ಕರಾವಳಿ ಹಾಗೂ ಮಲೆನಾಡಿಗೆ ಸಂಪರ್ಕ ಕಲ್ಪಿಸುವ ಬಾಳೆಬರೆ (ಹುಲಿಕಲ್) ಘಾಟ್ನ ಕಾಂಕ್ರಿಟೀಕರಣ ಕಾಮಗಾರಿಯು ಪೂರ್ಣಗೊಂಡಿದ್ದು, ಶನಿವಾರ (ಏ.15) ರಾತ್ರಿಯಿಂದ ವಾಹನ ಸಂಚಾರ ಪುನಃ ಆರಂಭಗೊಂಡಿದೆ.
ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ನಿರ್ಮಾಣ ಕಾಮಗಾರಿಗಳಿಗಾಗಿ ಫೆ. 5 ರಿಂದ ಏ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಏ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದುಹೋಗುವ ಬಾಳೆಬರೆ ಘಾಟಿಯ ಉಡುಪಿ ಜಿಲ್ಲಾ ಯೋಜನೆಯು 3 ಕೋಟಿ ರೂ. ವೆಚ್ಚದಲ್ಲಿ ಅಂದಾಜು 1 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲಾ 10 ಕೋಟಿ ರೂ. ವೆಚ್ಚದಲ್ಲಿ 2.5 ಕಿ.ಮೀ. ಸೇರಿದಂತೆ ಒಟ್ಟು 3.5 ಕಿ.ಮೀ. ದೂರದವರೆಗೆ ರಸ್ತೆ ಅಗಲ, ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ ನಿರ್ಮಾಣ ಕಾರ್ಯ ನಡೆದಿದೆ.
ಬಾಳೆಬರೆ ಘಾಟಿಯು ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆ ಸೇರಿ ಹುಲಿಕಲ್ ಚೆಕ್ ಪೋಸ್ಟ್ನಿಂದ ಹೊಸಂಗಡಿಯ ಘಾಟಿಯ ಬುಡದ ವರೆಗೆ 14.5 ಕಿ.ಮೀ. ದೂರವಿದೆ. ಶಿವಮೊಗ್ಗ ಜಿಲ್ಲೆ 8 ಕಿ.ಮೀ. ಹೊರಗೆ ಈ ಹಿಂದೆ ಸ್ವಲ್ಪ ಕಾಂಕ್ರಿಟೀಕರಣ ಆಗಿದ್ದು, ಈಗ ಬಾಕಿ ಇರುವ 2.5 ಕಿ.ಮೀ.ನೊಂದಿಗೆ ಕಾಮಗಾರಿಯು ಪೂರ್ಣಗೊಂಡಿದೆ. ಉಡುಪಿ ಜಿಲ್ಲೆ 6.5 ಕಿ.ಮೀ. ಘಾಟಿಯ ಹೊರಗೆ ಈ ಹಿಂದೆ 2 ಕಿ.ಮೀ., ಈಗ 1 ಕಿ.ಮೀ. ಸೇರಿದಂತೆ ಒಟ್ಟು 3 ಕಿ.ಮೀ. ಕಾಂಕ್ರಿಟೀಕರಣಗೊಂಡಂತಾಗಿದೆ. ಇನ್ನು ಉಡುಪಿ ಜಿಲ್ಲೆಯ ಭಾಗ 3.5 ಕಿ.ಮೀ. ಘಾಟಿ ರಸ್ತೆ ಕಾಂಕ್ರಿಟೀಕರಣ ಬಾಕಿ ಇದೆ.
ಬಾಳೆಬರೆ (ಹುಲಿಕಲ್) ಘಾಟ್ನಲ್ಲಿ ವಾಹನ ಸಂಚಾರ ಪುನಃ ಆರಂಭಗೊಂಡಿರುವುದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ. ಜತೆಗೆ ಇನ್ನು ಬಾಕಿ ಉಳಿದಿರುವ ಉಡುಪಿ ಜಿಲ್ಲೆಯ ಭಾಗದ 3.5 ಕಿ.ಮೀ. ಘಾಟಿ ರಸ್ತೆಯನ್ನು ಆದಷ್ಟು ಶೀಘ್ರವೇ ಕಾಂಕ್ರಿಟೀಕರಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬುದು ಸ್ಥಳೀಯ ನಿವಾಸಿಗಳ ಒತ್ತಾಯವಾಗಿದೆ.
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…