ಹೊಸನಗರ : ಚಿರತೆ ದಾಳಿಗೆ ಹಸು ಸಾವು – ಆತಂಕದಲ್ಲಿ ಗ್ರಾಮಸ್ಥರು|leopard

ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಿರತೆ ದಾಳಿ ಹಸು ಸಾವು – ಮುಜಾಗ್ರತೆ ಕ್ರಮ ಕೈಗೊಳ್ಳಲು ಅರಣ್ಯ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹ

ಹೊಸನಗರ: ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳಿಂದ ಚಿರತೆ ಓಡಾಟ ನಡೆಸುತ್ತಿದೆ ಎಂದು ಗ್ರಾಮಸ್ಥರು ಹೆದರಿ-ಹೆದರಿ ಓಡಾಟ ನಡೆಸುತ್ತಿದ್ದು ಮುಡ್ರಳ್ಳಿ ಬಳಿ ಒಂದು ಹಸು ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.ಚಿರತೆ ಓಡಾಟ ನಡೆಸುತ್ತಿರುವುದು ಈ ಘಟನೆಯಿಂದ ದೃಡಪಟ್ಟಿದೆ.




ಹೊಸನಗರ ತಾಲ್ಲೂಕು ತ್ರಿಣಿವೆ- ಜಕ್ಕನಗದ್ದೆ ಮುಡ್ರಳ್ಳಿ, ಇಟ್ಟಕ್ಕಿ ತೊಗರೆಗಳಲ್ಲಿ ಸುಮಾರು ನೂರಕಿಂತ ಹೆಚ್ಚು ಮನೆಗಳಿವೆ ಅವರು ದನ ಎಮ್ಮೆಗಳನ್ನು ಕಟ್ಟಿಕೊಂಡು ಹೊಲ ಗದ್ದೆಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ ಅವರು ಪಟ್ಟಣಕ್ಕೆ ಬರಬೇಕೆಂದರೆ ಸುಮಾರು 20ಕಿಮೀಟರ್ ಬರಬೇಕು ಹತ್ತಿರ ಹತ್ತಿರ ಮನೆಗಳಿಲ್ಲ ಈ ಚಿರತೆ ಕಾಟದಿಂದ ಮನೆಯಿಂದ ಹೊರಬರುವುದೇ ಕಷ್ಟಕರವಾಗಿದ್ದು ಅಲ್ಲಿನ ಜನರು ಮನೆಯಿಂದ ಹೊರಬರುತ್ತಿಲ್ಲ.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹೆದರಿ-ಹೆದರಿ ಪರೀಕ್ಷೆಗೆ ಬರುತ್ತಿದ್ದಾರೆ ತಕ್ಷಣ ಅರಣ್ಯ ಇಲಾಖೆಯವರು ಈ ಭಾಗದಲ್ಲಿ ಸಂಚಾರಿಸಿ ಚಿರತೆಯನ್ನು ಹಿಡಿದರೆ ಅಲ್ಲಿನ ಗ್ರಾಮಸ್ಥರ ಮನಸ್ಸು ತಿಳಿಯಗಲಿದೆ.




ಅರಣ್ಯ ಇಲಾಖೆಯವರು ತಕ್ಷಣ ಈ ಭಾಗದಲ್ಲಿ ಸಂಚರಿಸಿ ಚಿರತೆ ಸೆರೆ ಹಿಡಿಯಿರಿ : ತ್ರಿಣಿವೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೃಷ್ಣಮೂರ್ತಿ

ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯತಿಯ ಅಧ್ಯಕ್ಷ ಕೃಷ್ಣಮೂರ್ತಿಯವರು ಮಾತನಾಡಿ ಈ ಭಾಗದಲ್ಲಿ ಚಿರತೆ ಇರುವುದು ಹಸು ಹಿಡಿದಿರುವುದರಿಂದ ದೃಡಪಟ್ಟಿದೆ ಈ ಭಾಗದ ಜನರು ಮುಗ್ದರು ದಿನನಿತ್ಯ ಕೆಲಸ ಮಾಡಿ ಜೀವನ ಸಾಗಿಸುವವರು ಅರಣ್ಯ ಇಲಾಖೆಯ ಸಿಬ್ಬಂದಿಗಳು ಈ ಭಾಗದಲ್ಲಿ ಬೀಡುಬಿಟ್ಟು ತಕ್ಷಣ ಚಿರತೆಯನ್ನು ಸೆರೆ ಹಿಡಿಯದಿದ್ದರೇ ಮುಂದಿನ ದಿನದಲ್ಲಿ ಬಾರೀ ಅನಾಹುತ ಸಂಭವಿಸಲಿದೆ ತಕ್ಷಣ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಚಿರತೆಯನ್ನು ಸೆರೆ ಹಿಡಿಯಲು ಮುಂದಾಗಲೀ ಎಂದರು.


ವರದಿ : ಹೆಚ್.ಎಸ್.ನಾಗರಾಜ್



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

3 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

9 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago