ನಾಳೆ ಶಿವಮೊಗ್ಗದ ಆಯನೂರಿಗೆ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತಿದ್ದಾರೆ. ಕಾರ್ಯಕ್ರಮಕ್ಕಾಗಿ ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.
ಮೇ 7ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ನೇರವಾಗಿ ಹೆಲಿಕಾಪ್ಟರ್ನಲ್ಲಿ ಆಯನೂರಿಗೆ ಆಗಮಿಸುತ್ತಿದ್ದಾರೆ. ವೇದಿಕೆಯ ಪಕ್ಕದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30 ರವರೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿಯವರು 50 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ.
ಇನ್ನೂ ಶಿವಮೊಗ್ಗದ ಏಳು ಕ್ಷೇತ್ರ ಹಾಗೂ ದಾವಣಗೆರೆಯ 2 ಮತ್ತು ಚಿಕ್ಕಮಗಳೂರಿನ ಒಂದು ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಕಾರ್ಯಕ್ರಮದ ಸಿದ್ದತೆಯಲ್ಲಿ ತೊಡಗಿದ್ದು, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ನಲ್ಲಿ ತಲ್ಲೀನವಾಗಿದೆ.
ಇನ್ನೂ ನೀತಿಸಂಹಿತೆ ಹಿನ್ನೆಲೆಯಲ್ಲಿ ಮೋದಿ ಕಾರ್ಯಕ್ರಮದಲ್ಲಿ ಊಟದ ವ್ಯವಸ್ಥೆಯನ್ನು ಕೈಗೊಳ್ಳಲಾಗಿಲ್ಲ. ಕುಡಿಯಲು ನೀರು ಹಾಗೂ ಮಜ್ಜಿಗೆಯ ವ್ಯವಸ್ಥೆಯನ್ನು ಕೈಗೊಳ್ಳಲಾಗಿದ್ದು, ಜನರನ್ನ ಕರೆತರಲು ವಾಹನಗಳ ವ್ಯವಸ್ಥೆಯನ್ನು ಸಹ ಮಾಡಿಲ್ಲ ಎನ್ನುತ್ತಿದ್ದಾರೆ ಮುಖಂಡರು.
ಆಯನೂರಿನಿಂದ ಶಿವಮೊಗ್ಗ ಕಡೆ ಬರುವ 2 ಕಿಮೀ. ಹಾಗೂ ಆಯನೂರಿನಿಂದ ಕುಂಸಿಗೆ ಹೋಗುವ 1 ಕಿಮೀ. ರಸ್ತೆ ಉದ್ದಕ್ಕೂ ಮೋದಿ ಕಾರ್ಯಕ್ರಮಕ್ಕಾಗಿ ಬ್ಯಾನರ್ ಬಂಟಿಂಗ್ಸ್ ಪ್ಲೆಕ್ಸ್ಗಳನ್ನು ಹಾಕಲಾಗುತ್ತಿದೆ. ಕೇಸರಿ ಬಣ್ಣಗಳ ತಳಿರು ತೋರಣಗಳಲ್ಲಿ ಸಿಂಗಾರಗೊಳ್ಳುತ್ತಿರುವ ಆಯನೂರಿನಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಈ ಚುನಾವಣೆಯ ಕೊನೆಯ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್