ಶಿವಮೊಗ್ಗ ಪೊಲೀಸರು ಭರ್ಜರಿ ಬೇಟೆ ಮಾಡಿದ್ದಾರೆ. ಗಾಂಧಿಬಜಾರ್ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆ ಇಲ್ಲದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವಿಚಾರದಲ್ಲಿ ಕೋಟೆ ಪೊಲೀಸ್ ಸ್ಟೇಷನ್ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿ ವೇಳೆ ಬರೋಬ್ಬರಿ 9.5 ಕೆಜಿ ಚಿನ್ನ (gold) ಪತ್ತೆಯಾಗಿದೆ.
ಇಲ್ಲಿನ ಎಲೆ ರೇವಣ್ಣನ ಕೇರಿಯಲ್ಲಿರುವ ಇರುವ ಅಂಗಡಿಯೊಂದರಲ್ಲಿ ಇಷ್ಟುದೊಡ್ಡ ಮೊತ್ತದ ಚಿನ್ನ ಸೀಜ್ ಮಾಡಲಾಗಿದೆ. ಇದು ಲಕ್ಷ್ಮಣ್ರವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು, ದಾಖಲೆಗಳಿಲ್ಲದ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ಧಾರೆ.
ಇವತ್ತು ಬೆಳಗ್ಗೆ ಕೋಟೆ ಪೊಲೀಸ್ ಸ್ಟೇಷನ್ ಸಿಪಿಐ ಶಿವಪ್ರಸಾದ್ರಿಗೆ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಬಂಗಾರದ ಆಭರಣಗಳನ್ನು ಅಂಗಡಿಗೆ ತೆಗೆದುಕೊಂಡು ಹೋಗುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಬಂದಿದೆ.
ಈ ಮಾಹಿತಿಯನ್ನ ಆಧರಿಸಿ, ಅನುಮಾನಸ್ಪದ ವ್ಯಕ್ತಿಯನ್ನ ವಿಚಾರಿಸಿದ್ದಾರೆ. ಆತನ ಬಳಿ ಬಂಗಾರದ ಆಭರಣಗಳು ಪತ್ತೆಯಾಗಿದೆ. ಇನ್ನಷ್ಟು ವಿಚಾರಣೆ ನಡೆಸಿ ಆತನ ಅಂಗಡಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಒಟ್ಟು ಅಂದಾಜು ಮೌಲ್ಯ 5,83,00,000/- ರೂ ಗಳ 9 ಕೆ. ಜಿ 565 ಗ್ರಾಂ ತೂಕದ ಬಂಗಾರದ ಆಭರಣಗಳು ದೊರಕಿದೆ.
ಈ ಆಭರಣಗಳಿಗೆ ಸಂಬಂಧಿಸಿದ ದಾಖಲಾತಿ ಇಲ್ಲದ ಹಿನ್ನೆಯಲ್ಲಿ ಆಭರಣಗಳನ್ನು ಜಪ್ತಿ ಮಾಡಲಾಗಿದ್ದು, ಮುಂದಿನ ಕ್ರಮಕ್ಕಾಗಿ ವಾಣಿಜ್ಯ ತೆರಿಗೆ ಇಲಾಖೆಗೆ ಕೋಟೆ ಪೊಲೀಸರು ಹಸ್ತಾಂತರಿಸಿದ್ದಾರೆ.