ರಿಪ್ಪನ್‌ಪೇಟೆ : ಪದವಿ‌ ಕಾಲೇಜಿನ ಆವರಣದಲ್ಲಿ ಜೇನು ದಾಳಿ – ಹಲವು ವಿದ್ಯಾರ್ಥಿಗಳಿಗೆ ಗಾಯ|Bee attack

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜು ಅವರಣದಲ್ಲಿ ಜೇನುನೊಣಗಳು ದಾಳಿ ಮಾಡಿದ್ದರಿಂದ ಸುಮಾರು 13 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.




ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ಇಂದು ಬೆಳಿಗ್ಗೆ ಜೇನುಹುಳುಗಳು ದಾಳಿ ಮಾಡಿದ್ದರಿಂದ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿರದಿದ್ದರೂ, ಅವರಲ್ಲಿ ಹಲವರಿಗೆ ಜೇನುನೊಣಗಳು ಕುಟುಕಿದ ಜಾಗದ ಸುತ್ತಲೂ ಭಾರಿ ಊತ ಕಂಡುಬಂದಿದೆ.

ಆಗಿದ್ದೇನು?

ಕಳೆದೊಂದು ತಿಂಗಳಿನಿಂದ ಕಾಲೇಜಿಗೆ ರಜೆ ನೀಡಲಾಗಿತ್ತು ಇಂದು ಎಲ್ಲಾ ತರಗತಿಗಳು ಏಕಕಾಲದಲ್ಲಿ ಆರಂಭವಾಗಿತ್ತು.ತರಗತಿಗಳು ಪ್ರಾರಂಭವಾಗುತಿದ್ದಂತೆ ಏಕಾಏಕಿ ಜೇನು ಹುಳಗಳು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದೆ.


ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ!!!!?????

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಪದವಿ ಕಾಲೇಜಿನ ಎರಡನೆ ಮಹಡಿಯಲ್ಲಿ ಜೇನು ಹುಳಗಳು ಕಳೆದ ಐದಾರು ವರ್ಷಗಳಿಂದ ಗೂಡು ಕಟ್ಟಿಕೊಂಡಿದ್ದರು ಅದನ್ನು ತೆರವುಗೊಳಿಸುವ ಸುದ್ದಿಗೆ ಯಾರು ಹೋಗದೇ ಇರುವುದು ಆಶ್ಚರ್ಯಕರ..!! ವಿದ್ಯಾರ್ಥಿಗಳು ಪ್ರತಿನಿತ್ಯ ಆತಂಕದಲ್ಲೆ ಎರಡನೇ ಮಹಡಿಯಲ್ಲಿ ಓಡಾಡುತಿದ್ದರೂ ಕಾಲೇಜಿನ ಸಿಬ್ಬಂದಿಗಳಾಗಲಿ ,ಆಡಳಿತ ಮಂಡಳಿಯವರಾಗಲಿ ತಲೆಕೆಡಿಸಿಕೊಳ್ಳದೇ ಕುಳಿತಿದ್ದೇ ಇಂದಿನ ಈ ಘಟನೆಗೆ ಪ್ರಮುಖ ಕಾರಣವಾಗಿದೆ ಎಂದು ಹೆಸರು ಹೇಳಲಿಚ್ಚಿಸದ ವಿದ್ಯಾರ್ಥಿಯೊಬ್ಬ ತನ್ನ ಅಳಲು ತೋಡಿಕೊಳ್ಳುತ್ತಾನೆ.




ಇನ್ನಾದರೂ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿರುವ ಜೇನು ಹುಳಗಳ ಗೂಡನ್ನು ತೆರವುಗೊಳಿಸಿ ಭಯಮುಕ್ತ ಕಾಲೇಜು‌ ಕ್ಯಾಂಪಸ್ ನಿರ್ಮಿಸುತ್ತಾರೋ‌ಕಾದು ನೋಡಬೇಕಾಗಿದೆ.





Leave a Reply

Your email address will not be published. Required fields are marked *