ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ – ಆಯನೂರು ಮಂಜುನಾಥ್ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್|AAP

ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ -ಆಯನೂರು ಹೇಳಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್

ರಿಪ್ಪನ್‌ಪೇಟೆ : ಶಿವಮೊಗ್ಗ ನಗರದಲ್ಲಿ ಚುನಾವಣೆಯ ಹಿನ್ನಲೆಯಲ್ಲಿ ಗಲಭೆಗೆ ಸಿದ್ದತೆ ನಡೆದಿದೆ ಎಂಬ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿಕೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಕೂಡಲೇ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಸಾಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನಿಯೋಜಿತ ಅಭ್ಯರ್ಥಿ ಕೆ ದಿವಾಕರ್ ಆಗ್ರಹಿಸಿದರು.




ಸೋಮವಾರ ಪಟ್ಟಣದ ಆಮ್ ಆದ್ಮಿ ಪಕ್ಷದ ಕಛೇರಿಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಒಬ್ಬ ಆಡಳಿತ ಪಕ್ಷದ ಜನಪ್ರತಿನಿಧಿ ಚುನಾವಣೆಗಾಗಿ ಗಲಭೆ ನಡೆಯುತ್ತದೆ ಎನ್ನುತಿದ್ದು ಈ ಬಗ್ಗೆ ಉನ್ನತ ಮಟ್ಟದ ತಖಿಖಾ ದಳ ರಚಿಸಿ ತನಿಖೆ ನಡೆಸುವ ಮೂಲಕ ಮುಂದಾಗುವ ಅನಾಹುತವನ್ನು ತಪ್ಪಿಸಬೇಕಾಗಿದೆ ಇದರಿಂದ ಅಮಾಯಕರು ಬಲಿ ಪಶುಗಳಾಗುವುದರ ಜೊತೆಗೆ ಸಂಕಷ್ಟಕ್ಕೆ ಸಿಲುಕುತ್ತಾರೆ. ಆದ್ದರಿಂದ ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗ ತತ್ತಕ್ಷಣದಿಂದ ಈ ಬಾರಿಯ ಕರ್ನಾಟಕ ವಿಧಾನಸಭೆಯ ಚುನಾವಣೆ ಮುಗಿಯುವವರೆಗೂ ಮಿಲಿಟರಿ ಪಡೆಯನ್ನು ಶಿವಮೊಗ್ಗ ನಗರ ಹಾಗೂ ಜಿಲ್ಲೆಯಲ್ಲಿ ನಿಯೋಜಿಸಬೇಕು. ಆಯನೂರು ಮಂಜುನಾಥ ರವರ ಅಪವಾದನೆಯನ್ನು ಚುನಾವಣಾ ಆಯೋಗ ಕಡೆಗಣಿಸದೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.


ದೇಶ ಹಾಗೂ ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಕಪ್ಪು ಹಣದಿಂದ ಚುನಾವಣೆ ನಡೆಸುತ್ತಿವೆ  ರಾಜ್ಯದ ಅಭಿವೃದ್ಧಿಗೆ ಹಾಗೂ ಉತ್ತಮ ಆಡಳಿತಕ್ಕಾಗಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಬೇಕೆಂದು ಹೇಳಿದರು.

ಆಮ್ ಆದ್ಮಿ ಪಕ್ಷವು ಭ್ರಷ್ಟಾಚಾರ ಮುಕ್ತವಾಗಿದ್ದು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ಸಿನಂತೆ ಕಪ್ಪು ಹಣಕ್ಕಾಗಿ ಆತುರೆಯುವುದಿಲ್ಲ ಯಾವಾಗಲೂ ಜನಪರ ಹಾಗೂ ಅಭಿವೃದ್ಧಿ ಪರವಾಗಿದ್ದು ಉತ್ತಮ ಆಡಳಿತವನ್ನು ನೀಡುವುದರ ಮೂಲಕ ದೇಶದ ಹಾಗೂ ರಾಜ್ಯದ ಪ್ರಗತಿಗೆ  ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು  ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದರ ಮೂಲಕ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ಬೆಂಬಲಿಸಬೇಕು ಎಂದರು.




