ತರೀಕೆರೆಯಲ್ಲಿ ಚುನಾವಣಾ ಸಿಬ್ಬಂದಿ ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 23 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ. ಸೀಜ್ ಆದ ಬಂಗಾರದ ತೂಕ 40 ಕೆ.ಜಿ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಪೋಲಿಸ್ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 40 ಕೆ.ಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಚಿನ್ನವನ್ನು ಕಂಟೇನರ್ನಲ್ಲಿ ಸಾಗಿಸಲಾಗುತ್ತಿತ್ತು.ಚೆಕ್ಪೋಸ್ಟ್ನಲ್ಲಿ ಕಂಟೇನರ್ ತಡೆದು ತಪಾಸಣೆ ನಡೆಸಿದಾಗ ಆಭರಣಗಳು ಸಾಗಿಸುತ್ತಿರುವುದು ಕಂಡುಬಂದಿದೆ.
ಆಭರಣಗಳಿಗೆ ಪೂರಕವಾಗಿ ಯಾವುದೇ ದಾಖಲೆಗಳು ನೀಡದೇ ಹಿನ್ನೆಲೆಯಲ್ಲಿ ಅದನ್ನು ಸೀಜ್ ಮಾಡಲಾಗಿದೆ. ಆಭರಣಗಳನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಟ್ಯಾಕ್ಸ್ ಕಟ್ಟಬೇಕಾಗುತ್ತದೆ ಎಂಬ ಕಾರಣಕ್ಕೆ ಬಿಲ್ ಇಲ್ಲದೇ ಕೋಟ್ಯಾಂತರ ಮೌಲ್ಯದ ಚಿನ್ನ ಹಾಗೂ ಗುಟ್ಕಾ ಹಾಗೂ ಬಟ್ಟೆ ಮತ್ತು ದಿನಸಿ ವಸ್ತುಗಳನ್ನು ಶಿವಮೊಗ್ಗಕ್ಕೆ ಸಾಗಿಸಲಾಗುತ್ತದೆ.
ಸದ್ಯ ಚೆಕ್ಪೋಸ್ಟ್ಗಳಲ್ಲಿ ಕಟ್ಟು ನಿಟ್ಟಿನ ತಪಾಸಣೆ ನಡೆಯುತ್ತಿರುವುದರಿಂದ ಇಷ್ಟೊಂದು ದೊಡ್ಡ ಮೊತ್ತದ ಚಿನ್ನ ಸೀಜ್ ಆಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್