ಸಾಗರ : ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ಕೆಲಸ ಮಾಡಿಕೊಡಬೇಕು. ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತೀ.ನ.ಶ್ರೀನಿವಾಸ್ ತಿಳಿಸಿದರು.
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ, ಸಚ್ಚಾರಿತ್ರ್ಯದ ರಾಜಕಾರಣಕ್ಕೆ ಮುನ್ನುಡಿ ಬರೆಯಲು ನಾನು ಸ್ಪರ್ಧೆ ಮಾಡಿದ್ದೇನೆ. ಸಾಗರ ಕ್ಷೇತ್ರದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ 5 ಸಾವಿರ ಕುಟುಂಬವಿದೆ. 63ವರ್ಷವಾದರೂ ಅವರಿಗೆ ಹಕ್ಕುಪತ್ರ ಸಿಕ್ಕಿಲ್ಲ. ಅರಣ್ಯ ಭೂಮಿ ಸಾಗುವಳಿದಾರರದ್ದು 14 ಸಾವಿರ ಕುಟುಂಬವಿದ್ದು ಅವರ ಎಲ್ಲ ಅರ್ಜಿಯನ್ನು ವಜಾ ಮಾಡಲಾಗಿದೆ. ಸಿಂಗಳೀಕ ಅಭಯಾರಣ್ಯ ಮಾಡಿ ಜನರು ರಸ್ತೆಯಲ್ಲಿ ತಿರುಗಲು ಸಾಧ್ಯವಾಗದ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸ್ಲಂ ಮಾಡಿದ್ದಾರೆ. ಅದನ್ನು ಸುಂದರಗೊಳಿಸುವುದು ನನ್ನ ಪ್ರಮುಖ ಆದ್ಯತೆಯಾಗಿದೆ ಎಂದರು.
ಮಲೆನಾಡನ್ನು ಶ್ಮಶಾನ ಮಾಡಲು ಹೊರಟಿದ್ದಾರೆ.38 ಸಾವಿರ ಎಕರೆ ರೈತರ ಹಕ್ಕುಪತ್ರ, ಆರ್ಟಿಸಿ ಇರುವ ಜಮೀನು ಅರಣ್ಯ ಎಂದು ಘೋಷಣೆ ಮಾಡಿದ್ದಾರೆ. ರೈತರು ಅವರ ಕುಟುಂಬ ತಮ್ಮ ಹಕ್ಕು ದಕ್ಕಿಸಿಕೊಳ್ಳಲು ನ್ಯಾಯಾಲಯಕ್ಕೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಇದರ ವಿರುದ್ಧ ಮಲೆನಾಡಿನ ಶಾಸಕನಾಗಿ ಸದನದಲ್ಲಿ ಗಟ್ಟಿಧ್ವನಿಯಲ್ಲಿ ಮಾತನಾಡುತ್ತೇನೆ. ರಾಜ್ಯಕ್ಕೆ ವಿದ್ಯುತ್ ಕೊಟ್ಟವರು ವಿದ್ಯುತ್ ಸಂಪರ್ಕಕ್ಕೆ ಪರಿತಪಿಸಬೇಕಾಗಿದೆ. ಇನ್ನು ಅನೇಕ ಆಶಯಗಳೊಂದಿಗೆ ಕಣಕ್ಕೆ ಇಳಿಯುತ್ತಿದ್ದೇನೆ ಎಂದು ಹೇಳಿದರು.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…