ಸಾಗರ : ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ಕೆಲಸ ಮಾಡಿಕೊಡಬೇಕು. ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತೀ.ನ.ಶ್ರೀನಿವಾಸ್ ತಿಳಿಸಿದರು.
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ, ಸಚ್ಚಾರಿತ್ರ್ಯದ ರಾಜಕಾರಣಕ್ಕೆ ಮುನ್ನುಡಿ ಬರೆಯಲು ನಾನು ಸ್ಪರ್ಧೆ ಮಾಡಿದ್ದೇನೆ. ಸಾಗರ ಕ್ಷೇತ್ರದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ 5 ಸಾವಿರ ಕುಟುಂಬವಿದೆ. 63ವರ್ಷವಾದರೂ ಅವರಿಗೆ ಹಕ್ಕುಪತ್ರ ಸಿಕ್ಕಿಲ್ಲ. ಅರಣ್ಯ ಭೂಮಿ ಸಾಗುವಳಿದಾರರದ್ದು 14 ಸಾವಿರ ಕುಟುಂಬವಿದ್ದು ಅವರ ಎಲ್ಲ ಅರ್ಜಿಯನ್ನು ವಜಾ ಮಾಡಲಾಗಿದೆ. ಸಿಂಗಳೀಕ ಅಭಯಾರಣ್ಯ ಮಾಡಿ ಜನರು ರಸ್ತೆಯಲ್ಲಿ ತಿರುಗಲು ಸಾಧ್ಯವಾಗದ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸ್ಲಂ ಮಾಡಿದ್ದಾರೆ. ಅದನ್ನು ಸುಂದರಗೊಳಿಸುವುದು ನನ್ನ ಪ್ರಮುಖ ಆದ್ಯತೆಯಾಗಿದೆ ಎಂದರು.
ಮಲೆನಾಡನ್ನು ಶ್ಮಶಾನ ಮಾಡಲು ಹೊರಟಿದ್ದಾರೆ.38 ಸಾವಿರ ಎಕರೆ ರೈತರ ಹಕ್ಕುಪತ್ರ, ಆರ್ಟಿಸಿ ಇರುವ ಜಮೀನು ಅರಣ್ಯ ಎಂದು ಘೋಷಣೆ ಮಾಡಿದ್ದಾರೆ. ರೈತರು ಅವರ ಕುಟುಂಬ ತಮ್ಮ ಹಕ್ಕು ದಕ್ಕಿಸಿಕೊಳ್ಳಲು ನ್ಯಾಯಾಲಯಕ್ಕೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಇದರ ವಿರುದ್ಧ ಮಲೆನಾಡಿನ ಶಾಸಕನಾಗಿ ಸದನದಲ್ಲಿ ಗಟ್ಟಿಧ್ವನಿಯಲ್ಲಿ ಮಾತನಾಡುತ್ತೇನೆ. ರಾಜ್ಯಕ್ಕೆ ವಿದ್ಯುತ್ ಕೊಟ್ಟವರು ವಿದ್ಯುತ್ ಸಂಪರ್ಕಕ್ಕೆ ಪರಿತಪಿಸಬೇಕಾಗಿದೆ. ಇನ್ನು ಅನೇಕ ಆಶಯಗಳೊಂದಿಗೆ ಕಣಕ್ಕೆ ಇಳಿಯುತ್ತಿದ್ದೇನೆ ಎಂದು ಹೇಳಿದರು.
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…