Headlines

ಪಿಯುಸಿ ಫಲಿತಾಂಶ ಪ್ರಕಟ : ತೀರ್ಥಹಳ್ಳಿಯ ಅನ್ವಿತಾ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ – ಅಮೃತಾ ಕಾಲೇಜಿಗೆ 90.28% ಫಲಿತಾಂಶ

ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಂದು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್…

Read More

ಕಂತೆ ಕಂತೆ ಹಣ ಎಣಿಸಿದ ಸಾಗರ ನಗರಸಭೆ ಉಪಾಧ್ಯಕ್ಷ – ವೀಡಿಯೋ ವೈರಲ್| ಶಾಸಕ ಹಾಲಪ್ಪ ಆಪ್ತನ ವಿರುದ್ದ ಪ್ರಕರಣ ದಾಖಲು|sagara

ಸಾಗರ ನಗರಸಭೆ ಉಪಾಧ್ಯಕ್ಷರ ಮನೆಯಲ್ಲಿ ಹಣ ತುಂಬುತ್ತಿರುವ ವಿಡಿಯೋ ವೈರಲ್ ಆಗಿದ್ದು, ಚುನಾವಣೆ ಆಯೋಗ ಎಫ್ಐಆರ್ ದಾಖಲಿಸಿಕೊಂಡಿದೆ. ಸಾಗರ ನಗರಸಭೆ ಉಪಾಧ್ಯಕ್ಷ ಮಹೇಶ್ ವಿರುದ್ಧ ಎಪ್ಐಆರ್ ದಾಖಲಾಗಿದೆ. ಸಾಗರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರ ಆಪ್ತನಾಗಿರುವ  ಮಹೇಶ್ ಹಣವನ್ನ ಬ್ಯಾಗಿಗೆ ತುಂಬುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಗರ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ದಾನಪ್ಪ ದೂರಿನ ಅನ್ವಯ ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡು  ಸಾಗರ ಠಾಣೆ ಪೋಲೀಸರು ತನಿಖೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಮಹೇಶ್ ಬ್ಯಾಗಿಗೆ…

Read More

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್|election

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ.ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದಲ್ಲಿ ಅಬ್ಬರದ ಪ್ರಚಾರ ಮೆರವಣಿಗೆಗಳು ನಡೆಯುತ್ತಿವೆ. ಆದರೆ ಈ ಅಬ್ಬರದ ಪ್ರಚಾರದ ಮಧ್ಯೆ ಒಬ್ಬ ಇಂಜಿನಿಯರ್ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದು, ಹಣವಂತರು- ಅಬ್ಬರದ ಪ್ರಚಾರದ ಮಧ್ಯೆ ಟೆಕ್ಕಿ (Techie) ಸರಳ ರೀತಿಯಲ್ಲಿ ಅಖಾಡಕ್ಕೆ ಇಳಿದಿದ್ದಾರೆ.  ಹೌದು ಹೊಸನಗರ ತಾಲೂಕಿನ ಮುಂಬಾರು ಗ್ರಾಪಂ ವ್ಯಾಪ್ತಿಯ ಬೇಹಳ್ಳಿ ಗ್ರಾಮದ…

Read More

ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ|Rain

ಶಿವಮೊಗ್ಗ : ಬಾರಿ ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆಯಾಗುತ್ತಿದೆ . ಗುಡುಗು ಸಹಿತ ಮಳೆ ಸುರಿಯುತ್ತಿರುವುದರಿಂದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಗಾಳಿ, ಗುಡುಗು ಸಹಿತ ಜೋರಾಗಿ ಮಳೆಯ ಸುರಿಯಲು ಆರಂಭವಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ.ಇನ್ನು ಭದ್ರಾವತಿ ಯಲ್ಲೂ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.  ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಾಗುತ್ತಿದ್ದಂತೆ ಖುಷಿಯಾದರು. ದಿಢೀರ್‌ ಮಳೆಯಿಂದಾಗಿ ಜನರು ಅಂಗಡಿಗಳು,…

