Headlines

ಕಾರು ಅಪಘಾತ – ಹೊಸನಗರ ಕಾಂಗ್ರೆಸ್ ಮುಖಂಡ ನಾಗರಾಜ್ ಗೌಡ ಸ್ಥಳದಲ್ಲೇ ಸಾವು|accident

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ಕೋಡೂರು ಸಮೀಪದ ತುರುಕೋಡು ನಾಗರಾಜ್ ಗೌಡ (55) ಎಂದು ಗುರುತಿಸಲಾಗಿದೆ.


ಶಿಕಾರಿಪುರದಿಂದ ವಾಪಾಸ್ ಆಗುವ ವೇಳೆ ಇಂದು ಮಧ್ಯಾಹ್ನ ಗೌತಮಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಹೊಸನಗರ ತಾಲೂಕಿನ ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದರು.

ಕಾರಿನಲ್ಲಿ ಮೂರು ಜನರಿದ್ದು ಓರ್ವನಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಗರಾಜ್ ಮೃತ ದೇಹವು ಸರ್ಜಿ ಆಸ್ಪತ್ರೆಯಲ್ಲಿದ್ದು ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಂತಾಪ :
ಕಾರು ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ಮುಖಂಡ ನಾಗರಾಜ್ ಗೌಡ ರವರ ಅಕಾಲಿಕ ನಿಧನಕ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ,ಅಪೇಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ,ಜಿಪಂ ಮಾಜಿ ಸದಸ್ಯ ಕಲಗೋಡು ರತ್ನಾಕರ್ ,ಮುಖಂಡರಾದ ಅಮೀರ್ ಹಂಜಾ ಬಿ ಜಿ ಚಂದ್ರಮೌಳಿ ,ಎಂ ಎಂ ಪರಮೇಶ್ ಸೇರಿದಂತೆ ಇನ್ನಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version