ರಾತ್ರಿ ಅಡಿಗೆ ಯಾಕೆ ಮಾಡಲಿಲ್ಲವೆಂದು ಇಬ್ಬರಿಂದ ಹಲ್ಲೆ – ಕುಪಿತಗೊಂಡ ಅಡಿಗೆಯವ ಮಧ್ಯರಾತ್ರಿ ಇಬ್ಬರ ತಲೆ ಒಡೆದು ಕೊಂದೇ ಬಿಟ್ಟ!!!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ ಜೋಡಿ‌ ಕೊಲೆಯಾಗಿದ್ದು ಹಣಕ್ಕಾಗಿ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿತ್ತು.




ಈ ಘಟನೆ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ನೀಡಿದ ಮಾಹಿತಿ ಅಚ್ಚರಿಗೆ ಕಾರಣವಾಗಿದೆ ಮಧ್ಯಾಹ್ನದ ಅಡಿಗೆಯನ್ನು ಸಂಜೆ ನೀಡಿದ್ದಕ್ಕೆ ರಾಜಣ್ಣ ಎಂಬಾತನಿಗೆ ಇಬ್ಬರು ವ್ಯಕ್ತಿಗಳು ಮನಸ್ಸೊ ಇಚ್ಚೆ ಥಳಿಸಿದ್ದಾರೆ ಇದರಿಂದ ಕುಪಿತಗೊಂಡ ಆರೋಪಿ ರಾಜಣ್ಣ ಮಧ್ಯರಾತ್ರಿ ಹಲ್ಲೆ ಮಾಡಿದ್ದ ಇಬ್ಬರನ್ನು ಅಮಾನುಷವಾಗಿ ಹತ್ಯೆಗೈದಿದ್ದಾನೆ.

ಘಟನೆಯ ವಿವರ :
ತೀರ್ಥಹಳ್ಳಿಯ ವಿಶ್ವಕರ್ಮ ಭವನ ನಿರ್ಮಾಣ ಕೆಲಸಕ್ಕೆ ದಾವಣಗೆರೆ ಮೂಲದ ಬೀರೇಶ್ (35), ಮಂಜುನಾಥ್ (46) ಮತ್ತು ರಾಜಣ್ಣ ಎಂಬುವರು12 ದಿನಗಳ ಹಿಂದೆ ಬಂದಿದ್ದಾರೆ.




ರಾಜಣ್ಣ, ಬೀರೇಶ್, ಮಂಜುನಾಥ್ ಜೊತೆ ಇತರೆ ಇಬ್ಬರು ಸೇರಿ ಐದು ಜನ ಈ ಭವನ ನಿರ್ಮಾಣಕ್ಕೆ ಬಂದಿದ್ದರು. ಇವರಿಗೆಲ್ಲ ರಾಜಣ್ಣ ಅಡಿಗೆ ಮಾಡುವವನಾಗಿದ್ದನು.

ನಿನ್ನೆ ಬೆಳಿಗ್ಗೆ ಭವನದ ಪಕ್ಕದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ತಯಾರಿಸಿದ ಇಡ್ಲಿ ಈ ಕಾರ್ಮಿಕರಿಗೆ ಬಂದಿತ್ತು. ಮದ್ಯಾಹ್ನದ ಹೊತ್ತಿಗೆ ರಾಜಣ್ಣ ಅಡಿಗೆ ಮಾಡಿದ್ದನು. ಈ ಅಡಿಗೆ ರಾತ್ರಿಯ ವೇಳೆ ಉಳಿದಿತ್ತು.ರಾತ್ರಿಗೆ ಅದನ್ನೇ ಊಟ ಮಾಡುವಂತೆ ಮಂಜಣ್ಣ ಮತ್ತು ಬೀರೇಶ್ ಗೆ ರಾಜಣ್ಣ ಹೇಳಿದ್ದಾನೆ.

ಈ ವಿಚಾರಕ್ಕೆ ಬೀರೇಶ್ ಮತ್ತು ಮಂಜುನಾಥ್ ಸಿಟ್ಟಾಗಿ ಮಧ್ಯಾಹ್ನದ ಅಡಿಗೆ ನಾವ್ಯಾಕೆ ತಿನ್ನಬೇಕು ಎಂದು ಗಲಾಟೆ ಮಾಡಿ ಇಬ್ಬರು ಸೇರಿ ರಾಜಣ್ಣನಿಗೆ ಎಳೆದಾಡಿ ಹೊಡೆದಿದ್ದಾರೆ.

ತನ್ನ ಮೇಲೆ ನಡೆದ ಹಲ್ಲೆಯಿಂದ ಕುಪಿತಗೊಂಡಿದ್ದ ರಾಜಣ್ಣ ಊಟ ಮಾಡಿ ಮಲಗಿದ್ದ ಬೀರೇಶ್ ಮತ್ತು ಮಂಜಣ್ಣನ ಮೇಲೆ ಪಿಕಾಸಿಯಿಂದ ದಾಳಿ ನಡೆಸಿದ್ದಾನೆ.ಭವನ ಕೆಳಗಡೆ ಮಲಗಿದ್ದ ಬೀರೇಶ್ ಗೆ ಮತ್ತು ಕಟ್ಟಡದ ಮೇಲ್ಚಾವಣಿ ಮೇಲೆ ಮಲಗಿದ್ದ ಮಂಜುನಾಥ್ ತಲೆಗೆ ಹೊಡೆದಿದ್ದಾನೆ. ಈ ಹಲ್ಲೆಯಿಂದ ಇಬ್ಬರು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ.

ಈಗ ಬೀರೇಶ್ ಪೊಲೀಸರ ಅತಿಥಿಯಾಗಿದ್ದು ಕ್ಷುಲ್ಲಕ ಕಾರಣಕ್ಕೆ ಎರಡು ಜೀವಗಳ ಬಲಿ ಪಡೆದು ಕಂಬಿ ಎಣಿಸುವ ಪರಿಸ್ಥಿತಿ ಬಂದೊದಗಿದೆ.






ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

40 minutes ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

4 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

4 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

5 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

12 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

13 hours ago