ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾಗದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್
ರಿಪ್ಪನ್ಪೇಟೆ;- ಐದು ವರ್ಷಕ್ಕೊಮ್ಮೆ ನಡೆಯುವ ವಿಧಾನಸಭಾ ಚುನಾವಣೆ ಕಳೆದು ಪುನ: ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಲ್ಲಿನ ನಾಡಕಛೇರಿ ಮತ್ತು ಗ್ರಾಮ ಪಂಚಾಯ್ತಿ ಕಛೇರಿ ಮುಂಭಾಗ ಇನ್ನೂ ಚುನಾವಣಾ ಅಯೋಗದವರು 2018 ರ ವಿಧಾನಸಭಾ ಚುನಾವಣೆ ಬ್ಯಾನರ್ ತಗೆಯದೇ ನಿರ್ಲಕ್ಷö್ಯ ವಹಿಸಿದ್ದಾರೆಂಬುದಕ್ಕೆ ಇಲ್ಲಿ ರಾರಾಜಿಸುತ್ತಿರುವ ಹಳೆಯ ಬ್ಯಾನರ್ಗಳೇ ಸಾಕ್ಷಿಕರಿಸುತ್ತಿವೆ.
ಈಗಾಗಲೇ 2023 ರ ವಿಧಾನಸಭಾ ಚುನಾವಣೆ ಪ್ರಕಟಗೊಂಡು ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ ಕೂಡಾ ನಾಡಕಛೇರಿ ಮತ್ತು ಗ್ರಾಮ ಪಂಚಾಯ್ತಿ ಬಳಿಯಲ್ಲಿ ಆಳವಡಿಸಲಾಗಿರುವ 2018 ನೇ ವರ್ಷದ ಚುನಾವಣಾ ಅಯೋಗದ ವಿಧಾನಸಭಾ ಚುನಾವಣಾ ಪ್ಲೆಕ್ಸ್ ತೆರವುಗೊಳಿಸದೇ ಸ್ಥಳೀಯ ಅಧಿಕಾರಿಗಳು ನಿರ್ಲಕ್ಷ ವಹಿಸಿರುವುದಕ್ಕೆ ಸಾರ್ವಜನಿಕರಲ್ಲಿ ಸುದ್ದಿಗೆ ಗ್ರಾಸವಾಗಿದೆ.
ಸಾರ್ವಜನಿಕರು ಕ್ಷಣ ಕಾಲ ನಾಡಕಛೇರಿಯ ಮತ್ತು ಗ್ರಾಮ ಪಂಚಾಯ್ತಿ ಬಳಿಯಲ್ಲಿನ 2018 ರ ವಿಧಾನಸಭಾ ಚುನಾವಣೆ
ಬ್ಯಾನರ್ ನೋಡಿ ನಾವುಗಳು 2018 ರ ವಿಧಾನಸಭಾ ಚುನಾವಣೆಯಲ್ಲಿ ಇದ್ದೇವೆ ಎನ್ನುವಂತೆ ಭಾಸವಾಗುತ್ತದೆ.ಅದಲ್ಲದೇ ಬ್ಯಾನರ್ ನ ಮೇಲ್ಬಾಗದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರ ಪೋಟೋ ಎದ್ದು ಕಾಣುತಿದ್ದು ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ.
ಇನ್ನಾದರೂ ಎಚ್ಚೆತ್ತು 2018 ರ ಬ್ಯಾನರ್ ತೆರವುಗೊಳಿಸಲು ಮುಂದಾಗುವರೇ ಕಾದು ನೋಡಬೇಕಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್