ಶಿವಮೊಗ್ಗ ಜಿಲ್ಲೆಯ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಗೆ ದೌಡಾಯಿಸಿದ ಸಂಸದ ಬಿ ವೈ ರಾಘವೇಂದ್ರ
ಬಸ್ ಅಪಘಾತದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಗಾಯಾಳುಗಳ ಬಳಿಯಲ್ಲಿ ಘಟನೆಯ ಮಾಹಿತಿ ಪಡೆದ ಸಂಸದರು ಚಿಕಿತ್ಸೆಯ ವ್ಯವಸ್ಥೆಯನ್ನು ಗಮನಿಸುತ್ತಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಘಟನೆ ಬಗ್ಗೆ ಹೇಳಿದ್ದೇನು..??
ಇನ್ನೂ ಘಟನೆ ಬಗ್ಗೆ ವಾಟ್ಸ್ಯಾಪ್ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಇದುವರೆಗೂ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹೊಸದುರ್ಗದ ತಿಪ್ಪೇಸ್ವಾಮಿ ಹಾಗು ಇನ್ನೊಬ್ಬರು ಅಪರಿಚಿತ ಪುರುಷ ಎಂದು ತಿಳಿಸಿದ್ದಾರೆ.
ಇನ್ನೂ 30 ಮಂದಿ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದು, ನಾಲ್ವರನ್ನ ಆಯನೂರಿನ ಸಿಹೆಚ್ಸಿಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದ್ದು, ಅವರನ್ನು ಸಹ ಮೆಗ್ಗಾನ್ಗೆ ಶಿಪ್ಟ್ ಮಾಡಲಾಗುತ್ತಿದೆ. ಇನ್ನೂ ಮೂವರ ಸ್ಥಿತಿಯು ಗಂಭೀರವಾಗಿದ್ದು, 6 ಜನರಿಗೆ ಮೈನರ್ ಇಂಜುರಿಯಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…