Headlines

ರಿಪ್ಪನ್‌ಪೇಟೆ – ಮತದಾನ ಪ್ರಕ್ರಿಯೆ ಕುರಿತು ಜಾಗೃತಿಗಾಗಿ ಈ ಸ್ವೀಪ್ ಬಸ್ ಸಂಚಾರ|election

ರಿಪ್ಪನ್‌ಪೇಟೆ :  ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತಿದ್ದು ಮತದಾರರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸಿ, ಮತದಾನ ಪ್ರಮಾಣ ಹೆಚ್ಚಿಸುವುದು ಈ ಸ್ವೀಪ್ ಎಕ್ಸ್‌ಪ್ರೆಸ್ ಬಸ್ ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಐಈಸಿ ಸಮಾಲೋಚನಾಧಿಕಾರಿ ಗಣೇಶ್ ತಿಳಿಸಿದರು.




ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಮತ್ತು ಶಿವಮೊಗ್ಗ ಸ್ವೀಪ್ ಸಮಿತಿ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿ ಕಾರ್ಯಕ್ರಮದ ಕುರಿತು ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸ್ವೀಪ್ ಎಕ್ಸ್‌ಪ್ರೆಸ್ ಒಳಗೆ ಮಾದರಿ ಮತದಾನ ಜಾಗೃತಿ ಕೇಂದ್ರ ಮತದಾನ ಕೇಂದ್ರಗಳಲ್ಲಿನ ಮೂಲಭೂತ ಸೌಲಭ್ಯಗಳ ಇವಿಎಂ ವಿವಿಪ್ಯಾಟ್ ಪ್ರತಿಕೃತಿಗಳು ಹಾಗೂ ಮತದಾನ ಜಾಗೃತಿ ಬಿತ್ತಿ ಚಿತ್ರಗಳಿವೆ. ಬಸ್ ಹೊರ ಭಾಗದಲ್ಲಿ ಸಿ-ವಿಜಿಲ್ ಆ್ಯಪ್ 1950 ಟೋಲ್ ಫ್ರೀ ಕುರಿತು ಮಾಹಿತಿ ಇದೆ.




ಬಸ್ ನಿಲ್ದಾಣ ಮತ್ತು ಅಟೋ ನಿಲ್ದಾಣದಲ್ಲಿನ ಸಾರ್ವಜನಿಕರು ಸ್ವೀಪ್ ಎಕ್ಸ್‌ಪ್ರೆಸ್‌ನಲ್ಲಿನ ಬಸ್ ಒಳಗಿನ ಮತದಾನ ಕೇಂದ್ರದಲ್ಲಿ ಕುಳಿತು ಪರಿವೀಕ್ಷಿಸಿದರು.

ಈ ಸಂದರ್ಭದಲ್ಲಿ ಗ್ರಾಮಪಂಚಾಯ್ತಿ ಪಿಡಿಓ ಚಂದ್ರಶೇಖರ್,ಗ್ರಾಪಂ ಸದಸ್ಯ ಪ್ರಕಾಶ್ ಪಾಲೇಕರ್ ಸಿಬ್ಬಂದಿಗಳಾದ ನಾಗೇಶ್ ಮೋರೆ, ರಾಜೇಶ್, ಇನ್ನಿತರರು ಹಾಜರಿದ್ದರು.






About The Author

Leave a Reply

Your email address will not be published. Required fields are marked *