ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ|raksha university


ಶಿವಮೊಗ್ಗ : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮತ್ತೊಂದು ಕ್ಯಾಂಪಸ್‌ ಶಿವಮೊಗ್ಗದಲ್ಲಿ ಈ ವರ್ಷದಿಂದ ಆರಂಭವಾಗುತ್ತಿದೆ.

ಪೊಲೀಸಿಂಗ್ ಮತ್ತು ಆಂತರಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ವಿಷಯಗಳನ್ನು ಈ ವಿಶ್ವವಿದ್ಯಾಲಯ ಒಳಗೊಂಡಿದ್ದು, ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.



ಈ ಬಗ್ಗೆ ವಿವಿಯ ಶಿವಮೊಗ್ಗ ಕ್ಯಾಂಪಸ್‌ನ ಕ್ರಿಮಿನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯಶ್ರೀ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಆರಂಭಿಸಲಾಗುತ್ತಿದೆ. ಈಗಾಗಲೇ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಇದರ ಪ್ರಯೋಜನ ಪಡೆಯಬೇಕು ತಿಳಿಸಿದ್ದಾರೆ.

ರಕ್ಷಣಾ ವಿಷಯಕ್ಕೆ ಸಂಬಂಧಿಸಿದ ಶಿಕ್ಷಣವನ್ನು ಕೊಡುವ ಏಕೈಕ ವಿಶ್ವವಿದ್ಯಾಲಯ ಆರ್‌ಆರ್‌ಯು ಆಗಿದೆ. ಪೊಲೀಸ್ ಸೈನ್ಸ್, ಕಾನೂನು, ವಿಧಿವಿಜ್ಞಾನ, ಡಿಫೆನ್ಸ್ ಮತ್ತು ಅದರ ಅಧ್ಯಯನ, ಕ್ರಿಮಿನಾಲಜಿ (ಅಪರಾಧಶಾಸ್ತ್ರ), ಸೈಬರ್, ಫೊರೆನ್ಸಿಕ್, ಮಾಹಿತಿ ತಂತ್ರಜ್ಞಾನ, ಸೈಬರ್ ಸೆಕ್ಯುರಿಟಿ ಮುಂತಾದ ವಿಷಯಗಳಲ್ಲಿ ಪದವಿ ಮತ್ತು ಉನ್ನತ ಶಿಕ್ಷಣ ಪಡೆಯಲು ಅವಕಾಶವಿದೆ. ಸಂಶೋಧನೆ ನಡೆಸುವವರಿಗೂ ಇದು ಉಪಯೋಗಕಾರಿಯಾಗಿದೆ ಎಂದು ಹೇಳಿದರು.

ವಿವಿಯು ಸ್ಕಾಲರ್‌ಶಿಪ್, ಉದ್ಯೋಗ, ಹಣಕಾಸು ನೆರವನ್ನು ವಿದ್ಯಾರ್ಥಿಗಳಿಗೆ ಒದಗಿಸುತ್ತದೆ. ಪಿಯು ಪಾಸಾದವರಿಗೆ ಒಂದು ವರ್ಷದ ಡಿಪ್ಲೊಮಾ ಕೋರ್ಸ್‌ ಲಭ್ಯವಿದೆ. ಜತೆಗೆ 4 ವರ್ಷಗಳ ಸೆಕ್ಯುರಿಟಿ ಮ್ಯಾನೇಜ್‌ಮೆಂಟ್ ಪದವಿ ಪಡೆಯಲು ಅವಕಾಶವಿದೆ. ಪದವಿ ಪೂರೈಸಿದವರಿಗೆ ಒಂದು ವರ್ಷದ ಪೊಲೀಸ್ ಸೈನ್ಸ್ ಮ್ಯಾನೇಜ್‌ಮೆಂಟ್ ಅಧ್ಯಯನಕ್ಕೆ ಅವಕಾಶವಿದೆ. ಇದರ ಹೊರತಾಗಿ ಪಿಯು ಪಾಸಾದವರಿಗೆ ಕಾರ್ಪೊರೇಟ್ ಸೆಕ್ಯುರಿಟಿ ಮ್ಯಾನೇಜ್‌ಮೆಂಟ್, ಕೋಸ್ಟಲ್ ಸೆಕ್ಯುರಿಟಿ ಮತ್ತು ಲಾ ಎನ್‌ಫೋರ್ಸ್ಮೆಂಟ್, ಫಿಸಿಕಲ್ ಫಿಟ್ ನೆಸ್ ಮ್ಯಾನೇಜ್‌ಮೆಂಟ್ ಮೊದಲಾದ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಅಧ್ಯಯನ ಮಾಡುವ ಅವಕಾಶವಿದೆ ಎಂದರು.

ವಿದ್ಯಾರ್ಥಿಗಳಿಗೆ ಮೆರಿಟ್ ಆಧಾರದಲ್ಲಿ ಪ್ರವೇಶ ನೀಡಲಾಗುವುದು. ಹಾಸ್ಟೆಲ್ ವ್ಯವಸ್ಥೆ ಇರುತ್ತದೆ. ಇಲ್ಲಿ ಅಧ್ಯಯನ ಮಾಡಿದವರಿಗೆ ಪೊಲೀಸ್ ನೇಮಕಾತಿ ಮತ್ತು ರಕ್ಷಣಾ ಇಲಾಖೆಯ ನೇಮಕಾತಿಯಲ್ಲಿ ಹೆಚ್ಚಿನ ಆದ್ಯತೆ ಸಿಗಲಿದೆ. ಉನ್ನತ ದೇಶಭಕ್ತಿ, ಕೌಶಲ್ಯ, ಶಿಸ್ತು, ನೈತಿಕತೆಯನ್ನು ಯುವಕರಲ್ಲಿ ಬೆಳೆಸುವ ಶಿಕ್ಷಣ ಇದಾಗಿದೆ. ಇಲ್ಲಿ ತರಬೇತಿಯನ್ನು ನಿವೃತ್ತ ಮತ್ತು ಹಾಲಿ ಸೇವೆಯಲ್ಲಿರುವ ಉನ್ನತಾಧಿಕಾರಿಗಳಿಂದ ಕೊಡಿಸಲಾಗುವುದು. ಮಾನಸಿಕ ಮತ್ತು ದೈಹಿಕ ಸದೃಢತೆಗೆ ಹೆಚ್ಚಿನ ಒತ್ತು ಕೊಡಲಾಗುವುದು. ಕರ್ನಾಟಕದವರಿಗೆ ಹೆಚ್ಚಿನ ಉದ್ಯೋಗಾವಕಾದ ಸೌಲಭ್ಯ ಇದರಿಂದ ಸಿಗಲಿದೆ ಎಂದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

13 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

15 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

18 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

18 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

19 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

19 hours ago