ಸಾಗರದ ಪ್ರತಿಷ್ಠಿತ RBD ಗ್ರೂಪ್ಸ್ ನ ಮಹೇಶ್ ಮತ್ತು ಜಲೀಲ್ ನೂರಾರು ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಸೇರ್ಪಡೆ

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ದಿನಕಳೆದಂತೆ ರಂಗೇರುತಿದ್ದು ಅಭಿವೃದ್ದಿಗಿಂತ ಪ್ರೀತಿ ವಿಶ್ವಾಸಕ್ಕೆ ನಮ್ಮ ಸಹಕಾರ ಎಂದು ಕ್ಷೇತ್ರದ ಜನ ತೀರ್ಮಾನ ಮಾಡಿದಂತೆ ಭಾಸವಾಗುತಿದ್ದು ಆ ನಿಟ್ಟಿನಲ್ಲಿ ಯುವಕ ಯುವತಿಯರಿಂದ ಹಿಡಿದ್ದು ವೃದ್ದರವರೆಗೂ ಬೇಳೂರು ಗೋಪಾಲಕೃಷ್ಣ ರವರಿಗೆ ಬೆಂಬಲ ಸೂಚಿಸುತ್ತಿರುವುದು ಎದ್ದು ಕಾಣುತ್ತಿದೆ.




ಹೌದು ಸಾಗರದ ಪ್ರಖ್ಯಾತ ಉದ್ಯಮಿಗಳಾದ RBD ಡೆವಲಪರ್ಸ್ ನ  ಜಲೀಲ್ ಮತ್ತು ಮಹೇಶ್ ಇವರು ಸಾಗರ ಕ್ಷೇತ್ರದಾದ್ಯಂತ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡು ಕ್ಷೇತ್ರದಾದ್ಯಂತ ಹಲವು ಅಭಿಮಾನಿಗಳನ್ನು ಹೊಂದಿದ್ದಾರೆಯೇ ಹೊರತು ಯಾವುದೇ ಪಕ್ಷಗಳಲ್ಲಿ ಗುರುತಿಸಿಕೊಂಡವರಲ್ಲ ಆದರೆ ಸಾಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರ ಸಾಮಾಜಿಕ ಕಾಳಜಿ ಹಾಗೂ ಸೇವೆಯನ್ನು ಮನಗಂಡ ಜಲೀಲ್ ಮತ್ತು ಮಹೇಶ್ ರವರು ಇಂದು ಬೇಳೂರು ರವರಿಗೆ ಬೆಂಬಲ ಸೂಚಿಸಿ ತಮ್ಮ ಅಪಾರ ಸಂಖ್ಯೆಯ ಸ್ನೇಹಿತರು ಹಾಗೂ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.


ಇಂದು ಬೆಳಗ್ಗೆ ಗಣಪತಿ ದೇವಸ್ಥಾನದಿಂದ ಸಾವಿರಾರು ಅಭಿಮಾನಿಗಳೊಂದಿಗೆ ಹೊರಟು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಇದೇ ಸಂಧರ್ಭದಲ್ಲಿ ಬೇಳೂರು ಗೋಪಾಲಕೃಷ್ಣ ಮತ್ತು ಕಾಗೋಡು ತಿಮ್ಮಪ್ಪ ರವರಿಗೆ ಬೃಹದಾಕಾರದ ಹಾರವನ್ನು RBD ಗ್ರೂಪ್ಸ್ ಹಾಗೂ ಅಭಿಮಾನಿಗಳ ವತಿಯಿಂದ ಹಾಕಿದರು.

ಪಕ್ಷ ಸೇರ್ಪಡೆಯಾದ ನಂತರ ಮಾತನಾಡಿದ ಬೇಳೂರು ಗೋಪಾಲಕೃಷ್ಣ RBD ಗ್ರೂಪ್ ನ ಮಹೇಶ್ ಮತ್ತು ಜಲೀಲ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಿಂದ ತಾಲೂಕಿನ ಕಾಂಗ್ರೆಸ್ ಗೆ ಬಲ ಬಂದಿದೆ.ಸಾಗರ ಕ್ಷೇತ್ರದಾದ್ಯಂತ ಹಲವು ಜನಪರ ಸಾಮಾಜಿಕ ಕಾರ್ಯಗಳನ್ನು ನಡೆಸಿಕೊಂಡು ಬರುತಿದ್ದ ಇವರು ಸಾಗರ ಕ್ಷೇತ್ರದ ದಿಗ್ಗಜರೆಂದೇ ಪ್ರಸಿದ್ದರಾಗಿದ್ದಾರೆ.ಇವರ ಸೇವಾ ಕಾರ್ಯಗಳಲ್ಲಿ ನಾನು ಕೂಡಾ ಮುಂದಿನ ದಿನಗಳಲ್ಲಿ ಕೈ ಜೋಡಿಸುತ್ತೇನೆ ಎಂದರು.




ಈ ಸಂಧರ್ಭದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಮಹೇಶ್ ಮತ್ತು ಜಲೀಲ್ ಬೇಳೂರು ಗೋಪಾಲಕೃಷ್ಣ ರವರನ್ನು ಗೆಲ್ಲಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತಿದ್ದೇವೆ ಹೊರತು ಯಾವುದೇ ಬೇರೆ ಉದ್ದೇಶವಿಲ್ಲ.ಸಾಗರ ಕ್ಷೇತ್ರದಾದ್ಯಂತ ಹಲವಾರು ವರ್ಷಗಳಿಂದ ಅನೇಕ ಸಾಮಾಜಿಕ ಸೇವೆಯನ್ನು ನಡೆಸಿಕೊಂಡು ಬರುತ್ತಿರುವ ನಮಗೆ ಒಬ್ಬ ಸಹೃದಯ ನಾಯಕ ಬೇಕು ಹಾಗಾಗಿ ಬೇಳೂರು ಗೋಪಾಲಕೃಷ್ಣ ರವರನ್ನು ಬೆಂಬಲಿಸುತಿದ್ದೇವೆ ಎಂದರು.

ಈ ಸಂಧರ್ಭದಲ್ಲಿ ಕಾಗೋಡು ತಿಮ್ಮಪ್ಪ, ಮಲ್ಲಿಕಾರ್ಜುನ ಹಕ್ರೆ ,ಅನಿತಾ ಕುಮಾರಿ,ತಸ್ರೀಪ್ ಇಬ್ರಾಹಿಂ,ಗಣಪತಿ ಮಂಡಗಳಲೆ, ಲೋಹಿತ್.ಸುದರ್ಶನ್ ತಲಗಣಿ.ಶ್ರೀಧರ್ ಕುಗ್ವೆ.ರಾಜೇಶ್ ಕುಗ್ವೆ.ಸಚಿನ್ ವಿನೋಬನಗರ.ಶರತ್ ನೆರಲಿಗೆ ನಾಗರಾಜ್ ಹೊನ್ನೆ ಮಕ್ಕಿ ಲಕ್ಷ್ಮಿ ಕರುಮನೆ ಹಾಗೂ ಇನ್ನಿತರರಿದ್ದರು.






ಮಾಹಿತಿ – ಮಲೆನಾಡ ರಹಸ್ಯ


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 hour ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

7 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago