ಸಾಗರ-ಹೊಸನಗರ ಕ್ಷೇತ್ರಕ್ಕೆ ಬಿ.ಯುವರಾಜ್ರವರು ಬಿ.ಜೆ.ಪಿ ಬಂಡಾಯ ಅಭ್ಯರ್ಥಿಯಾಗಿ ವಿಧಾನ ಸಭೆಯ ಚುನಾವಣೆಗೆ ಸ್ಪರ್ದಿಸುವುದಾಗಿ ತಿಳಿಸಿದ್ದಾರೆ.
ಅವರು ಹೊಸನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಹಾಲಿ ಬಿ.ಜೆ.ಪಿ ಜಿಲ್ಲಾ ಸಮಿತಿ ಸದಸ್ಯರು ಹಾಲಿ ಜಿಲ್ಲಾ ಅಖಿಲ ಭಾರತ ವೀರಶೈವ ಮಾಹಾಸಭಾ ಕಾರ್ಯದರ್ಶಿಗಳು ಆಗಿದ್ದು ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ತಾಲೂಕು ಬಿ.ಜೆ.ಪಿ. ಅಧ್ಯಕ್ಷರಾಗಿ, ಜಿಲ್ಲಾ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ತಾಲೂಕ ಅಖಿಲ ಭಾರತ ವೀರಶೈವ ಸಂಘದ ಅಧ್ಯಕ್ಷರಾಗಿ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ನನಗೆ ಬಿಜೆಪಿ ಪಕ್ಷ ಇಲ್ಲಿಯವರೆಗೆ ಸರಿಯಾಗಿ ಗೌರವಯುತವಾಗಿ ನಡೆದುಕೊಂಡಿಲ್ಲ ಹಾಗೂ ಬಿಜೆಪಿ ಶಾಸಕ ಹರತಾಳು ಹಾಲಪ್ಪನವರು ಸೌಜನ್ಯಕ್ಕೂ ಗೌರವಿಸುತ್ತಿಲ್ಲ.
ನಾನು ಕಳೆದ ಮೂವತ್ತು ವರ್ಷಗಳಿಂದ ಮಲ್ಲವ ವೀರಶೈವರು ಸೊರಬ, ಸಾಗರ, ತೀರ್ಥಹಳ್ಳಿ, ಶಿವಮೊಗ್ಗ ಕ್ಷೇತ್ರಗಳಲ್ಲಿ ಎಲ್ಲಾ ಚುನಾವಣೆಗಳಲ್ಲಿ ಬೆಂಬಲಿಸಿಕೊಂಡು ಬಂದಿದ್ದರೂ ಸಹ ಸಮಾಜದ ಯಾರೊಬ್ಬರಿಗೂ ವಿಧಾನಸಭೆಗಾಗಲಿ ವಿಧಾನ ಪರಿಷತ್ಗಾಗಲಿ ಯಾವುದೇ ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿಯಾಗಲಿ ನೇಮಕ ಮಾಡದಿರುವದನ್ನು ಖಂಡಿಸಿ ಸಾಗರ ವಿಧಾನ ಸಭೆಗೆ ಸ್ಪರ್ಧಿಸಲು ಸಂಕಲ್ಪ ಮಾಡಿರುವುದಾಗಿ ಹಾಗೂ ಬಿಜೆಪಿಯ ಹಾಲಿ ಸದಸ್ಯರ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭೆಯ ಚುನಾವಣೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್