ರಿಪ್ಪನ್ಪೇಟೆ : ರಾಜ್ಯ ಕಂಡ ಧೀಮಂತ ನಾಯಕ ದಿ.ಎಸ್ ಬಂಗಾರಪ್ಪಜಿಯವರ ಅಭಿಮಾನಿಗಳಿರುವ ಈ ಕ್ಷೇತ್ರದಲ್ಲಿ ಅವರೇ ಬೆಳೆಸಿದ ಗೋಪಾಲಕೃಷ್ಣ ಬೇಳೂರು ಇವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಂತ ಹೆಚ್ಚಿನ ಬಹುಮತದಿಂದ ಗೆಲ್ಲಿಸುವಂತೆ ನಟ ಡಾ.ಶಿವರಾಜ್ ಕುಮಾರ್ ರವರು ಮನವಿ ಮಾಡಿದರು.
ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರ ಪರ ಭರ್ಜರಿ ರೋಡ್ ಶೋ ನಡೆಸಿ ನಂತರ ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಸಜ್ಜನ ವ್ಯಕ್ತಿತ್ವದ ಬೇಳೂರು ಗೋಪಾಲಕೃಷ್ಣ ರವರನ್ನು ಬೆಂಬಲಿಸಿ ವಿಧಾನಸೌದಕ್ಕೆ ಕಳಿಸಿಕೊಡಿ ಎಂದರು.
ಈ ಸಂಧರ್ಭದಲ್ಲಿ ಶಿವಣ್ಣ ಹಾಡು ಹೇಳಿ ಎಂದು ಅಭಿಮಾನಿಗಳು ಕೂಗುತ್ತಿದ್ದಂತೆ ನಟ ಶಿವರಾಜ್ ಕುಮಾರ ಜೋಗಿ ಚಿತ್ರದ ‘ಎಲ್ಲೋ ಜೋಗಪ್ಪ ನಿನ್ನ ಅರಮನೆ’ ಮತ್ತು ಪುನೀತ್ ರಾಜ್ಕುಮಾರ್ ರವರ ‘ಬಾನ ದಾರಿಯಲ್ಲಿ’ ಹಾಡನ್ನು ಹಾಡಿ ಮತದಾರರನ್ನು ಹುರಿದುಂಬಿಸಿದರು.
ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಮಾತನಾಡಿ ಸೊರಬ ಸಾಗರ ಮತ್ತು ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಮತದಾರರು ನಮ್ಮ ತಂದೆಯವರ ಅಭಿಮಾನಿಗಳ ತವರೂರು ಆ ಕಾರಣದಿಂದಾಗಿ ಮತದಾರರು ಈ ಬಾರಿಯ ಚುನಾವಣೆಯಲ್ಲಿ ನಮ್ಮಗಳ ಕೈ ಬಿಡುವುದಿಲ್ಲ ಎಂಬ ನಂಬಿಕೆ ನಮಗಿದೆ. ಈ ಬಾರಿ ಗೆಲುವು ನಮ್ಮದೇ ಎಂಬುದಕ್ಕೆ ಇಲ್ಲಿ ಸೇರಿರುವ ಅಪಾರ ಜನಸ್ತೋಮವೇ ಸಾಕ್ಷಿಯಾಗಿದೆ ಎನ್ನುವುದರೊಂದಿಗೆ ಪರೋಕ್ಷವಾಗಿ ಬಿಜೆಪಿಗೆ ಈ ಜನಸ್ತೋಮವನ್ನು ಕಂಡು ಭಯಹುಟ್ಟುವಂತೆ ಮಾಡಿದೆ ಎಂದರು.
ಗವಟೂರು ಬಸ್ ನಿಲ್ದಾಣದಿಂದ ಸಾವಿರಾರು ಸಂಖ್ಯೆಯಲ್ಲಿ ಬೈಕ್ ರ್ಯಾಲಿಯ ಮೆರವಣಿಗೆ ಆರಂಭಗೊಂಡು ವಿನಾಯಕ ವೃತ್ತದ ಮೂಲಕ ಸಾಗರ ರಸ್ತೆಯ ಮೆಸ್ಕಾಂ ಕಛೇರಿಯ ಬಳಿ ಕೊನೆಗೊಂಡಿತು.
ಇದೇ ಸಂದರ್ಭದಲ್ಲಿ ಗೀತಾ ಶಿವರಾಜ್ ಕುಮಾರ್, ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು, ಜಿ.ಪಂ.ಮಾಜಿ ಸದಸ್ಯರಾದ ಕಲಗೋಡು ರತ್ನಾಕರ್, ಬಂಡಿ ರಾಮಚಂದ್ರ, ಶ್ವೇತಾ, ಬಿ.ಜಿ ನಾಗರಾಜ್, ಜಯಶೀಲಪ್ಪಗೌಡ, ಹಕ್ರೆ ಮಲ್ಲಿಕಾರ್ಜುನ, ಅಮ್ಮಿರ್ಹಂಜಾ, ಹೆಚ್.ವಿ.ಈಶ್ವರಪ್ಪಗೌಡ, ಎಂ.ಎಂ ಪರಮೇಶ್, ಎರಗಿ ಉಮೇಶ್, ಉಬೇದುಲ್ಲಷರೀಪ್, ಆಸೀಪ್ಭಾಷಾಸಾಬ್, ಜಿ.ಆರ್.ಗೋಪಾಕೃಷ್ಣ, ಮಳವಳ್ಳಿ ಮಂಜುನಾಥ, ಸಣ್ಣಕ್ಕಿ ಮಂಜು,ಉಲ್ಲಾಸ್ ,ರಮೇಶ್ ,ಶ್ರೀಧರ್ ಹಾಗೂ ಇನ್ನಿತರರು ಪಕ್ಷದ ಮುಖಂಡರು ಕಾರ್ಯಕರ್ತರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್