ಮೇ 4ಕ್ಕೆ ಸಾಗರಕ್ಕೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್

ಮೇ 1 ರಿಂದಲೇ ಮಧ್ಯದಂಗಡಿ ಬಂದ್ ಮಾಡಿ ಅಧಿಕಾರಿಗಳ ಬದಲಾಯಿಸಿ – ಕೆ ದಿವಾಕರ್

ಮೇ 4 ಕ್ಕೆ ಸಾಗರಕ್ಕೆ ಆಮ್ ಆದ್ಮಿ ಪರ ಪ್ರಚಾರ ಸಭೆಗೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್

ರಿಪ್ಪನ್‌ಪೇಟೆ;- ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಭ್ಯರ್ಥಿ ಹರತಾಳು ಹಾಲಪ್ಪ ಆಧಿಕಾರ ಚಲಾಯಿಸಿ ಮಧ್ಯವನ್ನು ಹಂಚುವ ಹುನ್ನಾರದಲ್ಲಿದ್ದು ಆ ಕಾರಣ ಮೇ.1 ರಂದಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮಧ್ಯಮಾರಾಟವನ್ನು ಬಂದ್ ಮಾಡುವುದು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿರುವ ಮತ್ತು ಚಕ್‌ಪೋಸ್ಟ್ಗಳಲ್ಲಿ ಯಾವುದೇ ವಾಹನವನ್ನು ತಪಾಸಣೆ ಮಾಡದಿರುವುದನ್ನು ನೋಡಿದರೆ ಬಿಜೆಪಿ ಆಕ್ರಮಗಳನ್ನು ಬೆಂಬಲಿಸುತ್ತಿದ್ದಾರೆಂದು ಎಎಪಿ ಪಕ್ಷದ ಅಭ್ಯರ್ಥಿ ಕೆ.ದಿವಾಕರ್ ಆರೋಪಿಸಿದರು.




ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಾಗರ -ಹೊಸನಗರ ತಾಲ್ಲೂಕು ವ್ಯಾಪ್ತಿಯ ಅದಿಕಾರಿಗಳನ್ನು ಬದಲಾಯಿಸಿ ಬೇರೆ ಕೇತ್ರದ ನಿಷ್ಟಾವಂತ ಅಧಿಕಾರಿಗಳನ್ನು ನಿಯೋಜಿಸಬೇಕು.ಈಗಾಗಲೇ ಸಾಗರ ಉಪವಿಭಾಗಾಧಿಕಾರಿಗೆ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸಲಾಗುವುದು ಎಂದು ಹೇಳಿದರು.


ಮೇ ತಿಂಗಳಲ್ಲಿ ಆಮ್ ಆದ್ಮಿ ಪರ ಪ್ರಚಾರಕ್ಕೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ಆಗಮಿಸಲಿದ್ದು ಅವರ ಜೊತೆ ಪಂಜಾಬ್ ಮುಖ್ಯಮಂತ್ರಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಸಾಗರ ಕ್ಷೇತ್ರದಲ್ಲಿ ಆಮ್ ಆದ್ಮಿ ಒಳ ಒಪ್ಪಂದ ಮಾಡಿಕೊಂಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಕ್ರಿಮಿನಲ್ ಹಿನ್ನಲೆಯುಳ್ಳ ಶಾಸಕರ ಜೊತೆ ಒಪ್ಪಂದ ಮಾಡಿಕೊಳ್ಳುವಷ್ಟು ದುರ್ದೆಸೆ ನನಗೆ ಬಂದಿಲ್ಲ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆದಾಯ ಪಟ್ಟಿಯ ಪ್ರಕಾರ ನಾನು ಸಾಗರ ಕ್ಷೇತ್ರದ ಉಳಿದೆಲ್ಲಾ ಅಭ್ಯರ್ಥಿಗಳಿಗಿಂತ ಆರ್ಥಿಕವಾಗಿ ಸಬಲವಾಗಿದ್ದೇನೆ ಎಂದರು.




ಬಿಜೆಪಿ ಆಭ್ಯರ್ಥಿ ಹರತಾಳು ಹಾಲಪ್ಪ ಈಗಾಗಲೇ ನನ್ನ ವಿರುದ್ಧ ಸುಳ್ಳು ಅಪಪ್ರಚಾರ ಮಾಡುತ್ತಿದ್ದು ಎಎಪಿ ಆಭ್ಯರ್ಥಿ ಕೆ.ದಿವಾಕರ ನಿಷ್ಕಿಯ ಎಂದು ಹೋದ ಕಡೆಯಲ್ಲಿ ಪ್ರಚಾರ ಮಾಡುತ್ತಿರುವುದು
ಸುಳ್ಳನ್ನು ಸತ್ಯ ಮಾಡುವುದೇ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಬಿಜೆಪಿ ಪಕ್ಷದವರಿಗೆ ಕರಗತವಾಗಿದೆ ಎಂದರು.

ತಾಲ್ಲೂಕ್ ಎಎಪಿ ಅಧ್ಯಕ್ಷ ಗಣೇಶ್ ಸೂಗೋಡು,ಪಕ್ಷದ ಮುಖಂಡರಾದ ಸಂತೋಷ್ ಆಶ್ರೀತಾ, ಹಸನಬ್ಬ,ಕುಕ್ಕಳಲೇ ಈಶ್ವರಪ್ಪ ಮತ್ತು ಅಶೋಕ್ ಬಿಳಿಕಿ ಹಾಗೂ ಇನ್ನಿತರರು ಹಾಜರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

1 hour ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

2 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

6 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

10 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

13 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago