ಏಪ್ರಿಲ್ 5 ರಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದ ಬಾಳೇಬರೆ ಘಾಟಿ ಮತ್ತೆ 15 ದಿನಗಳ ಕಾಲ ಬಂದ್ ಆಗಿರಲಿದೆ. ಇದರಿಂದಾಗಿ ಹೊಸನಗರ-ಕುಂದಾಪುರ, ಸಾಗರ-ಕುಂದಾಪುರ ಹಾಗೂ ತೀರ್ಥಹಳ್ಳಿ ಕುಂದಾಪುರ ಮಾರ್ಗಕ್ಕೆ ಪರ್ಯಾಯ ರಸ್ತೆಗಳನ್ನ ಸೂಚಿಸಲಾಗಿದೆ.
ತೀರ್ಥಹಳ್ಳಿ, ಆಗುಂಬೆ, ಸೋಮೇಶ್ವರ, ಹಾಲಾಡಿ ಬಸ್ರೂರು ಮಾರ್ಗವಾಗಿ ಕುಂದಾಪುರಕ್ಕೆ ಲಘುವಾಹನಗಳು ಸಂಚರಿಸಬಹುದಾಗಿದೆ. ಭಾರಿ ವಾಹನಗಳು ತೀರ್ಥಹಳ್ಳಿ, ಕಾನುಗೋಡು, ನಗರ, ಕೊಲ್ಲೂರು, ಮೂಲಕ ಕುಂದಾಪುರಕ್ಕೆ ಸಂಚರಿಸಬಹುದಾಗಿದೆ.
ಹೊಸನಗರ ಮೂಲಕ ಕುಂದಾಪುರಕ್ಕೆ ಸಂಚರಿಸುವ ಲಘು ಅಥವಾ ಭಾರಿ ವಾಹನಗಳು ಹೊಸನಗರ, ನಗರ ಹಾಗೂ ಕೊಲ್ಲೂರು ರಸ್ತೆಯ ಮೂಲಕ ಕುಂದಾಪುರಕ್ಕೆ ಸಂಚರಿಸಬಹುದಾಗಿದೆ.
ಅವಧಿ ವಿಸ್ತರಣೆಗೆ ಕಾಮಗಾರಿ ನಡೆಸುವ ಯಂತ್ರೋಪಕರಣಗಳು ಪದೇ ಪದೇ ದುರಸ್ತಿಗೆ ಬಂದ ಪರಿಣಾಮ ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಲು ಸಾಧ್ಯವಾಗಿಲ್ಲ. ಹಾಗಾಗಿ ಏ.15 ರ ವರೆಗೆ ಕಾಮಗಾರಿ ಅವಧಿಯನ್ನ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸ್ಪಷ್ಟನೆ ನೀಡಿದ್ದಾರೆ.
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…