ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ತಮಡಿಕೊಪ್ಪ ಗ್ರಾಮದಲ್ಲಿ ಶ್ರೀ ಗುರು ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಲೋಕಕಲ್ಯಾಣಕ್ಕಾಗಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಶಾಸಕ ಹರತಾಳು ಹಾಲಪ್ಪ ಗೆಲುವಿಗಾಗಿ ಅವರ ಪರವಾಗಿ ಶ್ರೀ ಕ್ಷೇತ್ರದ ಧರ್ಮದರ್ಶಿಗಳು ಹಾಗೂ ಭಕ್ತರು ಹಾಗೂ ಗೃಹ ಸಚಿವರ ಆಪ್ತ ಸಹಾಯಕರಿಂದ ಹಾಗೂ ಹಾಲಪ್ಪ ಅಭಿಮಾನಿಗಳಿಂದ ಭಾನುವಾರ ಶ್ರೀ ಕ್ಷೇತ್ರದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ವಿದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವು ಸಂಪನ್ನಗೊಂಡಿತು.
ವೇದ ಬ್ರಹ್ಮ ಮಂದಾರ್ತಿ ವೆಂಕಟೇಶಮಯ್ಯ ಮಂದಾರ್ತಿ ರವರ ನೇತೃತ್ವದಲ್ಲಿ ಪುರೋಹಿತ ವರ್ಗ ವೇದ ಘೋಷ ಮಂತ್ರ ಹೋಮ ಹವನಗಳನ್ನು ನೆರವೇರಿಸುವುದರ ಮೂಲಕ ವಿಶೇಷ ಪೂಜೆ ಕೈoಕರ್ಯ ಗಳನ್ನು ನೆರವೇರಿಸಿಕೊಟ್ಟರು.
ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಹರತಾಳು ಹಾಲಪ್ಪನವರ ಶ್ರೇಯೋಭಿವೃದ್ಧಿಗೆ ಹಾಗೂ ಅವರ ಸಜ್ಜನಿಕೆ ರಾಜಕಾರಣಕ್ಕೆ ಒಳ್ಳೆಯದನ್ನು ಬಯಸಿ ಶ್ರೀ ಕ್ಷೇತ್ರದ ಭಕ್ತಾದಿಗಳು ಹಾಗೂ ಕ್ಷೇತ್ರದ ಧರ್ಮದರ್ಶಿ ಪ್ರಕಾಶ್ ರವರು ಹಾಗೂ ಗೃಹ ಸಚಿವರ ಆಪ್ತ ಸಹಾಯಕರಿಂದ ಹಾಗೂ ಶಾಸಕ ಹಾಲಪ್ಪ ಪುತ್ರ ಚೇತನ್ ಹಾಲಪ್ಪ ರವರಿಂದ ಈ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೆಳಗ್ಗೆ ಒಂಬತ್ತು ಗಂಟೆಯಿಂದ ಆರಂಭವಾದ ಪೂಜಾ ಕಾರ್ಯಕ್ರಮ ಮಧ್ಯಾಹ್ನದ ತನಕ ನೆರವೇರಿತು ದೇವಸ್ಥಾನದಲ್ಲಿ ಮಧ್ಯಾನದ ಅನ್ನದಾಸೋಹ ಕಾರ್ಯಕ್ರಮ ನೆರವೇರಿತು.
ನೂರಾರು ಭಕ್ತಾದಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ ದೇವರ ದರ್ಶನ ಹಾಗೂ ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ಧರ್ಮದರ್ಶಿ ಪ್ರಕಾಶ್ ಗೃಹ ಸಚಿವರ ಆಪ್ತ ಸಹಾಯಕ ಅರುಣ್, ಮೋಹನ್ ಸುರೇಶ್ ಹೊನ್ನಾಳಿ ನಾಗರತ್ನ ದೇವರಾಜ್,ಪದ್ಮಾ ಸುರೇಶ್, ಸುಮಾ, ಪವಿತ್ರ ,ಅಕ್ಷತಾ ಇನ್ನು ಮುಂತಾದವರು ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್