ರಿಪ್ಪನ್ಪೇಟೆ;- ಇತ್ತೀಚೆಗೆ ಕಾಂಗ್ರೇಸ್ ಪಕ್ಷದ ಮುಖಂಡರು ನಮ್ಮ ಮನೆಗೆ ಭೇಟಿ ನೀಡಿ ನನ್ನನ್ನು ಕಾಂಗ್ರೇಸ್ ಪಕ್ಷ ಸೇರ್ಪಡೆಯಾಗುವಂತೆ ಒತ್ತಾಯಿಸಿದರು ಅದರೆ ನಾನು ಬಿಜೆಪಿಯ ತತ್ವಸಿದ್ದಾಂತ ಮತ್ತು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರ ಆಭಿವೃದ್ದಿ ಕಾರ್ಯಗಳನ್ನು ಮೆಚ್ಚಿಕೊಳ್ಳುವುದರೊಂದಿಗೆ ಅವರ ಆಭಿಮಾನಿಯಾಗಿರುವ ನಾನು ಬಿಜೆಪಿ ಪಕ್ಷವನ್ನು ಬಿಟ್ಟು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದು ಬಾಳೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿಗೌಡ್ರು ಸ್ಪಷ್ಟ ಪಡಿಸಿದ್ದಾರೆ.
ಮಾದ್ಯಮದವರೊಂದಿಗೆ ಮಾತನಾಡಿ ಕೆಲವರು ನಾನು ಕಾಂಗ್ರೇಸ್ ಪಕ್ಷ ಸೇರಿದ್ದಾರೆಂದು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆಂದು ತಿಳಿದು ನಾನು ಬಹಿರಂಗವಾಗಿಯೇ ಪಕ್ಷವನ್ನು ಬಿಡದೇ ಶಾಸಕರ ಮತ್ತು ಬಿಜೆಪಿ ಪರವಾಗಿ
ಪ್ರಚಾರದಲ್ಲಿ ತೊಡಗಿದ್ದೇನೆಂದು ಪತ್ರಿಕಾ ಹೇಳಿಕೆಯ ಮೂಲಕ ಸ್ಪಷ್ಟನೆ ನೀಡಿ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದರು.
ಇತ್ತೀಚೆಗೆ ಕೃಷ್ಣಮೂರ್ತಿ ಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಹಿನ್ನಲೆಯಲ್ಲಿ ಕೃಷ್ಣಮೂರ್ತಿ ಗೌಡ ಮಾದ್ಯಮಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್