ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಅಕ್ಬರ್ ಅನ್ವರ್ ಮಾಷೂಂಷಾ ವಲಿಯುಲ್ಲಾ ದರ್ಗಾ ಇದರ ಉರೂಸ್ಗೆ ಚಾಲನೆ ನೀಡಲಾಗಿದೆ.
ಸರ್ವ ಧರ್ಮಿಯರ ಪವಿತ್ರ ಕ್ಷೇತ್ರ ಬಿದನೂರು ನಗರ ದರ್ಗ ರಾಜ್ಯದ ಪ್ರಮುಖ ಪವಾಡ ಕ್ಷೇತ್ರಗಳ ಸಾಲಿನಲ್ಲಿ ಸೇರಿಕೊಂಡಿದ್ದು ಹಝರತ್ ಶೈಖುಲ್ ಇಕ್ಟರ್ ಅನ್ವರ್ ಮಾಸುಂಷಾ ವಯುಲ್ಲಾಹಿರವರ 49ನೇ ಉರೂಸ್ ಸಮಾರಂಭವನ್ನು ವಿಶೇಷ ವಾಗಿ ಆಚರಿಸಲಾಗುತ್ತದೆ ಎಂದು ದರ್ಗಾ ಕಮಿಟಿ ಉಪಾಧ್ಯಕ್ಷ ಆರ್ ಎ ಚಾಬುಸಾಬ್ ತಿಳಿಸಿದ್ದಾರೆ.
ಇದೇ ಸಂಧರ್ಭದಲ್ಲಿ ದರ್ಗಾ ಕಮಿಟಿಯ ಗೌರವಾಧ್ಯಕ್ಷರಾದ ಪಟೇಲ್ ಗರುಡಪ್ಪಗೌಡರನ್ನು ಸನ್ಮಾನಿಸಿ ಗೌರವಿಸಲಾಯಿತು.
ಇಂದು ಸಂಜೆ ಕಾರ್ಗಲ್ ಸಿರಾಜ್ ತಂಙಳ್ ನೇತೃತ್ವದಲ್ಲಿ ಮಗರೀಬ್ ನಮಾಜ್ ನಂತರದಲ್ಲಿ ಸಂದಲ್ ಮೆರವಣಿಗೆ ಮತ್ತು ನೂರುಲ್ ಹುದಾ ದಫ್ ಕಮಿಟ ಕೋಡಿ ಕುಂದಾಪುರ ಇವರಿಂದ ದಫ್ ಕಾರ್ಯಕ್ರಮ.
ರಾತ್ರಿ 8.00 ಗಂಟೆಯಿಂದ ಮೌಲಾನ ಸಿರಾಜುದ್ದೀನ್ ಸಖಾಫಿ ಕನ್ಯಾನ,ಖತೀಬರು ಬದ್ರಿಯಾ ಜುಮ್ಮಾ ಮಸೀದಿ ಬನ್ನೂರು ಪುತ್ತೂರು ಇವರಿಂದ ಕನ್ನಡ ಧಾರ್ಮಿಕ ಪ್ರವಚನ ಹಾಗೂ ಮೌಲಾನ ಆದಂ ಸಖಾಫಿ ಚಿತ್ರದುರ್ಗ ಇವರಿಂದ ಉರ್ದು ಧಾರ್ಮಿಕ ಪ್ರವಚನ ನಡೆಯಲಿದೆ.
ಉರೂಸ್ ಸಂಧರ್ಭದಲ್ಲಿ ಜನ ಒತ್ತಡದ ಸನ್ನಿವೇಶದಲ್ಲಿ ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಇಲಾಖೆ ಸೂಕ್ತ ಕ್ರಮ ಜರುಗಿಸುವಂತೆ ಸಮೀತಿಯಿಂದ ಅನುಮತಿ ನೀಡಲಾಗಿದೆ. ಎಂದು ದರ್ಗಾ ಸಮಿತಿ ಕಾರ್ಯದರ್ಶಿ ಸಾದಿಕ್ ಅಲಿ ತಿಳಿಸಿದ್ದಾರೆ.
ಮಾಹಿತಿಗಾಗಿ ಮೊ: 9448044876 ಸಾಧಿಕ್ ಕಚ್ಚಿಗೆಬೈಲು ಕಾಯದರ್ಶಿ, ದರ್ಗಾ ಸಮಿತಿ ನಗರ ಮೊ.: 9901770459 ಸಂಪರ್ಕಿಸಲು ಕೋರಿದೆ.
ಈ ಸಂಧರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಹಾಜಿ ಮೊಹಮ್ಮದ್ ಪ್ರಮುಖರಾದ ವಿನಾಯಕ ಉಡುಪ ಹಾಗೂ ಇನ್ನಿತರ ಪ್ರಮುಖರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್