ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉತ್ತರಾಧಿಕಾರಿಯಾಗಿ ಶಿಕಾರಿಪುರದಲ್ಲಿ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಅವರು ಚುನಾವಣೆ ರಾಜಕೀಯದಿಂದ ಹಿಂದೆ ಸರಿದು ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಟ್ಟಿದ್ದಾರೆ. ಅದರಂತೆ ವಿಜಯೇಂದ್ರ ಅವರು ಶಿಕಾರಿಪುರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ತಮ್ಮ ಕುಟುಂಬದ ಆಸ್ತಿ ಎಷ್ಟು? ಅವರ ಬಳಿ ಏನೆಲ್ಲಾ ಇದೆ ಎನ್ನುವುದನ್ನು ವಿಜಯೇಂದ್ರ ಅವರು ನಾಮಿನೇಷನ್ನಲ್ಲಿ ಮಾಹಿತಿ ನೀಡಿದ್ದಾರೆ.
ಬಿವೈ ವಿಜಯೇಂದ್ರ ಮತ್ತು ಅವರ ಪತ್ನಿ ಪ್ರೇಮಾ ವಿಜಯೇಂದ್ರ ಒಟ್ಟು 126.18 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಆದರೆ, ದಂಪತಿಗೆ ಒಂದೇ ಒಂದು ಸ್ವಂತ ಕಾರು ಇಲ್ಲ.
47 ವರ್ಷದ ವಿಜಯೇಂದ್ರ ಅವರು 46.82 ಕೋಟಿ ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಅವರ ಪತ್ನಿ 7.85 ಕೋಟಿ ಮೌಲ್ಯದ ಚರಾಸ್ತಿಯ ಒಡತಿಯಾಗಿದ್ದಾರೆ. ಇನ್ನು ಈ ದಂಪತಿ ಬಳಿ ಪ್ರಸ್ತುತ 70.11 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಇದೆ ಎಂದು ನಾಮಪತ್ರದ ಅಫಿಡವಿಟ್ನಲ್ಲಿ ತಿಳಿಸಲಾಗಿದೆ.
ಇನ್ನು ವಿಜಯೇಂದ್ರ ಒಟ್ಟು 1.75 ಲಕ್ಷ ರೂ. ಮೌಲ್ಯದ ಟ್ರ್ಯಾಕ್ಟರ್ ಮತ್ತು ಟ್ರೇಲರ್ ಹೊಂದಿದ್ದಾರೆ. ದಂಪತಿ ಬಳಿ ಒಟ್ಟು 2.29 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಸ್ತುಗಳು ಇವೆ. ವಿಜಯೇಂದ್ರ ಅವರ ಬಳಿ 1.34 ಕೆಜಿ ಚಿನ್ನ ಇದ್ದರೆ, ಅವರ ಪತ್ನಿ 1.25 ಕೆಜಿ ಚಿನ್ನಾಭರಣಗಳನ್ನು ಹೊಂದಿದ್ದಾರೆ.
ಶಿಕಾರಿಪುರದಲ್ಲಿ ಕೃಷಿ ಭೂಮಿ, ದೊಡ್ಡಬಳ್ಳಾಪುರ, ರಾಮನಗರ, ಶಿಕಾರಿಪುರ, ಶಿವಮೊಗ್ಗ, ಕಲಬುರಗಿ ಮತ್ತು ಬೆಂಗಳೂರಿನಲ್ಲಿ ಕೃಷಿಯೇತರ ಭೂಮಿ ಹೊಂದಿದ್ದಾರೆ. ಹಾಗೇ ಏಳು ಮನೆಗಳ್ನು ಹೊಂದಿದ್ದಾರೆ. ಇನ್ನು ತಮ್ಮ ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂದು ಅಫಿಡವಿಟ್ನಲ್ಲಿ ಘೋಷಿಸಿಕೊಂಡಿದ್ದಾರೆ. ಲಂಚ ಆರೋಪದ ಬಗ್ಗೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದರೆ, ಮತ್ತೊಂದು ಪ್ರಕರಣ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ್ದು ಎಂದು ತಿಳಿಸಿದ್ದಾರೆ.
ಶಿಕಾರಿಪುರ ಬಿ. ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರ. ಒಟ್ಟು 9 ಬಾರಿ ಕ್ಷೇತ್ರದಲ್ಲಿ ಚುನಾವಣೆ ಎದುರಿಸಿರುವ ಅವರು 8 ಬಾರಿ ಗೆದ್ದಿದ್ದಾರೆ. 1999ರ ಚುನಾವಣೆಯಲ್ಲಿ ಕಾಂಗ್ರೆಸ್ನ ಮಹಾಲಿಂಗಪ್ಪ ಎದುರು ಅವರು ಸೋಲು ಕಂಡಿದ್ದರು. ಇದೀಗ ಶಿಕಾರಿಪುರ ಕ್ಷೇತ್ರವನ್ನು ವಿಜಯೇಂದ್ರ ಅವರಗೆ ಬಿಟ್ಟು ಕೊಟ್ಟಿದ್ದು, ವಿಜಯೇಂದ್ರ ಅವರಿಗೆ ಇದು ಮೊದಲ ಚುನಾವಣೆಯಾಗಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…