ಈಗಾಗಲೇ ರಾಷ್ಟ್ರವನ್ನು ಹಾಗೂ ರಾಜ್ಯವನ್ನು ಆಳಿದ ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷವನ್ನು ತೊರೆದು  ಆಮ್ ಆದ್ಮಿ ಪಕ್ಷದತ್ತ ಮತದಾರರು ಒಲವನ್ನು ತೋರಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದಲ್ಲಿ ಹೇಗೆ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಅವರದೇ ಪಕ್ಷದ ಹಿರಿಯ ಮುಖಂಡರುಗಳು ಹೇಳುತ್ತಿದ್ದಾರೆ. ಈಗಾಗಲೇ ಕೆಲವು ಹಿರಿಯ ಮುಖಂಡರುಗಳು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ದೆಹಲಿ ಹಾಗೂ ಪಂಜಾಬಿನಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ  ಪಕ್ಷವು ಅಭಿವೃದ್ಧಿ ಹಾಗೂ ಜನಪರ ಕಾರ್ಯಕ್ರಮಗಳ ಮೂಲಕ ಆ ರಾಜ್ಯಗಳ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಈ ಬಾರಿ ಕರ್ನಾಟಕದ ಜನತೆ ಆಮ್ ಆದ್ಮಿ ಪಕ್ಷಕ್ಕೆ ಬೆಂಬಲಿಸುವ ಮೂಲಕ ರಾಷ್ಟ್ರೀಯ ಪಕ್ಷಗಳಿಗೆ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಪಾಪದ ಹಣದಲ್ಲಿ ಚುನಾವಣೆ ಮಾಡುತ್ತಾರೆ

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷವು ಈ ಬಾರಿ ಜನರಿಂದ ಕೊಳ್ಳೆ ಹೊಡೆದ ಪಾಪಾದ ಹಣದಲ್ಲಿ ಚುನಾವಣೆ ನಡೆಸುತ್ತಾರೆ.ಅದಕ್ಕೆ ಉದಾಹರಣೆಯಾಗಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಅಲ್ಲಲ್ಲಿ ವಶ ಪಡಿಸಿಕೊಳ್ಳುತ್ತಿರುವ ಅಕ್ರಮ ಮದ್ಯ,ಸೀರೆ ,ಕುಕ್ಕರ್ ಕೋಟಿಗಟ್ಟಲೇ ಹಣವೇ ಸಾಕ್ಷಿಯಾಗಿದೆ ಎಂದರು.

ಬೇಳೂರು ಮೂಲ ಕಾಂಗ್ರೆಸ್ಸಿಗರಲ್ಲ ಎಂದವರು ಈಗ ಹೊತ್ತು ಮೆರೆಯುತಿದ್ದಾರೆ.

ಬೇಳೂರು ಗೋಪಾಲಕೃಷ್ಣ ಮೂಲ ಕಾಂಗ್ರೆಸ್ಸಿಗನಲ್ಲ ಹಾಗಾಗಿ ಅವರಿಗೆ  ಟಿಕೆಟ್ ನೀಡಬಾರದು ಎಂದು ಬೆಂಗಳೂರಿನಲ್ಲಿ ಲಾಭಿ‌ ಮಾಡಿದ್ದ ಕಾಗೋಡು ತಿಮ್ಮಪ್ಪ ಈಗ ಅವರನ್ನೇ ಹೊತ್ತು ಮೆರೆಸುತಿದ್ದಾರೆ.ಕಾಂಗ್ರೆಸ್ ನಲ್ಲಿ ಹತ್ತಾರು ಬಣಗಳಿದ್ದು ಅದರ ಫಲಿತಾಂಶ ಈ ಚುನಾವಣೆಯಲ್ಲಿ ಅವರು ಪಡೆಯಲಿದ್ದಾರೆ ಎಂದರು.




ಸಾಗರ ಕ್ಷೇತ್ರದ ಹಾಲಿ ಶಾಸಕ ಹರತಾಳು ಹಾಲಪ್ಪ ರವರ ವಿರುದ್ದ ಅವರದೇ ಪಕ್ಷದಲ್ಲಿ ನೂರೆಂಟು ವಿಘ್ನಗಳಿವೆ ಹೀಗಿದ್ದು ನನ್ನನ್ನು ಕೇವಲ ಒಂದು ಜಾತಿಗೆ ಸೀಮಿತ ಮಾಡುವ ಮೂಲಕ ನನ್ನನ್ನು ಹೆಣೆಯುವ ಕೆಲಸ ಮಾಡುತಿದ್ದಾರೆ.ಆಮ್ ಆದ್ಮಿ ಪಕ್ಷವು ಸಾಗರ ಕ್ಷೇತ್ರದಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡುತಿದ್ದು ಎಲ್ಲರೂ ಅಚ್ಚರಿ ಪಡುವಂತಹ ಫಲಿತಾಂಶ ಹೊರಬೀಳಲಿದೆ ಎಂದರು.

ಈ ಸಂಧರ್ಭದಲ್ಲಿ ಆಮ್ ಆದ್ಮಿ ಪಕ್ಷದ ತಾಲೂಕ್ ಅಧ್ಯಕ್ಷ ಗಣೇಶ್ ಸೂಗೋಡು ,ಮುಖಂಡರಾದ ಸಂತೋಷ್ ಆಶ್ರೀತಾ ,ಈಶ್ವರಪ್ಪ ಗೌಡ ಹಾಗೂ ಇನ್ನಿತರರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

2 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

3 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago