ಆಯನೂರಿನಲ್ಲಿ‌ ಮೋದಿ ಹವಾ – ಕುವೆಂಪು , ಸಿಗಂಧೂರು ದೇವಿಯನ್ನು ನೆನೆದ ನಮೋ : ಮಲೆನಾಡಿನ ಮಡಿಲು ಸೌಂದರ್ಯದ ಹೊನಲು ಎಂದು ಬಣ್ಣನೆ|modi


ಆಯನೂರಿನಲ್ಲಿ ಇಂದು ಮೋದಿ ಹವಾ , ಮತಬೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತೊಡಗಿದ್ದಾರೆ. ಕುವೆಂಪು, ಸಿಗಂಧೂರು ದೇವಿಯನ್ನು ನೆನೆದಂತಹ ನರೇಂದ್ರ ಮೋದಿಯವರು, ಶಿವಮೊಗ್ಗ ಜನತೆಗೆ ನಮಸ್ಕಾರ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಆಯನೂರು ಬಳಿಯಲ್ಲಿ ಇಂದು ಬಿಜೆಪಿ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮತಬೇಟೆಯಲ್ಲಿ ತೊಡಗಿದ್ದಾರೆ. ಈ ವೇಳೆ ಮಾತನಾಡಿದಂತ ಅವರು, ಇಷ್ಟೊಂದು ಜನರನ್ನು ನೋಡಿದ್ರೆ ಸಂತೋಷವಾಗುತ್ತಿದೆ. ರೋಡ್ ಶೋ ನಲ್ಲಿ ಹೂ ಮಳೆ ಸುರಿಸಿದ್ದಾರೆ. ಕರ್ನಾಟಕದಲ್ಲಿ ಎಲ್ಲಿ ಹೋದರು ಬಿಜೆಪಿಗೆ ಬೆಂಬಲ ಸಿಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದರು.

ಮಲೆನಾಡಿನ ಮಡಿಲು, ಸೌಂದರ್ಯದ ಹೊನಲು ಎಂಬುದಾಗಿ ಗುಣಗಾನ ಮಾಡಿದಂತ ಅವರು, ಶಿವಮೊಗ್ಗ ಜನತೆಗೆ, ಸಿಗಂಧೂರು ದೇವಿಗೆ ನಮಸ್ಕಾರ ಹೇಳಿದರು. ಅಲ್ಲದೇ ಕುವೆಂಪು ಅವರನ್ನು ನೆನಪು ಮಾಡಿಕೊಂಡದರು.

ಇದೇ ವೇಳೆ ಈ ಹಿಂದೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ್ದನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ, ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟುಹಬ್ಬದದಂದು ಶಿವಮೊಗ್ಗಕ್ಕೆ ಆಗಮಿಸಿದ್ದೆ. ಈ ಬಾರಿ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ಕಂಗಾಲಾಗಿ ಹೋಗಿದ್ದು, ಸುಳ್ಳಿನ ಗ್ಯಾರೆಂಟಿ ಘೋಷಣೆ ಮಾಡಿದ್ದಾರೆ. ಬಲೂನ್​ನಂತೆ ಕಾಂಗ್ರೆಸ್ ಸುಳ್ಳಿನ ಗಾಳಿ ಬಿಡುತ್ತಿದೆ. ಕರ್ನಾಟಕದ ಅಭಿವೃದ್ಧಿಯನ್ನು ಕಾಂಗ್ರೆಸ್​ ಪಕ್ಷ ಎಂದೂ ಬಯಸುವುದಿಲ್ಲ. ಭ್ರಷ್ಟಾಚಾರದ ಮೂಲಕ ಕಾಂಗ್ರೆಸ್​ ನಾಯಕರು ಶ್ರೀಮಂತರಾಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯನ್ನು ದಶಕಗಳ ಕಾಲ ಹಿಂದೆ ಕೊಂಡೊಯ್ದಿತ್ತು. 80% ಭ್ರಷ್ಟಾಚಾರ ಮಾಡುವ ಕಾಂಗ್ರೆಸ್ ನಿಂದ ಏನು ಅಭಿವೃದ್ಧಿ ಮಾಡಲು ಸಾಧ್ಯ? ಯುವಕರ ಭವಿಷ್ಯವನ್ನು ಕಾಂಗ್ರೆಸ್ ರೂಪಿಸಲು ಸಾಧ್ಯವೇ ಎಂಬುದನ್ನು ರಾಜ್ಯದ ಹೊಸ ಮತದಾರರಿಗೆ ಕೇಳಲು ಬಯಸುತ್ತೇನೆ. ದೇಶದ ಯುವಕರ ಬಗ್ಗೆ ಕಾಂಗ್ರೆಸ್ ಯಾವತ್ತು ಯೋಚಿಸಿಲ್ಲ ಎಂದು ಹೇಳಿದರು.

ನಾನು ಗುಜರಾತ್ ಸಿಎಂ ಆಗಿದ್ದಾಗ ಯಡಿಯೂರಪ್ಪ ಕರ್ನಾಟಕದ ಸಿಎಂ ಆಗಿದ್ದರು. ಈ ವೇಳೆ ಅಡಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕಾಗಿ ಯಡಿಯೂರಪ್ಪನವರು ದೆಹಲಿಗೆ ನಿಯೋಗ ತೆಗೆದುಕೊಂಡು ಬಂದಿದ್ದರು. ಶಿವಮೊಗ್ಗದ ರೈತರ ಕಲ್ಯಾಣಕ್ಕಾಗಿ ಯಡಿಯೂರಪ್ಪ ಶ್ರಮಿಸಿದ್ದಾರೆ. ಯಾವುದೇ ಕಾರಣಕ್ಕೂ ಅಡಕೆ ಬೆಳಗಾರರು ಆಂತಕಕ್ಕೆ ಒಳಗಾಗಬೇಡಿ. ಹಲವು ಯೋಜನೆಗಳ ಮೂಲಕ ರೈತರ ಸಮಸ್ಯೆಗೆ ಪರಿಹಾರ ಕೈಗೊಂಡಿದ್ದೇವೆ ಎಂದು ಭರವಸೆ ನೀಡಿದರು.

ಯುವಕರಿಗೆ ಉದ್ಯೋಗ ಸೃಷ್ಟಿ

ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ರಾಜ್ಯದಲ್ಲಿ ಹೊಸ ಹೊಸ ಕಾಲೇಜುಗಳ ನಿರ್ಮಾಣವಾಗಿವೆ. ಯುವ ಜನತೆಯನ್ನು ಕಾಂಗ್ರೆಸ್ ವಂಚಿಸಿದರೆ, ಬಿಜೆಪಿ 13 ಲಕ್ಷಕ್ಕೂ ಹೊಸ ಉದ್ಯೂಗಳನ್ನು ಸೃಷ್ಟಿಸಿದೆ. ಪ್ರತಿ ಎರಡು ದಿನಗಳಿಗೆ ಒಂದೊಂದು ಕಾಲೇಜಿ ನಿರ್ಮಾಣವಾಗುತ್ತಿದ್ದರೆ, ಎರಡು ವಾರಗಳಿಗೆ ಒಂದರಂತೆ ವಿಶ್ವ ವಿದ್ಯಾನಿಲಯಗಳು ತಲೆ ಎತ್ತಿವೆ. ಆಟೋ ಮೊಬೈಲ್ ಫ್ಯಾಕ್ಟರ್ ನಿರ್ಮಾಣವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.







ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

2 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

15 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

17 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

20 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

20 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

20 hours ago