“ಶಾಸಕ ಗೋಪಾಲಕೃಷ್ಣ ಬೇಳೂರು ನಾಡಕಛೇರಿ ದಿಢೀರ್ ಭೇಟಿ’’
ರಿಪ್ಪನ್ಪೇಟೆ;-ಕೆರೆಹಳ್ಳಿ ಹೋಬಳಿ ಕಛೇರಿಗೆ ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಮಯಕ್ಕೆ ಸರಿಯಾಗಿ ಕಛೇರಿಗೆ ಅಧಿಕಾರಿಗಳು ಬರುತ್ತಿಲ್ಲ ಮತ್ತು ಗ್ರಾಮ ಸಹಾಯಕ ಪ್ರವೀಣ್ ಎಂಬಾತನ ವಿರುದ್ಧ ಸಾರ್ವಜನಿಕರಿಂದ ಸಾಕಷ್ಟು ದೂರುಗಳಿವೆ ಎಲ್ಲಿದ್ದಾನೆ ಎಂದು ಪ್ರಶ್ನಿಸಿದಾಗ ಉಪತಹಶೀಲ್ದಾರ್ ಊಟಕ್ಕೆ ಹೋಗಿದ್ದಾನೆ ಬಂದಿಲ್ಲ ಎಂಬ ಉತ್ತರ ನಿಮ್ಮ ಊಟದ ಸಮಯ ಎಷ್ಟು ಈಗ ಎಷ್ಟು ಸಮಯ ಎಂದಾಗ ಗ್ರಾಮ ಲೆಕ್ಕಾಧಿಕಾರಿ ಹೊಸನಗರಕ್ಕೆ ಮುಟೇಷನ್ ದಾಖಲೆ ತರಲು ಕಳುಹಿಸಿದೆ ಎಂದು ಹೇಳಿ ಸಮಜಾಯಿಸಿ ನೀಡಿದರು.
ಶೇಷಪ್ಪ ಎಂಬುವವರು ಶಾಸಕರ ಬಳಿ ಬೆಳಗ್ಗೆಯಿಂದ ಗ್ರಾಮ ಸಹಾಯಕ ಬೆಳಗ್ಗೆಯಿಂದಲೂ ಕಛೇರಿಗೆ ಬಂದಿಲ್ಲ ಎಂದು ಹೇಳಿದಾಗ ಯಾರು ಯಾಕೆ ಬಂದಿಲ್ಲ ಎಂದು ಕೇಳಿ ಈ ರೀತಿಯಲ್ಲಿ ಸಾರ್ವಜನಿಕರ ದೂರುಗಳು ಬಂದರೆ ತಮ್ಮ ವಿರುದ್ದ ಕ್ರಮ ಜರುಗಿಸಬೇಕಾಗುತ್ತದೆಂದು ಎಚ್ಚರಿಕೆ ನೀಡಿದರು.
ಅಲ್ಲದೆ ಲೋಕೋಪಯೋಗಿ ಇಲಾಖೆಯ ಕಟ್ಟಡದಲ್ಲಿ ಹೋಬಳಿ ಕಛೇರಿ ನಡೆಸಲಾಗುತ್ತಿದ್ದು ಕಟ್ಟಡ ಶಿಥಿಲವಾಗಿದೆ ಎಂದು ಪತ್ರಕರ್ತರು ಗಮನಸೆಳೆಯುವುದರೊಂದಿಗೆ ಈ ಶಿಥಿಲ ಕಟ್ಟಡವನ್ನು ತೆರವುಗೊಳಿಸಿ ಇಲ್ಲಿಯೇ ಹೊಸಕಟ್ಟಡ ನಿರ್ಮಿಸಿ ಹೋಬಳಿ ಕಛೇರಿಯನ್ನು ಇಲ್ಲಿ ಮಾಡಿದರೆ ದೂರ ದೂರುಗಳಿಂದ ಬಂದು ಹೋಗುವವರಿಗೆ ತುಂಬ ಅನುಕೂಲವಾಗುತ್ತದೆಂದು ಹೇಳಿದಾಗ ಸ್ಪಂದಿಸಿದ ಶಾಸಕ ಗೋಪಾಲಕೃಷ್ನ ಬೇಳೂರು ತುರ್ತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಹೋಬಳಿ ಕಛೇರಿಗೆ ಬರುವ ರೈತಾಪಿ ವರ್ಗಕ್ಕೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ ಎಂದು ಹೇಳಿ ಸಾರ್ವಜನಿಕರಿಂದ ದೂರುಗಳು ಬಂದರೇ ಸುಮ್ಮನಿರಲು ಸಾಧ್ಯವಿಲ್ಲ ಎಂದು ಉಪತಹಶೀಲ್ದಾರ್ ಹುಚ್ಚರಾಯಪ್ಪಗೆ ವಾರ್ನಿಂಗ್ ಮಾಡಿದರು.
ಈ ಸಂದರ್ಭದಲ್ಲಿ ಅರಸಾಳು ಗ್ರಾ.ಪಂ. ಮಾಜಿ ಅಧ್ಯಕ್ಷ ಉಮಾಕರ್,ಗ್ರಾಪಂ ಸದಸ್ಯರಾದ ಆಸೀಫ಼್ ಭಾಷಾಸಾಬ್ ಡಿ.ಈ.ಮಧುಸೂದನ್, ಗಣಪತಿ,ಮುಖಂಡರಾದ ಹೆಚ್.ಎನ್.ಉಮೇಶ್, ಶ್ರೀಧರ,
ರಾಜುಗೌಡ,ಡಾಕಪ್ಪಚಂದಾಳದಿಂಬ ,ಶಿವಪ್ಪ ವಡಾಹೊಸಳ್ಳಿ, ಉಪತಹಶೀಲ್ದಾರ್ ಹುಚ್ಚರಾಯಪ್ಪ, ಗ್ರಾಮಲೆಕ್ಕಾಧಿಕಾರಿಗಳಾದ ರೇಣುಕಯ್ಯ,ಇನ್ನಿತರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್