ಏಪ್ರಿಲ್ 5 ರಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದ ಬಾಳೇಬರೆ ಘಾಟಿ ಮತ್ತೆ 15 ದಿನಗಳ ಕಾಲ ಬಂದ್ ಆಗಿರಲಿದೆ. ಇದರಿಂದಾಗಿ ಹೊಸನಗರ-ಕುಂದಾಪುರ, ಸಾಗರ-ಕುಂದಾಪುರ ಹಾಗೂ ತೀರ್ಥಹಳ್ಳಿ ಕುಂದಾಪುರ ಮಾರ್ಗಕ್ಕೆ ಪರ್ಯಾಯ ರಸ್ತೆಗಳನ್ನ ಸೂಚಿಸಲಾಗಿದೆ.
ಫೆ.5 ರಂದು ಬಾಳೇಬರೆ ಘಾಟಿಯಲ್ಲಿ 2570 ಮೀಟರ್ ಪೇವ್ ಮೆಂಟ್ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು ಏ.5 ರ ವರೆಗೆ ಬಾಳೇಬರೆ ಘಾಟಿಯನ್ನ ಬಂದ್ ಮಾಡಿ ಬದಲೀ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಕಾರಣಾಂತರದಿಂದ ಏ.15 ರವರೆಗೆ ಘಾಟಿಯಲ್ಲಿ ವಾಹನ ಸಂಚಾರವನ್ನ ಬಂದ್ ಮಾಡಿ ಕಾಮಗಾರಿ ಮುಂದುವರೆಸಲಾಗುತ್ತಿದೆ.
ತೀರ್ಥಹಳ್ಳಿ, ಆಗುಂಬೆ, ಸೋಮೇಶ್ವರ, ಹಾಲಾಡಿ ಬಸ್ರೂರು ಮಾರ್ಗವಾಗಿ ಕುಂದಾಪುರಕ್ಕೆ ಲಘುವಾಹನಗಳು ಸಂಚರಿಸಬಹುದಾಗಿದೆ. ಭಾರಿ ವಾಹನಗಳು ತೀರ್ಥಹಳ್ಳಿ, ಕಾನುಗೋಡು, ನಗರ, ಕೊಲ್ಲೂರು, ಮೂಲಕ ಕುಂದಾಪುರಕ್ಕೆ ಸಂಚರಿಸಬಹುದಾಗಿದೆ.
ಹೊಸನಗರ ಮೂಲಕ ಕುಂದಾಪುರಕ್ಕೆ ಸಂಚರಿಸುವ ಲಘು ಅಥವಾ ಭಾರಿ ವಾಹನಗಳು ಹೊಸನಗರ, ನಗರ ಹಾಗೂ ಕೊಲ್ಲೂರು ರಸ್ತೆಯ ಮೂಲಕ ಕುಂದಾಪುರಕ್ಕೆ ಸಂಚರಿಸಬಹುದಾಗಿದೆ.
ಅವಧಿ ವಿಸ್ತರಣೆಗೆ ಕಾಮಗಾರಿ ನಡೆಸುವ ಯಂತ್ರೋಪಕರಣಗಳು ಪದೇ ಪದೇ ದುರಸ್ತಿಗೆ ಬಂದ ಪರಿಣಾಮ ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಲು ಸಾಧ್ಯವಾಗಿಲ್ಲ. ಹಾಗಾಗಿ ಏ.15 ರ ವರೆಗೆ ಕಾಮಗಾರಿ ಅವಧಿಯನ್ನ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸ್ಪಷ್ಟನೆ ನೀಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್