ಮತ್ತೆ ಮುನ್ನೆಲೆಗೆ ಬಂದ ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟದ ಕೂಗು|Hosanagara

ಹೊಸನಗರ : ಕ್ಷೇತ್ರ ಪುನರ್‌ವಿಂಗಡಣೆ ನಂತರ ಅಸ್ತಿತ್ವ ಕಳೆದುಕೊಂಡಿರುವ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮತ್ತೆ ಪಡೆಯುವ ಹೋರಾಟಕ್ಕೆ ಮತ್ತೆ ಚಾಲನೆ ದೊರೆತಿದೆ.

ತಾಲೂಕಿನ ಸಮಾನ ಮನಸ್ಕ ಯುವಕರ ಗುಂಪು ಈ ಹೋರಾಟಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಚಾಲನೆ ನೀಡಿದ್ದಾರೆ.ಈ ಹೋರಾಟಕ್ಕೆ ತಾಲೂಕಿನ ಜನತೆ ಅಭೂತಪೂರ್ವ ಸ್ಪಂದನೆ ನೀಡುವ ಮೂಲಕ ರಾಜ್ಯಕ್ಕೆ ಬೆಳಕು ನೀಡಿ ಕತ್ತಲಲ್ಲಿರುವ ಹೊಸನಗರ ಅಭಿವೃದ್ಧಿಗೆ ಕ್ಷೇತ್ರವೊಂದೇ ಪರಿಹಾರವೆಂದು ಹೋರಾಟ ನಡೆಸಲು ಯುವ ತಂಡಕ್ಕೆ ಸ್ಪೂರ್ತಿ ನೀಡಿದ್ದಾರೆ.




ವಿಧಾನಸಭಾ ಕ್ಷೇತ್ರ ಕಳೆದುಕೊಂಡಾಗಿನಿಂದ ಹೊಸನಗರ ಕೇವಲ ತಾಲೂಕಾಗಿ ಉಳಿದುಕೊಂಡಿದೆ. ಇಲ್ಲಿನ ಜನತೆ ಅಗತ್ಯ ಸೌಲಭ್ಯ ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ. ವಿಧಾನಸಭಾ ಕ್ಷೇತ್ರ ಮರುಪಡೆದಲ್ಲಿ ಅಭಿವೃದ್ಧಿ ಸಾಧ್ಯ. ಹೋರಾಟಗಳಿಗೆ ಕಾನೂನು ತೊಡಕುಗಳು ಎದುರಾಗಬಹುದು. ಆದರೆ ಸಮಸ್ಯೆಗಳಿಗೆ ಇರುವ ಮಾರ್ಗೋಪಾಯಗಳನ್ನು ಚರ್ಚಿಸಿ ಯೋಜನಾ ಬದ್ಧ ಹೋರಾಟದ ಮೂಲಕ ಗಮನ ಸೆಳೆದು ನಮ್ಮ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಸಾದ್ಯವಿದೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆಯುವ ದಿಸೆಯಲ್ಲಿ ಹೋರಾಟ ಅನಿವಾರ್ಯ. ಮುಳುಗಡೆ ಸಂತ್ರಸ್ತರ ತಾಲ್ಲೂಕಾಗಿರುವ ಹೊಸನಗರಕ್ಕೆ ವಿಧಾನಸಭಾ ಕ್ಷೇತ್ರ ಮಾನ್ಯತೆ ಅಗತ್ಯವಾಗಿ ಬೇಕಾಗಿದೆ. ಗ್ರಾಮಮಟ್ಟದಿಂದ ಜಾಗೃತಿ ಮೂಡಿಸುವ ಕಾರ್ಯ ಆಗಬೇಕಿದೆ

ಪಶ್ಚಿಮಘಟ್ಟ ಪ್ರದೇಶವಾಗಿರುವ ಕಾರಣ ಜನಸಂಖ್ಯೆ ಆಧರಿಸುವ ಬದಲು ಈಶಾನ್ಯ ರಾಜ್ಯಗಳ ಮಾದರಿಯಲ್ಲಿ ಭೌಗೋಳಿಕ ವ್ಯಾಪ್ತಿಯ ಆಧಾರದಂತೆ ಕ್ಷೇತ್ರ ಮರುಸ್ಥಾಪನೆಗೆ ಅವಕಾಶವಿದೆ. ಈ ನಿಟ್ಟಿನಲ್ಲಿ ಪಕ್ಷಾತೀತವಾಗಿ ಸಂಘಟಿತರಾಗಬೇಕಾಗಿದೆ.




ಈ ಹೋರಾಟದಲ್ಲಿ ಭಾಗವಹಿಸಿರುವ ಎಲ್ಲಾ ಯುವ ಮಿತ್ರರಿಗೆ ಹಾಗೂ ಈ ಹೋರಾಟಕ್ಕೆ ಬೆಂಬಲ ಸೂಚಿಸಿರುವ ತಾಲೂಕಿನ ಏಕೈಕ ಕನ್ನಡ ದಿನಪತ್ರಿಕೆ ಮಲೆನಾಡು ವಾಯ್ಸ್ ಸಂಪಾದಕರಿಗೆ ಪೋಸ್ಟ್ ಮ್ಯಾನ್ ನ್ಯೂಸ್ ವತಿಯಿಂದ ಅಭಿನಂದನೆಗಳು.

ಹೊಸನಗರ ಕ್ಷೇತ್ರ ಮರು ನಿರ್ಮಾಣ ಹೋರಾಟದಲ್ಲಿ‌ ಭಾಗವಹಿಸಲು ಇಚ್ಚಿಸುವವರು ಈ ಕೆಳಗಿನ ಲಿಂಕ್ ಬಳಸಿ ತಮ್ಮ ವಿವರಗಳನ್ನು ನೊಂದಾಯಿಸಿ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 hour ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

3 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

3 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

13 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

21 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

22 hours ago