ಏಪ್ರಿಲ್ 5 ರಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದ ಬಾಳೇಬರೆ ಘಾಟಿ ಮತ್ತೆ 15 ದಿನಗಳ ಕಾಲ ಬಂದ್ ಆಗಿರಲಿದೆ. ಇದರಿಂದಾಗಿ ಹೊಸನಗರ-ಕುಂದಾಪುರ, ಸಾಗರ-ಕುಂದಾಪುರ ಹಾಗೂ ತೀರ್ಥಹಳ್ಳಿ ಕುಂದಾಪುರ ಮಾರ್ಗಕ್ಕೆ ಪರ್ಯಾಯ ರಸ್ತೆಗಳನ್ನ ಸೂಚಿಸಲಾಗಿದೆ.
ತೀರ್ಥಹಳ್ಳಿ, ಆಗುಂಬೆ, ಸೋಮೇಶ್ವರ, ಹಾಲಾಡಿ ಬಸ್ರೂರು ಮಾರ್ಗವಾಗಿ ಕುಂದಾಪುರಕ್ಕೆ ಲಘುವಾಹನಗಳು ಸಂಚರಿಸಬಹುದಾಗಿದೆ. ಭಾರಿ ವಾಹನಗಳು ತೀರ್ಥಹಳ್ಳಿ, ಕಾನುಗೋಡು, ನಗರ, ಕೊಲ್ಲೂರು, ಮೂಲಕ ಕುಂದಾಪುರಕ್ಕೆ ಸಂಚರಿಸಬಹುದಾಗಿದೆ.
ಹೊಸನಗರ ಮೂಲಕ ಕುಂದಾಪುರಕ್ಕೆ ಸಂಚರಿಸುವ ಲಘು ಅಥವಾ ಭಾರಿ ವಾಹನಗಳು ಹೊಸನಗರ, ನಗರ ಹಾಗೂ ಕೊಲ್ಲೂರು ರಸ್ತೆಯ ಮೂಲಕ ಕುಂದಾಪುರಕ್ಕೆ ಸಂಚರಿಸಬಹುದಾಗಿದೆ.
ಅವಧಿ ವಿಸ್ತರಣೆಗೆ ಕಾಮಗಾರಿ ನಡೆಸುವ ಯಂತ್ರೋಪಕರಣಗಳು ಪದೇ ಪದೇ ದುರಸ್ತಿಗೆ ಬಂದ ಪರಿಣಾಮ ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಲು ಸಾಧ್ಯವಾಗಿಲ್ಲ. ಹಾಗಾಗಿ ಏ.15 ರ ವರೆಗೆ ಕಾಮಗಾರಿ ಅವಧಿಯನ್ನ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸ್ಪಷ್ಟನೆ ನೀಡಿದ್ದಾರೆ.
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…