Read More

ಶಿವಮೊಗ್ಗ ನಗರ ಕ್ಷೇತ್ರಕ್ಕೆ ಆಯನೂರು ಮಂಜುನಾಥ್ , ಚೆನ್ನಬಸಪ್ಪ ,ಯೋಗೀಶ್ ನಾಮಪತ್ರ ಸಲ್ಲಿಕೆ – ತ್ರಿಕೋನ ಸ್ಪರ್ಧೆಗೆ ಸಜ್ಜಾದ ಕ್ಷೇತ್ರ|election

 ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಪಕ್ಷದ ಘಟಾನುಗಟಿಗಳು ಇಂದು ನಾಮಪತ್ರ ಸಲ್ಲಿಸುವ ಮೂಲಕ ಚುನಾವಣ ಕಣ ರಂಗೇರಿದೆ.  ಕಾಂಗ್ರೆಸ್‌ನಿಂದ ಹೆಚ್.ಸಿ. ಯೋಗೀಶ್, ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಹಾಗೂ ಜೆಡಿಎಸ್‌ನಿಂದ ಆಯನೂರು ಮಂಜುನಾಥ್ ಇಂದು ವಿಧಾನಸಭಾ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದರು. ಇಂದು ಮೊದಲು ಬಿಜೆಪಿಯಿಂದ ಜೆಡಿಎಸ್ ಪಕ್ಷ ಸೇರಿ ಬಿ ಫಾರಂ ಪಡೆಯಲು ಯಶಸ್ವಿಯಾದ ಆಯನೂರು ಮಂಜುನಾಥ್ ಪ್ರಥಮ ಬಾರಿಗೆ ಜಿಲ್ಲಾ ಜೆಡಿಎಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು. ನಂತರ ಜಿಲ್ಲಾ ಜೆಡಿಎಸ್…

Read More

ಕೊನೆಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರು ಪ್ರಕಟ|election

ಶಿವಮೊಗ್ಗ ನಗರದ ಬಿಜೆಪಿ ಪಕ್ಷದ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಅಂತಿಮ ಪಟ್ಟಿಯನ್ನು ಪಕ್ಷ ಪ್ರಕಟಿಸಿದ್ದು ಶಿವಮೊಗ್ಗದಿಂದ ಎಸ್‍.ಎನ್.ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯರಾಗಿರುವ ಎಸ್‍.ಎನ್.ಚನ್ನಬಸಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.ಚನ್ನಬಸಪ್ಪ ಮಹಾನಗರ ಪಾಲಿಕೆ ಉಪ ಮೇಯರ್ ಆಗಿದ್ದರು. ಬಳಿಕ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿಯು ಜವಾಬ್ದಾರಿ ನಿಭಾಯಿಸಿದ್ದರು. ಎಸ್‍.ಎನ್.ಚನ್ನಬಸಪ್ಪ ಅವರು ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅಳೆದು ತೂಗಿ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

Read More

ಆರಗ ಆಸ್ತಿ ಮೂರು ಪಟ್ಟು ಹೆಚ್ಚು – ಕಿಮ್ಮನೆ ಆಸ್ತಿಯಷ್ಟೇ ಸಾಲ|ಜಿಲ್ಲೆಯ ಪ್ರಮುಖ ಅಭ್ಯರ್ಥಿಗಳ ಆಸ್ತಿ ಎಷ್ಟಿದೆ.???? ಈ ಸುದ್ದಿ ನೋಡಿ

ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರ (Karnataka assembly election 2023)ಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪ್ರಮುಖ ಅಭ್ಯರ್ಥಿಗಳ ಆಸ್ತಿ ವಿವರ ಕೆಳಗಿನಂತಿದೆ. ಆರಗ ಜ್ಞಾನೇಂದ್ರ, ತೀರ್ಥಹಳ್ಳಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆರಗ ಅವರ ಆಸ್ತಿ ಕಳೆದ ವರ್ಷಕ್ಕೆ ಹೋಲಿಸಿದರೆ ಮೂರು ಪಟ್ಟು ಏರಿಕೆಯಾಗಿದೆ. ₹6.28 ಕೋಟಿ ಆಸ್ತಿ ಘೋಷಿಸಿದ್ದಾರೆ. 20 ಎಕರೆ ಜಮೀನು ಇದೆ, ಮೂರು ಕಾರು, ಪತ್ನಿ ಬಳಿ 250 ಗ್ರಾಂ ಚಿನ್ನವಿದೆ. ಕಿಮ್ಮನೆ ರತ್ನಾಕರ್, ತೀರ್ಥಹಳ್ಳಿ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು…

Read More

ರಿಪ್ಪನ್‌ಪೇಟೆ : ನೇಣಿಗೆ ಶರಣಾದ ಆಟೋ ಚಾಲಕ ವೆಂಕಟೇಶ್|crime news

ರಿಪ್ಪನ್‌ಪೇಟೆ : ನೇಣಿಗೆ ಶರಣಾದ ಆಟೋ ಚಾಲಕ ರಿಪ್ಪನ್‌ಪೇಟೆ;- ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಆಟೋ ಚಾಲಕ ವೆಂಕಟೇಶ್ (೫೩)ಎಂಬುವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೋವಿಡ್ ಮುಂಜಾಗ್ರತಾ ಚುಚ್ಚುಮದ್ದು ಪಡೆದ ನಂತರ  ದೇಹದ ಎಡಭಾಗ ಸ್ವಾದೀನ ಕಳೆದುಕೊಂಡಿದ್ದು ಮಣಿಪಾಲ ಸೇರಿದಂತೆ ವಿವಿಧಡೆಯಲ್ಲಿ ಚಿಕಿತ್ಸೆ ಕೊಡಿಸಿದರು ಚಿಕಿತ್ಸೆ ಫಲಕಾರಿಯಾಗದೇ ಜೀವನದಲ್ಲಿ ಜಿಗುಪ್ಸೆಗೊಂಡ ಅವರು ಬುಧವಾರ ಬೆಳಗ್ಗೆ ಮನೆಯಲ್ಲಿ ನೇಣಿಗೆ ಕೊರಳೊಡಿದ್ದಾರೆ ಎಂದು ಕುಟುಂಬ ವರ್ಗದವರು ದೂರು ದಾಖಲಿಸಿದ್ದಾರೆ. ಮೃತ…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವು|accident

ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ನದೀಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಏಪ್ರಿಲ್ 2 ರಂದು ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು.ಮೆಗ್ಗಾನ್ ನಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ…

Read More

ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ಮೂವರ ಬಂಧನ : 25 ಲಕ್ಷ ರೂ ಸೀಜ್

ಚುನಾವಣೆಯ ಚಟುವಟಿಕೆಗಳ ನಡುವೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್​ ಕೂಡ ಜೋರಾಗಿದೆ. ಈ ಸಂಬಂಧ ಶಿವಮೊಗ್ಗ ಪೊಲೀಸ್ ಆನ್‌ ಲೈನ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ದಂಧೆಗೆ ಕಡಿವಾಣ ಹಾಕಿದ್ದಾರೆ.  ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್​(ipl betting) ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಇಎನ್​ ಪೊಲೀಸ್​ ಸ್ಟೇಷನ್​ ಪಿಐ ಸಂತೋಷ್ ಪಾಟೀಲ್ ನೇತೃತ್ವದಲ್ಲಿ ಟೀಂವೊಂದನ್ನ ರಚಿಸಲಾಗಿತ್ತು. ಸದ್ಯ ಈ ಟೀಂ ಕಳೆದ  15-04-2023 ರಂದು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತಿದ್ದವರ ಮೇಲೆ ದಾಳಿ ನಡೆಸಿದೆ. ಇನ್ನೂ ಈ…

Read More
Exit mobile version