮದವರೊಂದಿಗೆ ಮಾತನಾಡಿ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿ ವಿಚಾರ ಮತ್ತು ಮಲೆನಾಡಿನ ಜ್ವಲಂತ ಸಮಸ್ಯೆಗಳ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ವಿಧಾನಸೌದದಲ್ಲಿ ಪರಿಣಾಮಕಾರಿಯಾಗಿ ಚರ್ಚಿಸಲು ಮತ್ತೊಮ್ಮೆ ಆಯ್ಕೆ ಮಾಡುವಂತೆ ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದರು.
ಶನಿವಾರ ಬೆಳಗ್ಗೆ 9 ಗಂಟೆಗೆ ಸಾಗರ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ತದನಂತರ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಕೆ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಆಲವಳ್ಳಿ ವೀರೇಶ್,ಎಂ ಬಿ ಮಂಜುನಾಥ್ ,ಪಿ ರಮೇಶ್ ,ನಾಗರತ್ನ ದೇವರಾಜ್ ,ಮೆಣಸೆ ಆನಂದ್ , ಉದ್ಯಮಿ ನಾಗರಾಜ್ ಶೆಟ್ಟಿ , ಮಂಜುಳಾ ಕೇತಾರ್ಜಿ ರಾವ್, ಮಹಾಲಕ್ಷ್ಮಿ ಅಣ್ಣಪ್ಪ, ಮತ್ತು ಇತರರು ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್